Monday, May 25, 2026
Monday, May 25, 2026

Samyukta Kisan Morcha ಈಗ ರೈತ ಸಂಘಟನೆಗಳಿಂದ ‘ ಕಾರ್ಪೋರೇಟ್ ಕಂಪನಿಗಳೆ ಕ್ವಿಟ್ ಇಂಡಿಯಾ’ ಚಳವಳಿ

Date:

Samyukta Kisan Morcha ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ದೇಶವ್ಯಾಪಿ ಕರೆಯಾದ ಕಾರ್ಪೊರೇಟ್ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ಹೋರಾಟದ ಅಂಗವಾಗಿ ಇಂದು ನಗರದ ರಾಯಲ್ ವೃತ್ತದ ಬಳಿ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಪ್ರತಿಭಟನೆ ಮಾಡಿ, ಕಾರ್ಪೊರೇಟ್ ಕಂಪನಿಗಳ ಭೂತ ದಹನ ಮಾಡಲಾಯಿತು.

ಈ ಸಂದರ್ಭದಲ್ಲಿ ಎ ಐ ಕೆ ಕೆ ಎಂ ಎಸ್ ರೈತ ಸಂಘದ ಜಿಲ್ಲಾ ಅಧ್ಯಕ್ಷ ಗೋವಿಂದ್, ರಾಜ್ಯ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಸಂಗನಕಲ್ಲು ಕೃಷ್ಣಪ್ಪ , ಕರ್ನಾಟಕ ಜನಶಕ್ತಿಯ ವಸಂತ್ ಕಾಳೆ ಮಾತನಾಡುತ್ತಾ

ಸ್ವಾತಂತ್ರ್ಯ ಹೋರಾಟದಲ್ಲಿ 1942 ರ ಸಮಯದಲ್ಲಿ ನಡೆದ ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಐತಿಹಾಸಿಕ ಹೋರಾಟ ನಡೆದ ದಿನವಾದ ಇಂದು ಈ ದೇಶದ ದುಡಿಯುವ ಜನರಿಗೆ ಸೇರಬೇಕಾದ ಸಂಪತ್ತನ್ನು ಲೂಟಿಹೊಡೆಯುತ್ತಿರುವ ಕಾರ್ಪೊರೇಟ್ ಕಂಪನಿಗಳೇ ಭಾರತ ಬಿಟ್ಟು ತೊಲಗಿ ಎಂಬ ದೇಶವ್ಯಾಪಿ ಬೃಹತ್ ಹೋರಾಟ ನಡೆಯುತ್ತಿದೆ. ಇಂದು ಯಾವುದೇ ಸರ್ಕಾರಗಲಿ ಅಧಿಕಾರಕ್ಕೇರಲಿ ಈ ಬಂಡವಾಳಶಾಹಿ ಗಳ ಪರವಾಗಿ ನೀತಿಗಳನ್ನು ಜಾರಿಗೆ ತಂದು, ಜನಸಾಮಾನ್ಯರ ಬದುಕನ್ನು ಸಂಕಷ್ಟಕ್ಕೆ ತಳ್ಳುತ್ತಿದ್ದಾರೆ.

Samyukta Kisan Morcha ಹಾಗಾಗಿ, ಇಂದು ಕೃಷಿಯ – ಕಾರ್ಪೋರೇಟಿಕರಣ ನಿಲ್ಲಿಸಬೇಕು ರೈತ ವೀರೋಧಿ – ವಿದ್ಯುತ್ ಖಾಸಗಿಕರಣ ಮಸೂದೆ ಹಿಂಪಡೆಯಬೇಕು,
ಭಾರತದ ಕೃಷಿ ಉದ್ಪಾದನೆ- ಮಾರುಕಟ್ಟೆ-ಸಂಗ್ರಹಣೆ ಮತ್ತು ವಿತರಣೆ ರೈತರು ಮತ್ತು ಸರಕಾದ ಆಧೀನದಲ್ಲಿಯೇ ಇರುವಂತೆ ಜೋಪಾನ ಮಾಡಬೇಕು, ಕೃಷಿಭೂಮಿ ರೈತರಲ್ಲೇ ಉಳಿಯುವಂತೆ ಸಂರಕ್ಷಿಸಬೇಕು, ಕೈಗಾರಿಕೆ- ರಾಷ್ಟ್ರೀಯ ಹೆದ್ದಾರಿ- ರಾಜ್ಯ ಹೆದ್ದಾರಿ ಹೆಸರಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಕಬಳಿಸುವುದನ್ನು ನಿಲ್ಲಿಸಿ, ಕೃಷಿ ಉತ್ಪಾದನೆಯನ್ನು ವಿಶ್ವ ವಾಣಿಜ್ಯ ಒಪ್ಪಂದದಿಂದ ಹೊರಗಿಡಿ, ಕೃಷಿ ಉತ್ಪನ್ನಗಳಿಗೆ ಡಾ/ ಸ್ವಾಮಿನಾಥನ್ ನೇತೃತ್ವದ ಸಮಿತಿಯ ಶಿಪಾರಸ್ಸಿನಂತೆ ಉತ್ಪಾದನಾ ವೆಚ್ಚ ೫೦% ಬೆಂಬಲ ಬೆಲೆಯನ್ನು ಕಾನೂನಾತ್ಮಕ ಗೊಳಿಸಿ, ಕೃಷಿ ಒಳಸುರಿಗಳ ಮೇಲಿನ GST ಹಿಂಪಡೆಯಿರಿ, ಕೃಷಿಗೆ ಅಂತರಿಕ ಸಹಾಯಧನವನ್ನು ಹೆಚ್ಚು ನೀಡಲೂ ಸೂಕ್ತ ಕ್ರಮ ಕೈಗೊಳ್ಳಬೇಕು, ಕೃಷಿ ಉತ್ಪನ್ನಗಳ ಸಂರಕ್ಷಣೆಗೆ ಕೋಲ್ಡ್ ಸ್ಟೋರೇಜ್ ಗಳನ್ನು ಸಹಕಾರಿಸಂಘಗಳ ಮೂಲಕ ನಿರ್ಮಿಸಲು ಸಹಾಯಧನ ನೀಡಬೇಕು, ಅಂತರ ರಾಜ್ಯ ನೀರಾವರಿ ಸಮಸ್ಯೆಗಳನ್ನು ಕಾಲಮಿತಿಯೊಳಗಡೆ ಬಗೆಹರಿಸಬೇಕು, ಅರಣ್ಯ ಸಂಪತ್ತನ್ನು ರಕ್ಷಿಸಲು ಪಶ್ಚಿಮಘಟ್ಟದ ರಕ್ಷಣೆಗಾಗಿ ಮಾಧವ ಗಾಡ್ಗೀಳ್ ವರದಿಯನ್ನು ಅನುಷ್ಠಾನ ಗೊಳಿಸಬೇಕು, ಬರ ಹಾಗೂ ಅತೀವೃಷ್ಠಿಯಿಂದ ಕೃಷಿ ಕ್ಷೇತ್ರಕ್ಕಾದ ನಾಶ ನಷ್ಟಕ್ಜೆ ವೈಜ್ಞಾನಿಕ ಪರಿಹಾರಬನೀಡಬೇಕು, ಕೇರಳದ ವಯನಾಡು ಸೇರಿದಂತೆ ಈ ಬಾರಿಯ ಮೇಘಸ್ಪೋಟವನ್ನು ರಾಷ್ಟ್ರೀಯ ವಿಪತ್ತು ಅಂತ ಘೋಷಿಸಿ ಪುನರ್ವಸತಿ ಕಲ್ಪಿಸಬೇಕು, ಸರಕಾರಗಳ ಕೃಷಿ ವೀರೋಧಿ ನೀತಿಯಿಂದಾಗಿ ಸಾಲಗಾರರಾದ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಫಸಲ್ ಭೀಮಾ ಯೋಜನೆಯಿಂದಾಗಿ ರೈತರಿಗಾದ ಮೋಸ ಹಾಗೂಖಾಸಗಿ ವಿಮಾ ಕಂಪನಿಗಳ ಹಗಲು ದರೋಡೆ ನಿಲ್ಲಿಸಬೇಕು ಎಂಬುದು ಸೇರಿದಂತೆ ಇತರ ಬೇಡಿಕೆಗಳನ್ನು ಸರ್ಕಾರ ಹಿಡೇರಿಸಬೇಕು, ಇಲ್ಲದಿದ್ದರೆ ಬೃಹತ್ ಹೋರಾಟಗಳಿಗೆ ರೈತ ಕೃಷಿಕಾರ್ಮಿಕರು ಬಿದಿಗಿಳಿಯಬೇಕಾಗುತ್ತದೆ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎ ಐ ಕೆ ಕೆ ಎಂ ಎಸ್ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ , ರಾಜ್ಯ ರೈತ ಸಂಘದ ದ್ಯಾವಣ್ಣ ಜನಶಕ್ತಿಯ ಜಿಲ್ಲಾ ಸದಸ್ಯ ಅಪ್ಪಾಜಿ, ಹೊನ್ನೂರಪ, ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಬದುಕಿನ ಪುಟದಲ್ಲೊಂದು ಘಟನೆ

ಪ್ರಸಾದ್ ಶ್ರೀವತ್ಸ ,ದಾವಣಗೆರೆ. Klive Special Article ಮನುಷ್ಯನೆಂದ ಮೇಲೆ ಹಲವಾರು ಸರಿ-ತಪ್ಪು...

Rotary Shivamogga ವೈವಿಧ್ಯಮಯ ಕಲಾಪ್ರಕಾರಗಳ ಕಲಿಕೆಯಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ- ಡಿ.ಕಿಶೋರ್ ಕುಮಾರ್

Rotary Shivamogga ಬಾಲ್ಯದಿಂದಲೇ ಕಲೆ, ಸಾಹಿತ್ಯ, ನೃತ್ಯದ ಬಗ್ಗೆ ಮಕ್ಕಳಲ್ಲಿ ಆಸಕ್ತಿ...

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...