Saturday, December 6, 2025
Saturday, December 6, 2025

Wayanad Landslide ವಯನಾಡಿನ ದುರಂತದಲ್ಲಿ ಬದುಕಿದ ಅನಾಥ ಮಗುವನ್ನ ದತ್ತು ಸ್ವೀಕರಿಸಲು ಮುಂದಾದ ದಂಪತಿ

Date:

Wayanad Landslide ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದ ಪ್ರದೇಶದಿಂದ ನಿಮಿಷಕ್ಕೊಂದು ನೋವಿನ ಕಥೆಗಳು ಕೇಳಿಬರುತ್ತಿರುವ ನಡುವೆ ಮಾನವೀಯ ವಿಚಾರವೊಂದು ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಪ್ರವಾಹದಲ್ಲಿ ಅನಾಥವಾಗಿದ್ದ ಮಗುವನ್ನು ದತ್ತು ತೆಗೆದುಕೊಳ್ಳಲು ನಾಲ್ಕು ಮಕ್ಕಳನ್ನು ಹೊಂದಿರುವ ದಂಪತಿಗಳು ಮುಂದೆ ಬಂದಿದ್ದಾರೆ ಎಂದು ವರದಿ ಮಾಡಿದೆ.

ಜುಲೈ 30ರ ಬೆಳಿಗ್ಗೆ ವಯನಾಡ್‌ನಲ್ಲಿ ಸಂಭವಿಸಿದ ಭೂಕುಸಿತಗಳು 300ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದ್ದು, 200 ಕ್ಕೂ ಹೆಚ್ಚು ಜನರಿಗಾಗಿ ತೀವ್ರ ಶೋಧ ನಡೆಯುತ್ತಿದೆ ಎಂದು ವರದಿಯಾಗಿದೆ.

Wayanad Landslide ದುರಂತದ ಹಿನ್ನೆಲೆಯಲ್ಲಿ, ಇಡುಕ್ಕಿಯ ಮಹಿಳೆ ಭಾವನಾ ಸಜಿನ್ ಅವರು ಭೂಕುಸಿತ ಪೀಡಿತ ಪ್ರದೇಶದಲ್ಲಿ ಅನಾಥ ನವಜಾತ ಶಿಶುಗಳಿಗೆ ಹಾಲುಣಿಸಲು ಸಾಮಾಜಿಕ ಮಾಧ್ಯಮಗಳ ಮೂಲಕ ಸ್ವಯಂಪ್ರೇರಿತರಾಗಿದ್ದರು. ಭಾವನಾ ಅವರ ಘೋಷಣೆಯ ಬೆನ್ನಲ್ಲೇ, ವಯನಾಡ್‌ನ ದಂಪತಿಗಳು ವಿಪತ್ತು ವಲಯದಿಂದ ಅನಾಥ ಮಗುವನ್ನು ದತ್ತು ತೆಗೆದುಕೊಳ್ಳಲು ಸಿದ್ಧರಿದ್ದಾರೆ ಎಂದು ಘೋಷಿಸಿದರು.

ಸಜಿತ್ (43) ಮತ್ತು ಅವರ ಪತ್ನಿ ನಫೀಜಾ (40) ದತ್ತು ಸ್ವೀಕಾರ ಮಾಡುವ ಮೊದಲು, ಅವರು ಮಗುವಿಗೆ ಚಿಕ್ಕು ಎಂದು ಹೊಸ ಹೆಸರನ್ನು ಆಯ್ಕೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...