Thursday, March 19, 2026
Thursday, March 19, 2026

Wayanad Landslide ವಯನಾಡಿನ ದುರಂತದಲ್ಲಿ ಬದುಕಿದ ಅನಾಥ ಮಗುವನ್ನ ದತ್ತು ಸ್ವೀಕರಿಸಲು ಮುಂದಾದ ದಂಪತಿ

Date:

Wayanad Landslide ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದ ಪ್ರದೇಶದಿಂದ ನಿಮಿಷಕ್ಕೊಂದು ನೋವಿನ ಕಥೆಗಳು ಕೇಳಿಬರುತ್ತಿರುವ ನಡುವೆ ಮಾನವೀಯ ವಿಚಾರವೊಂದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಪ್ರವಾಹದಲ್ಲಿ ಅನಾಥವಾಗಿದ್ದ ಮಗುವನ್ನು ದತ್ತು ತೆಗೆದುಕೊಳ್ಳಲು ನಾಲ್ಕು ಮಕ್ಕಳನ್ನು ಹೊಂದಿರುವ ದಂಪತಿಗಳು ಮುಂದೆ ಬಂದಿದ್ದಾರೆ ಎಂದು ವರದಿ ಮಾಡಿದೆ.

ಜುಲೈ 30ರ ಬೆಳಿಗ್ಗೆ ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತಗಳು 300ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದ್ದು, 200 ಕ್ಕೂ ಹೆಚ್ಚು ಜನರಿಗಾಗಿ ತೀವ್ರ ಶೋಧ ನಡೆಯುತ್ತಿದೆ ಎಂದು ವರದಿಯಾಗಿದೆ.

Wayanad Landslide ದುರಂತದ ಹಿನ್ನೆಲೆಯಲ್ಲಿ, ಇಡುಕ್ಕಿಯ ಮಹಿಳೆ ಭಾವನಾ ಸಜಿನ್ ಅವರು ಭೂಕುಸಿತ ಪೀಡಿತ ಪ್ರದೇಶದಲ್ಲಿ ಅನಾಥ ನವಜಾತ ಶಿಶುಗಳಿಗೆ ಹಾಲುಣಿಸಲು ಸಾಮಾಜಿಕ ಮಾಧ್ಯಮಗಳ ಮೂಲಕ ಸ್ವಯಂಪ್ರೇರಿತರಾಗಿದ್ದರು. ಭಾವನಾ ಅವರ ಘೋಷಣೆಯ ಬೆನ್ನಲ್ಲೇ, ವಯನಾಡ್‌ನ ದಂಪತಿಗಳು ವಿಪತ್ತು ವಲಯದಿಂದ ಅನಾಥ ಮಗುವನ್ನು ದತ್ತು ತೆಗೆದುಕೊಳ್ಳಲು ಸಿದ್ಧರಿದ್ದಾರೆ ಎಂದು ಘೋಷಿಸಿದರು.

ಸಜಿತ್ (43) ಮತ್ತು ಅವರ ಪತ್ನಿ ನಫೀಜಾ (40) ದತ್ತು ಸ್ವೀಕಾರ ಮಾಡುವ ಮೊದಲು, ಅವರು ಮಗುವಿಗೆ ಚಿಕ್ಕು ಎಂದು ಹೊಸ ಹೆಸರನ್ನು ಆಯ್ಕೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...