Thursday, March 19, 2026
Thursday, March 19, 2026

Amith Shah ಕೇರಳ ಭೂಕುಸಿತ ದ ಬಗ್ಗೆ ಕೇಂದ್ರ ಗೃಹಸಚಿವರ ಹೇಳಿಕೆ ದಿಕ್ಕು ತಪ್ಪಿಸುವಂತಿದೆ- ಕಾಂಗ್ರೆಸ್ ಜೈರಾಮ್ ರಮೇಶ್ ಪ್ರತಿಕ್ರಿಯೆ

Date:

Amit Shah ವಯನಾಡ್‌ನಲ್ಲಿ ಭೂಕುಸಿತದ ಸಾಧ್ಯತೆ ಕುರಿತು ನೀಡಿದ್ದ ಎಚ್ಚರಿಕೆಯನ್ನು ಕೇರಳ ಸರ್ಕಾರ ಕಡೆಗಣಿಸಿದೆ ಎಂದು ಹೇಳುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯ ದಿಕ್ಕು ತಪ್ಪಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದೆ.
ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, “ಅಮಿತ್ ಶಾ ನೀಡಿರುವ ಹೇಳಿಕೆಯನ್ನು ವಿಸ್ಕೃತವಾಗಿ ಪರಿಶೀಲಿಸಲಾಗಿದೆ. ಅವರು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ರಾಜ್ಯಸಭೆಯ ಹಾದಿ ತಪ್ಪಿಸಿದ್ದಾರೆ” ಎಂದು ಆರೋಪಿಸಿದ್ದಾರೆ.
ರಾಜ್ಯಸಭೆಯ ಕಾಂಗ್ರೆಸ್ ಉಪನಾಯಕ ಪ್ರಮೋದ್ ತಿವಾರಿ ಮತ್ತು ಹಿರಿಯ ಸಂಸದ ದಿಗ್ವಿಜಯ ಸಿಂಗ್ ಸಹಿ ಮಾಡಿರುವ ಪತ್ರದಲ್ಲಿ, ಸಚಿವರು ಅಥವಾ ಸಂಸದರು ಸದನದ ದಿಕ್ಕು ತಪ್ಪಿಸುವುದು ಹಕ್ಕುಚ್ಯುತಿ ಮತ್ತು ಸದನಕ್ಕೆ ಮಾಡುವ ಅವಮಾನವಾಗಿದೆ ಎಂದು ಹೇಳಲಾಗಿದೆ.
ಕಳೆದ ಬುಧವಾರ ವಯನಾಡ್ ಭೂಕುಸಿತದ ಕುರಿತು ರಾಜ್ಯಸಭೆಯಲ್ಲಿ ಗಮನ ಸೆಳೆಯುವ ವೇಳೆ ಮಧ್ಯಪ್ರವೇಶಿಸಿದ ಅಮಿತ್ ಶಾ, ಜುಲೈ 23, 24, 25 ಮತ್ತು 26ರಂದು ಮಳೆ ಸಂಬಂಧ ಕೇಂದ್ರ ಸರ್ಕಾರ ನೀಡಿದ್ದ ಪೂರ್ವ ಎಚ್ಚರಿಕೆಗಳನ್ನು ಕೇರಳ ಸರ್ಕಾರ ಕಡೆಗಣಿಸಿತ್ತು ಎಂದಿದ್ದರು.
Amit Shah ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಅಮಿತ್ ಶಾ ಅವರ ಆರೋಪಗಳನ್ನು ಅಲ್ಲಗಳೆದಿದ್ದು, 48 ಗಂಟೆಗಳಲ್ಲಿ 572 ಮಿಮೀ ದಾಖಲೆ ಮಳೆಯಾಗಿದೆ. ಆದರೆ, ನಮಗೆ ಎರಡು ದಿನಗಳಲ್ಲಿ 115 ಮಿಮೀ ನಿಂದ 204 ಮಿಮೀ ಮಳೆಯಾಗುವ ಎಚ್ಚರಿಕೆ ನೀಡಲಾಗಿತ್ತು. ಜುಲೈ 30 ಬೆಳಗಿನ ಜಾವದವರೆಗೆ ಭೂಕುಸಿತ ಸಂಭವಿಸಿದ ಪ್ರದೇಶಕ್ಕೆ ಐಎಂಡಿ ಆರೆಂಜ್ ಅಲರ್ಟ್ ನೀಡಿತ್ತು ಎಂದಿದ್ದಾರೆ. ದುರಂತ ಸಂಭವಿಸಿದ ನಂತರವೇ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆಯೂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...