Sunday, December 14, 2025
Sunday, December 14, 2025

S.N. Channabasappa ಗೋಪಶೆಟ್ಟಿಕೊಪದಲ್ಲಿ 1836 ಮನೆಗಳ ನಿರ್ಮಾಣ ತುರ್ತಾಗಿ ಆರಂಭಿಸಿ- ಶಾಸಕ ಚೆನ್ನಿ

Date:

S.N. Channabasappa ಗೋಪಶೆಟ್ಟಿಕೊಪ್ಪದಲ್ಲಿ 1836 ಮನೆಗಳ ನಿರ್ಮಾಣಕ್ಕೆ ತುರ್ತಾಗಿ ಕಾಮಗಾರಿ ಆರಂಭಿಸಬೇಕು. ಗೋವಿಂದಾಪುರದಲ್ಲಿ ಈಗಾಗಲೇ ನಿರ್ಮಿಸಿ ಹಂಚಿಕೆ ಮಾಡಲಾಗಿರುವ 724 ಮನೆಗಳಿಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಪ್ರತ್ಯೇಕ ವಿದ್ಯುತ್ ಸರಬರಾಜು ಯೋಜನೆ, ಕಸವಿಲೇವಾರಿ ವಾಹನವನ್ನು ಒದಗಿಸಬೇಕು. ಉಳಿದ ಮನೆಗಳ ನಿರ್ಮಾಣಕ್ಕೆ ತುರ್ತಾಗಿ ಕ್ರಮವಹಿಸಲು ಕಾಲಮಿತಿಯನ್ನು ಶಾಸಕ ಎಸ್ ಎನ್ ಚನ್ನಬಸಪ್ಪ ನಿಗದಿ ಪಡಿಸಲು ಸೂಚಿಸಿದರು.

ಅವರು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಲ್ಲಿ ಮಾದರಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ ೪೮೩೬ ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದರು.

ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್‌ರಾಜ್ ಸಿಂಗ್, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಸುಶೀಲಮ್ಮ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಹಾನಗರ ಪಾಲಿಕೆ ಆಯುಕ್ತೆ ಡಾ|| ಕವಿತಾ ಹಾಗೂ ಆಶ್ರಯ ಯೋಜನೆಯ ಅಧಿಕಾರಿಗಳೊಂದಿಗೆ ಈ ಸಭೆ ನಡೆಯಿತು.

S.N. Channabasappa ಅತೀವೃಷ್ಠಿ ಹಾನಿಯಿಂದ ಮನೆಗಳು ಬಿದ್ದಿರುವ ಬಗ್ಗೆ ತುರ್ತಾಗಿ ಪರಿಹಾರ ನೀಡಲು ಮತ್ತು ಅನಧಿಕೃತ ಮನೆಗಳಿಗೆ ವಿಶೇಷ ಪರಿಹಾರ ಒದಗಿಸಬೇಕು. ಕೊಳಚೆ ಅಭಿವೃದ್ಧಿ ಮಂಡಳಿಯಿಂದ ಹಕ್ಕುಪತ್ರ ನೀಡಲು ಬಾಕಿಯಿರುವ ಪ್ರಕರಣಗಳನ್ನು ತುರ್ತಾಗಿ ಕ್ರಮವಹಿಸಬೇಕು. ಎಂದು ಸೂಚಿಸಿದರು.
ಮಹಾನಗರ ಪಾಲಿಕೆ, ಮೆಸ್ಕಾಂ. ನೀರು ಸರಬರಾಜು, ಸ್ಲಂ ಬೋರ್ಡ್ನ ಅಧಿಕಾರಿಗಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...