Wednesday, March 25, 2026
Wednesday, March 25, 2026

Public Health Campaigns ಜಿಲ್ಲೆಯಲ್ಲಿನ ಕ್ಲಿನಿಕ್ ಗಳಲ್ಲಿ ವೈದ್ಯಕೀಯ, ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Date:

Public Health Campaigns 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 3 ಕ್ಲಿನಿಕ್‌ಗಳಲ್ಲಿ ಖಾಲಿಯಿರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಎಂಬಿಬಿಎಸ್ ವೈದ್ಯರ -2 ಹುದ್ದೆಗೆ ಎಂಬಿಬಿಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂರ‍್ನ್ಶಿಪ್ ಪೂರೈಸಿರಬೇಕು.
ಕಿರಿಯ ಆರೋಗ್ಯ ಸಹಾಯಕ(ಆರೋಗ್ಯ ನಿರೀಕ್ಷಣಾಧಿಕಾರಿಗಳು)ರ-3 ಹುದ್ದೆಗೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು, ಕರ್ನಾಟಕ ರಾಜ್ಯದ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವಿವಿದ್ದೋದ್ದೇಶ ಮೂಲ ಆರೋಗ್ಯ ಕಾರ್ಯಕರ್ತರ ತರಬೇತಿಯನ್ನು ಪಡೆದಿರಬೇಕು.

ಅಥವಾ ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು. ಅಥವಾ ಪಿಯುಸಿ (ವಿಜ್ಞಾನ) ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 2 ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು.
ನೇಮಕಾತಿಯು ಮೇರಿಟ್ ಕಂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲಾಗುವುದು

ಆಸಕ್ತರು ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ. ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2-5 ವರ್ಷಗಳ ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಖಾಯಂ ವಿಳಾಸ ಹಾಗೂ ವಾಸ ಸ್ಥಳದ ಬಗ್ಗೆ ಮಹಾನಗರ ಪಾಲಿಕೆ/ಸಂಬಂಧಿಸಿದ ಪಂಚಾಯತ್‌ನಿಂದ ದೃಢೀಕರಣ ಪತ್ರ ಮತ್ತು ಸ್ವವಿವರಗಳೊಂದಿಗೆ ಆ.13 ರಂದು ಮಧ್ಯಾಹ್ನ 1.30ರೊಳಗಾಗಿ ಸಲ್ಲಿಸುವುದು.

Public Health Campaigns ಅದೇ ದಿನ ಸಂಜೆ 5.30ರವೆಗೆ ಎಲ್ಲಾ ಮೂಲ ದಾಖಲಾತಿಗಳ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-200337 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...