Sunday, December 14, 2025
Sunday, December 14, 2025

Shimoga News ಶಾಸಕಿ ಬಲ್ಕೀ಼ಷ್ ಬಾನು ಅವರಿಗೆ ಹಾಡೋನಹಳ್ಳಿ ಗ್ರಾಮಸ್ಥರಿಂದ ಸನ್ಮಾನ

Date:

Shimoga News ಶಿವಮೊಗ್ಗ ತಾಲೂಕು ಹಾಡೋನಹಳ್ಳಿ ಗ್ರಾಮದಲ್ಲಿರುವ ತುಂಗಭದ್ರಾ ನದಿಯ ಸೋಪಾನಕಟ್ಟೆ ಹಾಗೂ ಗ್ರಾಮದಿಂದ ನದಿಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು ಅದನ್ನು ಸಿದ್ಧಪಡಿಸಿಕೊಡಲು ಅನುದಾನ ಬಿಡುಗಡೆ ಮಾಡಿಸುವಂತೆ
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ತಾಲೂಕ್ ಗ್ಯಾರಂಟಿ ಸಮಿತಿ ಸದಸ್ಯ ಡಿಸಿ ಜಗದೀಶ್ವರ್ ನೂತನ ವಿಧಾನ ಪರಿಷತ್ ಸದಸ್ಯರಾದ ಬಲ್ಕಿಶ್ ಬಾನು ಅವರಿಗೆ ಮಾನವಿ ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ನೂತನ ಶಾಸಕರಿಗೆ ಸನ್ಮಾನಿಸಿದ ಅವರು ಸುಮಾರು ವರ್ಷಗಳಿಂದ ಹಾಡೋನಹಳ್ಳಿ ಗ್ರಾಮದ ಜನತೆ ತುಂಗಭದ್ರ ನದಿಯ ಸೋಪಾನಕಟ್ಟೆಯನ್ನು ಬಳಸಿಕೊಳ್ಳಲು ಆಗುತ್ತಿಲ್ಲ. ರಸ್ತೆ ಸಂಪೂರ್ಣವಾಗಿ ಹಾಳಾಗಿದೆ.
Shimoga News ಮೆಟ್ಟಿಲು ಮಾರ್ಗದ ಈ ರಸ್ತೆಯ ಸಮಗ್ರ ದುರವಸ್ತಿ ಹಾಗೂ ಹೊಸ ಮಾರ್ಗ ನಿರ್ಮಾಣ ಮಾಡುವ ಜೊತೆಗೆ ಸೋಪಾನಕಟ್ಟೆಯನ್ನು ಗ್ರಾಮದ ಜನತೆ ಬಳಕೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲು ಕೋರಿದರು. ಸಕಾರಾತ್ಮಕವಾಗಿ
ಸ್ಪಂದಿಸಿದ ವಿಧಾನ ಪರಿಷತ್ ಶಾಸಕರಾದ ಬಲ್ಕೀಷ್ ಭಾನು ಅವರು ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸರ್ಕಾರದ ಮಟ್ಟದಲ್ಲಿ ಕಾಮಗಾರಿ ಕೈಗೊಳ್ಳಲು ವಿನಂತಿಸುವುದಾಗಿ ಹಾಗೂ ಕ್ರಮ ಕೈಗೊಳ್ಳುವುದಾಗಿ ಸೂಚಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಕೆ. ಎಸ್. ಈಶ್ವರಪ್ಪ, ಹೆಎಚ್.ಎಂ. ಮಧು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...