Wednesday, October 2, 2024
Wednesday, October 2, 2024

Amith Shah ಕೇರಳ ಭೂಕುಸಿತ ದ ಬಗ್ಗೆ ಕೇಂದ್ರ ಗೃಹಸಚಿವರ ಹೇಳಿಕೆ ದಿಕ್ಕು ತಪ್ಪಿಸುವಂತಿದೆ- ಕಾಂಗ್ರೆಸ್ ಜೈರಾಮ್ ರಮೇಶ್ ಪ್ರತಿಕ್ರಿಯೆ

Date:

Amit Shah ವಯನಾಡ್‌ನಲ್ಲಿ ಭೂಕುಸಿತದ ಸಾಧ್ಯತೆ ಕುರಿತು ನೀಡಿದ್ದ ಎಚ್ಚರಿಕೆಯನ್ನು ಕೇರಳ ಸರ್ಕಾರ ಕಡೆಗಣಿಸಿದೆ ಎಂದು ಹೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯ ದಿಕ್ಕು ತಪ್ಪಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದೆ.
ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, “ಅಮಿತ್ ಶಾ ನೀಡಿರುವ ಹೇಳಿಕೆಯನ್ನು ವಿಸ್ಕೃತವಾಗಿ ಪರಿಶೀಲಿಸಲಾಗಿದೆ. ಅವರು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ರಾಜ್ಯಸಭೆಯ ಹಾದಿ ತಪ್ಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.
ರಾಜ್ಯಸಭೆಯ ಕಾಂಗ್ರೆಸ್ ಉಪನಾಯಕ ಪ್ರಮೋದ್ ತಿವಾರಿ ಮತ್ತು ಹಿರಿಯ ಸಂಸದ ದಿಗ್ವಿಜಯ ಸಿಂಗ್ ಸಹಿ ಮಾಡಿರುವ ಪತ್ರದಲ್ಲಿ, ಸಚಿವರು ಅಥವಾ ಸಂಸದರು ಸದನದ ದಿಕ್ಕು ತಪ್ಪಿಸುವುದು ಹಕ್ಕುಚ್ಯುತಿ ಮತ್ತು ಸದನಕ್ಕೆ ಮಾಡುವ ಅವಮಾನವಾಗಿದೆ ಎಂದು ಹೇಳಲಾಗಿದೆ.
ಕಳೆದ ಬುಧವಾರ ವಯನಾಡ್ ಭೂಕುಸಿತದ ಕುರಿತು ರಾಜ್ಯಸಭೆಯಲ್ಲಿ ಗಮನ ಸೆಳೆಯುವ ವೇಳೆ ಮಧ್ಯಪ್ರವೇಶಿಸಿದ ಅಮಿತ್ ಶಾ, ಜುಲೈ 23, 24, 25 ಮತ್ತು 26ರಂದು ಮಳೆ ಸಂಬಂಧ ಕೇಂದ್ರ ಸರ್ಕಾರ ನೀಡಿದ್ದ ಪೂರ್ವ ಎಚ್ಚರಿಕೆಗಳನ್ನು ಕೇರಳ ಸರ್ಕಾರ ಕಡೆಗಣಿಸಿತ್ತು ಎಂದಿದ್ದರು.
Amit Shah ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅಮಿತ್ ಶಾ ಅವರ ಆರೋಪಗಳನ್ನು ಅಲ್ಲಗಳೆದಿದ್ದು, 48 ಗಂಟೆಗಳಲ್ಲಿ 572 ಮಿಮೀ ದಾಖಲೆ ಮಳೆಯಾಗಿದೆ. ಆದರೆ, ನಮಗೆ ಎರಡು ದಿನಗಳಲ್ಲಿ 115 ಮಿಮೀ ನಿಂದ 204 ಮಿಮೀ ಮಳೆಯಾಗುವ ಎಚ್ಚರಿಕೆ ನೀಡಲಾಗಿತ್ತು. ಜುಲೈ 30 ಬೆಳಗಿನ ಜಾವದವರೆಗೆ ಭೂಕುಸಿತ ಸಂಭವಿಸಿದ ಪ್ರದೇಶಕ್ಕೆ ಐಎಂಡಿ ಆರೆಂಜ್ ಅಲರ್ಟ್ ನೀಡಿತ್ತು ಎಂದಿದ್ದಾರೆ. ದುರಂತ ಸಂಭವಿಸಿದ ನಂತರವೇ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯೂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...