Sunday, May 3, 2026
Sunday, May 3, 2026

High Court ಸರ್ಕಾರಿ ನೌಕರರು ಆಫೀಸು ಹಾಜರಿ ತಕ್ಷಣ ತಮ್ಮ ಬಳಿಯ ನಗದು ಹಣ ಘೋಷಿಸಿ ದಾಖಲೆ ಮಾಡಬೇಕು- ಸರ್ಕಾರದ ಸುತ್ತೋಲೆ

Date:

High Court ಸರ್ಕಾರಿ ಕಚೇರಿಗಳಲ್ಲಿ ಲಂಚ, ಭ್ರಷ್ಟಾಚಾರದ ಆರೋಪ ಕೇಳಿ ಬರುತ್ತಲೇ ಇರುತ್ತದೆ. ಈ ಹಿನ್ನೆಲೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ತರಲು ಸರ್ಕಾರಿ ಕಚೇರಿಗಳಲ್ಲಿ ಹೈಕೋರ್ಟ್ ಆದೇಶದನ್ವಯ ನಗದು ಘೋಷಣೆ ರಿಜಿಸ್ಟರ್’ ನಿರ್ವಹಣೆ ಮಾಡಬೇಕೆಂದು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ.

ಎಲ್ಲಾ ರಾಜ್ಯ ಸರಕಾರಿ ಕಚೇರಿಗಳಲ್ಲಿ ನಗದು ಘೋಷಣೆ ರಿಜಿಸ್ಟರ್ ಅನ್ನು ನಿರ್ವಹಿಬೇಕು ಎಂದು ಸುತ್ತೋಲೆ ಹೊರಡಿಸಿದೆ. ಸರಕಾರಿ ಕಚೇರಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲಾ ನೌಕರರು ತಮ್ಮ ಬಳಿ ಇರುವ ನಗದು ಹಣವನ್ನು ಪ್ರತಿದಿನ ಬೆಳಿಗ್ಗೆ, ರಿಜಿಸ್ಟರ್ ನಲ್ಲಿ ಸ್ವಯಂ ಘೋಷಣೆ ಮಾಡಬೇಕು ಎಲ್ಲಾ ಸರಕಾರಿ ಕಚೇರಿಗಳಲ್ಲಿ, ನಿಗಮ ಮಂಡಳಿಗಳಲ್ಲಿ ನಗದು ಘೋಷಣಾ ವಹಿಯನ್ನು ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಈ ಮಧ್ಯೆ ಮೈಸೂರು ಮಹಾನಗರ ಪಾಲಿಕೆಯಲ್ಲಿ ದಿಢೀರ್ ತಪಾಸಣೆ ನಡೆಸಿದಾಗ ನೌಕರರು ನಗದು ಘೋಷಣಾ ರಿಜಿಸ್ಟರ್ ನಲ್ಲಿ ನಗದನ್ನು ದಾಖಲಿಸದೆ ಇರುವ ಪ್ರಸಂಗ ಬೆಳಕಿಗೆ ಬಂದಿತ್ತು. ವಿಚಾರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ತಪ್ಪಿತಸ್ಥ ನೌಕರರ ವಿರುದ್ಧ ಎಫ್ಐಆರ್ ದಾಖಲಿಸಿ ಮೈಸೂರಿನ ವಿಶೇಷ ಸೆಷನ್ಸ್ ನ್ಯಾಯಾಲಯದಲ್ಲಿ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಲೋಕಾಯುಕ್ತ ಅಧಿಕಾರಿಗಳು ದೋಷಾರೋಪಣ ಪತ್ರ ಸಲ್ಲಿಸಿದ ಬೆಳಕಿನಲ್ಲಿ ತಪ್ಪಿತಸ್ಥ ನೌಕರರ ವಿರುದ್ಧ ಇಲಾಖಾ ವಿಚಾರಣೆಯನ್ನು, ಕೂಡ ಕೈಗೊಳ್ಳಲಾಯಿತು.

High Court ಮೈಸೂರು ಮಹಾನಗರ ಪಾಲಿಕೆಯಲ್ಲಿ ನಗದು ಘೋಷಣ ವಹಿಯನ್ನು ನಿರ್ವಹಿಸದೇ ಇರುವುದರಿಂದ ತಾವು ನಗದು ಫೋಷಣೆ ಮಾಡಿಲ್ಲವೆಂಬ ಆರೋಪಿಗಳ ವಾದವನ್ನು ಪುರಸ್ಕರಿಸಿದ ವಿಶೇಷ ನ್ಯಾಯಾಲಯ ಅವರನು, ದೋಷ ಮುಕ್ತರನ್ನಾಗಿ ಮಾಡಿತ್ತು. ವಿಶೇಷ ನ್ಯಾಯಾಲಯದಲ್ಲಿ ಆರೋಪಿಗಳು ದೋಷ ಮುಕ್ತರಾದರೂ ಇಲಾಖಾ ವಿಚಾರಣೆ ಮುಂದುವರೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...