Sunday, December 14, 2025
Sunday, December 14, 2025

Rotary Club Shimoga ಶರಣ್ಯ ಸಂಸ್ಥೆಯಿಂದ ನಿರಾಶ್ರಿತ ರೋಗಿಗಳ ಆರೈಕೆ ಶ್ಲಾಘನೀಯ- ಕಿರಣ್ ಕುಮಾರ್

Date:

Rotary Club Shimoga ಶರಣ್ಯ ಸಂಸ್ಥೆಯು ನಿರಾಶಿತ ರೋಗಿಗಳಿಗೆ ವೈದ್ಯಕೀಯ ಸೌಲಭ್ಯಗಳೊಂದಿಗೆ ಸೇವೆ ನೀಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಅಭಿಪ್ರಾಯ ಪಟ್ಟರು.
ಗಾಜನೂರಿನಲ್ಲಿರುವ ಶರಣ್ಯ ಆರೈಕೆ ಕೇಂದ್ರಕ್ಕೆ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಹಾಗೂ ಆನ್ಸ್ ಕ್ಲಬ್ ಸದಸ್ಯರು ಭೇಟಿ ನೀಡಿ, ಶರಣ್ಯ ಸಂಸ್ಥೆಯು ರೋಗಿಗಳನ್ನು ಆರೈಕೆ ಮಾಡುತ್ತಿರುವವರ ಜೊತೆ ಇದ್ದು ಸಾಂತ್ವಾನಿಸಿ ಶರಣ್ಯ ಸಂಸ್ಥೆಯ ಅಧ್ಯಕ್ಷರು ಹಾಗೂ ಸಿಬ್ಬಂದಿಗಳೊಂದಿಗೆ ಸಂಸ್ಥೆ ನೀಡುತ್ತಿರುವ ಸೇವೆಗಳ ಬಗ್ಗೆ ಮಾಹಿತಿ ತಿಳಿಸಿದರು.
ಅನುಭವಿ ವೈದ್ಯರು ಹಾಗೂ ವೈದಿಕೀಯ ತಂಡ ಇಲ್ಲಿರುವುದು, ರೋಗಿಗಳಿಗೆ ಮನೆಯ ವಾತಾವರಣದೊಂದಿಗೆ ನೋಡಿಕೊಳ್ಳುತ್ತಿರುವುದು ಹೆಮ್ಮೆಯ ವಿಷಯ ಎಂದು ಹೇಳಿದರು.
ಶರಣ್ಯ ಸಂಸ್ಥೆಯ ಅಧ್ಯಕ್ಷ ಮಂಜುನಾಥ್, ಸಂಸ್ಥೆ ನೀಡುತ್ತಿರುವ ಎಲ್ಲಾ ಸೌಕರ್ಯಗಳ ಬಗ್ಗೆ ರೋಟರಿ ಸಂಸ್ಥೆಯ ಸದಸ್ಯರಿಗೆ ತಿಳಿಸಿ, ಶುಭ ಸಮಾರಂಭಗಳನ್ನು ರೋಗಿಗಳೊಂದಿಗೆ ಆಚರಿಸುವುದು ರೋಗಿಗಳಿಗೂ ಒಂದು ಉತ್ಸಾಹ ನೀಡುತ್ತದೆ. ಆದ್ದರಿಂದ ಯಾವುದೇ ಶುಭ ಸಂದರ್ಭಗಳಿಗೆ ನಮ್ಮ ಸಂಸ್ಥೆ ಕಾರ್ಯಕ್ರಮ ನಡೆಸಿಕೊಡುವುದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಸಂಸ್ಥೆಯ ವೈದ್ಯ ಡಾ|| ತಾನಾಜಿ ಮಾತನಾಡಿ, ರೋಗಿಗಳನ್ನು ನೋಡಿಕೊಳ್ಳಲಾಗದ ಸ್ಥಿತಿಯಲ್ಲಿ ನಮ್ಮ ಸಂಸ್ಥೆಗೆ ತರುತ್ತಾರೆ, ಆಗ ತುಂಬಾ ಕಾಳಜಿಯಿಂದ ನೋಡಿಕೊಳ್ಳುತ್ತೇವೆ. ತುಂಬಾ ಜನರು ಗುಣಮುಖರಾಗಿ ಮತ್ತೆ ಮನೆಗೆ ಹೋಗಿದ ಉದಾಹರಣೆಗಳೂ ಕೂಡ ಸಾಕಷ್ಟಿದೆ ಎಂದರು.
Rotary Club Shimoga ಇದೇ ಸಂದರ್ಭದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಶರಣ್ಯ ಆರೈಕೆ ಕೇಂದ್ರಕ್ಕೆ ರೋಟರಿಯನ್ ಕಿರಣ್ ಕುಮಾರ್ ಹಾಗೂ ರೋಟರಿಯನ್ ಧರ್ಮೇಂದ್ರ ಸಿಂಗ್ ಆರ್ಥಿಕ ನೆರವು ಮತ್ತು ಗಣೇಶ್ ಎಂ ಅಂಗಡಿಯವರಿಂದ ವಾಕರ್‌ನ್ನು ಕೊಡುಗೆಯಾಗಿ ನೀಡಿದರು. ರಾಜಶ್ರೀ ಬಸವರಾಜ್ ಮತ್ತು ದೀಪಾ ಜಯಶೀಲ ಶೆಟ್ಟಿ, ಜ್ಯೋತಿ ಶ್ರೀರಾಮ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಲಘು ಉಪಹಾರ ನೀಡಿದರು. ಆನ್ಸ್ ಕ್ಲಬ್ ನ ಅಧ್ಯಕ್ಷೆ ಗೀತಾ ಅವರು ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವರಿಗೆ ಬಟ್ಟೆಗಳನ್ನು ನೀಡಿದರು.
ಈ ವೇಳೆ ಕಾರ್ಯದರ್ಶಿ ಈಶ್ವರ್.ಬಿ.ವಿ, ಬಸವರಾಜ್, ಅಸಿಸ್ಟೆಂಟ್ ಗವರ್ನರ್ ರವಿ ಕೋಟೋಜಿ, ಜೋನಲ್ ಲೆಫ್ಟಿನೆಂಟ್ ಮಂಜುನಾಥ್ ಕದಂ, ಜೈಷೀಲ್ ಶೆಟ್ಟಿ , ಗುರುರಾಜ್, ಮಂಜುನಾಥ್ ಹೆಗಡೆ, ಬಲರಾಮ್, ಸಂತೋಷ್, ಗಣೇಶ್ ಅಂಗಡಿ, ರಾಜಶ್ರೀ ಬಸವರಾಜ್, ದೀಪ ಜೈಷೀಲ್ ಶೆಟ್ಟಿ, ಜ್ಯೋತಿ ಶ್ರೀರಾಮ್, ಆನ್ಸ್ ಕ್ಲಬ್ ಅಧ್ಯಕ್ಷೆ ಗೀತಾ ಜಗದೀಶ್, ಕಾರ್ಯದರ್ಶಿ ಶುಭ ಚಿದಾನಂದ್ ಹಾಗೂ ಶರಣ್ಯ ಸಿಬ್ಬಂದಿ ವರ್ಗದವರು ಆಡಳಿತ ಮಂಡಳಿಯ ಸದಸ್ಯರು ಇತರೆ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...