Friday, October 4, 2024
Friday, October 4, 2024

Department of Health and Family Welfare ಮಕ್ಕಳನ್ನ ಭಿಕ್ಷಾಟನೆ ತಳ್ಳುವುದು ಮಹಾಪರಾಧ-ಶ್ರೀಮತಿ ಆಶಾ

Date:

Department of Health and Family Welfare ನಮ್ಮ ಸಮಾಜವು ದುಷ್ಟ ಮನಸ್ಸಿನ ಜನರಿಂದ ತುಂಬಿದೆ.ಸಮಾಜದಲ್ಲಿ ಮಕ್ಕಳನ್ನು ಬಲವಂತವಾಗಿ ಬಿಕ್ಷಾಟನೆ, ಬಾಲ್ಯ ವಿವಾಹ, ಬಾಲ ಕಾರ್ಮಿಕ ಚಟುವಟಿಕೆಗಳಲ್ಲಿ ತೊಡಗುವಂತೆ ಪ್ರೇರೇಪಿಸುವುದು ಕಾನೂನಿಗೆ ವಿರುದ್ಧವಾದದ್ದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಮೇಲ್ವಿಚಾರಕರಾದ ಶ್ರೀಮತಿ ಆಶಾರವರು ವಿದ್ಯಾರ್ಥಿಗಳಿಗೆ ತಿಳಿಸಿದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು,ಜಿಲ್ಲಾ ರಕ್ಷಣಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ, ಶಿಕ್ಷಣ ಇಲಾಖೆ ಶಿವಮೊಗ್ಗ ಹಾಗೂ ಮಹಾರಾಣಿ ಪ್ರೌಢಶಾಲೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಮಕ್ಕಳ ಬಾಲ ಬಿಕ್ಷಾಟನೆ ಅರಿವು ಎಂಬ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಾ ಕೆಲವು ಮಕ್ಕಳು ಶಾಲೆಗೆ ಹೋಗುವ ಬದಲು ಪೋಷಕರು ತಮ್ಮ ಮಕ್ಕಳನ್ನು ಬಾಲ್ಯ ವಿವಾಹ ಮಾಡುವುದು, ಕಾರ್ಖಾನೆಗಳಲ್ಲಿ, ಹೊಲಗದ್ದೆಗಳಲ್ಲಿ, ಕೆಲಸಗಳನ್ನು ಮಾಡಲು ಕಳಿಸುತ್ತಾರೆ. ವಿದ್ಯಾರ್ಥಿಗಳಾದ ನೀವುಗಳು ಅಂತಹ ವಿಚಾರಗಳು ತಮ್ಮ ಗಮನಕ್ಕೆ ಬಂದರೆ ತಮ್ಮ ಶಾಲೆ ಶಿಕ್ಷಕರಿಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯವಾಣಿಗೆ ತಿಳಿಸಿದರೆ, ಇಂತಹ ಅನಿಷ್ಟ ಪದ್ಧತಿಯನ್ನು ನಿಲ್ಲಿಸಬಹುವುದು, ಇದರಿಂದ ಮಕ್ಕಳ ಉಜ್ವಲ ಭವಿಷ್ಯ ಹೊಂದಲು ಸಹಕಾರಿಯಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
Department of Health and Family Welfare ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿನೋಬ ನಗರದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಎಸ್. ಮತ್ತು ಪುನೀತ್ ದೊಡ್ಮನಿ, ವೈದ್ಯಾಧಿಕಾರಿಗಳಾದ ಶ್ರೀಮತಿ ಉಮಾ, ತಾಲೂಕು ನೋಡಲ್ ಅಧಿಕಾರಿಗಳಾದ ಭರತ್ ಎಸ್.ಎಂ., ಮಕ್ಕಳ ಸಹಾಯವಾಣಿ ಸಂಯೋಜಕರಾದ ಪ್ರಮೋದ್, ಮಹಾರಾಣಿ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಕರಿಬಸಪ್ಪ ಎನ್.ಅಧ್ಯಕ್ಷತೆ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಶಿಕ್ಷಕರುಗಳಾದ ನಾಗನಗೌಡ, ಮಲ್ಲೇಶಪ್ಪ ಡಿ. ಎಸ್., ಭೀಮಾ ನಾಯ್ಕ, ಶೋಭಾ ಹಾಗೂ ವಿದ್ಯಾರ್ಥಿಗಳು ಇನ್ನೂ ಮುಂತಾದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ಮಹೇಶ್ ಹುಲ್ಲತ್ತಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರೆ. ಶಿವಾನಂದ ಬಿ.ಸ್ವಾಗತಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...