Wednesday, October 2, 2024
Wednesday, October 2, 2024

PSI Parashuram ಯಾದಗಿರಿ ಪಿಎಸ್ ಐ ಪರಶುರಾಮ್ ಹಠಾತ್ ಸಾವು ಸ್ಥಳೀಯ ಶಾಸಕರ ಮೇಲೆ ಗಂಭೀರ ಆರೋಪ ಮಾಡಿದ ಪತ್ನಿ

Date:

PSI Parashuram ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದ್ದು, ಆದರೆ ಅವರ ಪತ್ನಿ ಈ ಸಂಬಂಧ ಹಲವು ಆರೋಪಗಳನ್ನು ಮಾಡಿದ್ದಾರೆ.

ಪರಶುರಾಮ ಅವರು ಸೈಬರ್ ಕ್ರೈಂ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ ಸಂಜೆ ಪೊಲೀಸ್ ಕ್ವಾಟ್ರಸ್‌ನ ನಿವಾಸದಲ್ಲಿ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಆದರೆ, ಈ ಪ್ರಕರಣವು ಈಗ ರಾಜ್ಯದ ಗಮನ ಸೆಳೆಯುತ್ತಿದ್ದು, ಹೊಸ ತಿರುವು ಪಡೆದುಕೊಂಡಿದೆ. “ನನ್ನ ಪತಿ, ಪಿಎಸ್‌ಐ ಪರಶುರಾಮ ಅವರ ಸಾವಿಗೆ ಯಾದಗಿರಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ ಹಾಗೂ ಅವರ ಮಗ ಸನ್ನೇ ಗೌಡ ಕಾರಣ” ಎಂದು ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿದ್ದಾರೆ.
ಈ ಸಂಬಂಧ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಗೀತಾ ಅವರಿಗೆ ದೂರು ಸಲ್ಲಿಸಿದ್ದು, ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಆಗ್ರಹಿಸಿದ್ದಾರೆ.
“ಪೋಸ್ಟಿಂಗ್‌ಗಾಗಿ ಲಕ್ಷ ಲಕ್ಷ ಹಣಕ್ಕೆ ಯಾದಗಿರಿ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಬೇಡಿಕೆ ಇಟ್ಟಿದ್ದರು. ಬಳಿಕ ನಿಯಮ ಬಾಹಿರವಾಗಿ ವರ್ಗಾವಣೆ ಮಾಡಿದ್ದರಿಂದ ಪರಶುರಾಮ ತೀವ್ರ ಒತ್ತಡಕ್ಕೆ ಒಳಗಾಗಿದ್ದರು. ಇದರಿಂದ ಅವರಿಗೆ ಹೃದಯಾಘಾತವಾಗಿದೆ. ಶಾಸಕರು ಮತ್ತು ಅವರ ಮಗ ವರ್ಗಾವಣೆಗೆ 30-40 ಲಕ್ಷ ರೂ. ಕೇಳಿದ್ದರು. ಅವರ ವಿರುದ್ದ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು. ಜಾತಿ ಮತ್ತು ಹಣಕ್ಕಾಗಿ ನಿಯತ್ತಿನ ಅಧಿಕಾರಿಯ ಸಾವಿಗೆ ಕಾರಣರಾಗಿದ್ದಾರೆ” ಎಂದು ಪತ್ನಿ ಶ್ವೇತಾ ಆರೋಪಿಸಿದ್ದಾರೆ.
PSI Parashuram “ಯಾದಗಿರಿ ನಗರ ಠಾಣೆಗೆ ಪೋಸ್ಟಿಂಗ್‌ಗಾಗಿ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಪಾಟೀಲ್ 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ, ಪರಶುರಾಮ 30 ಲಕ್ಷ ರೂ. ನೀಡಿ ಯಾದಗಿರಿ ನಗರಕ್ಕೆ ವರ್ಗಾವಣೆಯಾಗಿದ್ದರು. ಆದರೆ, ಒಂದು ವರ್ಷದ ಪೂರೈಸುವ ಮುನ್ನವೇ ಅವರನ್ನು ಮತ್ತೆ ಯಾದಗಿರಿ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಅವರು ಒತ್ತಡಕ್ಕೆ ಒಳಗಾಗಿದ್ದರು. ಸಾಲದ ಸುಳಿಗೆ ಸಿಲುಕಿದ್ದರು. ಶುಕ್ರವಾರ ಸಚಿವ ಪ್ರಿಯಾಂಕ್ ಖರ್ಗೆ ಜೊತೆಗೆ ಪೋನ್‌ನಲ್ಲಿ ಮಾತನಾಡಿದ್ದರು” ಎಂದು ಕುಟುಂಬಸ್ಥರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...