Sunday, December 14, 2025
Sunday, December 14, 2025

Actress Kangana Ranaut ಸಂಸದರ ವಾಗ್ಯುದ್ಧ.ಕಂಗನಾ ವಿರುದ್ಧ ರಾಹುಲ್ ಗಾಂಧಿಯವರು ಲಾಯರ್ ಮೂಲಕ ಮಾನನಷ್ಟ ಮೊಕದ್ದಮೆ ಹೂಡಿಕೆ

Date:

Actress Kangana Ranaut ನಟಿ ಕಂಗನಾ ರಣಾವತ್ ವಿರುದ್ಧ 40 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಸಂಸತ್ನಲ್ಲಿ ರಾಹುಲ್ ಗಾಂಧಿಗೂ ಮಾತಾಡಿದ ಮಾತನ್ನು ವಿರೋಧಿಸಲು ನಟಿ ಸೋಶಿಯಲ್ ಮೀಡಿಯಾದಲ್ಲಿ ಒಂದು ಫೋಟೋವನ್ನು ಶೇರ್ ಮಾಡಿದ್ದಾರೆ.

ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.
ಆ ಫೋಟೋದಲ್ಲಿ ರಾಹುಲ್ ಗಾಂಧಿ ತಲೆಗೆ ಮುಸ್ಲಿಂ ಟೋಪಿ ಹಾಕಿದ್ದು, ಕತ್ತಿಗೆ ಕ್ರಿಸ್ಚಿಯನ್ ಕ್ರಾಸ್ ಹಾಗೂ ಹಣೆಗೆ ಹಿಂದೂಗಳ ತಿಲಕ ಇಟ್ಟು ಎಡಿಟ್ ಮಾಡಿದ ಫೋಟೋ ಇದಾಗಿದೆ. ಈ ಫೋಟೋ ವೈರಲ್ ಆಗಿದ್ದು, ಇದ್ರಿಂದ ರಾಹುಲ್ ಗಾಂಧಿ ಅವರಿಗೆ ಅಪಮಾನವಾಗಿದೆ ಎಂದು ಅನೇಕರು ಕಂಗನಾ ವಿರುದ್ಧ ಕಿಡಿಕಾರಿದ್ದಾರೆ.

ಕಂಗನಾ ರಣಾವತ್ ವಿರುದ್ಧ ಸುಪ್ರೀಂ ಕೋರ್ಟ್ ಲಾಯರ್ ನರೇಂದ್ರ ಮಿಶ್ರಾ ಅವರು ಮಾನನಷ್ಟ ಕೇಸ್ ಹಾಕಿದ್ದಾರೆ. ಯಾವುದೇ ವ್ಯಕ್ತಿಯ ಪೋಟೋವನ್ನು ತಿರುಚಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವುದು ಮಾಹಿತಿ-ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಅಪರಾಧ ಆಗುತ್ತದೆ. ರಾಹುಲ್ ಅವರಿಗೆ ಅವಮಾಸಿದಂತೆ ಆಗಿದೆ ಎಂದು ನರೇಂದ್ರ ಮಿಶ್ರಾ ಹೇಳಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಆಕ್ರೋಶದ ಭಾಷಣದ ಮೂಲಕ ಎಲ್ಲರ ಗಮನಸೆಳೆದಿದ್ರು. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ರು. ರಾಹುಲ್ ಗಾಂಧಿ ಭಾಷಣದ ಬಗ್ಗೆ ಮಾತಾಡಿದ ನಟಿ ಕಂಗನಾ ರಣಾವತ್, ‘ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಅರ್ಥವಿಲ್ಲದ ವಿಚಾರಗಳನ್ನೇ ಮಾತಾನಾಡುತ್ತಿದ್ದು, ಯಾವಾಗಲೂ ಕುಡಿತ ಮತ್ತಿನಲ್ಲೇ ಇರ್ತಾರೆ ಮೊದಲು ಅವರಿಗೆ ಡ್ರಗ್ಸ್ ಪರೀಕ್ಷೆ ನಡೆಸಬೇಕು ಎಂದು ಬಿಜೆಪಿ ಸಂಸದೆ ಕಂಗನಾ ರಣಾವತ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಯಾವಾಗಲೂ ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ಡ್ರಗ್ಸ್ ತಪಾಸಣೆಗೆ ಒಳಪಡಿಸಬೇಕು ಎಂದು ಕಂಗನಾ ರಣಾವತ್ ಹೇಳಿದ್ರು. ನಮ್ಮ ದೇಶದ ಪ್ರಧಾನಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಆದ್ರೆ, ರಾಹುಲ್ ಗಾಂಧಿ ಪ್ರಜಾಪ್ರಭುತ್ವವನ್ನು ಗೌರವಿಸೋದಿಲ್ವಾ ಎಂದು ಕಂಗನಾ ಪ್ರಶ್ನಿಸಿದ್
ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತಾ? ಜಾತಿ ವಿಚಾರಗಳನ್ನು ಮಾತಾಡುವ ಮೂಲಕ ರಾಹುಲ್ ಗಾಂಧಿ ಸಂವಿಧಾನವನ್ನು ಅವಮಾನಿಸ್ತಿದ್ದಾರೆ.

Actress Kangana Ranaut ಮುಂದೊಂದು ದಿನ ಚರ್ಮದ ಬಣ್ಣದ ಆಧಾರದಲ್ಲಿ ಆಯ್ಕೆ ಪ್ರಧಾನಿ ಆಯ್ಕೆ ಮಾಡಿದ್ದಾರೆ ಅಂತನೂ ರಾಹುಲ್ ಗಾಂಧಿ ಅವರು ಹೇಳಬಹುದು ಎಂದು ಕಂಗನಾ ಕಿಡಿಕಾರಿದ್ರು.
ಅಷ್ಟೇ ಅಲ್ಲದೇ ರಾಹುಲ್ ಗಾಂಧಿ ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವವಿಲ್ಲವೇ? ಸಂಸತ್ತಿನಲ್ಲಿ ನಿನ್ನೆಯೂ ಹಾಸ್ಯ ಪ್ರದರ್ಶನ ನೀಡಿದ್ದಾರೆ. ಅವರಿಗೆ ನೀತಿ ನಿಯಮಗಳ ಅರಿವಿಲ್ಲ. ಲೋಕಸಭೆಯಲ್ಲಿ ತಮ್ಮನ್ನು ತಾವು ಈಶ್ವರನ ದೇಶದವರು ಎಂತಲೂ, ಬಿಜೆಪಿಯವರು ಚಕ್ರವ್ಯೂಹ ರಚಿಸಿದ್ದಾರೆ ಎಂದೂ ಹೇಳಿದ್ದಾರೆ.

ಇವರ ಮಾತುಗಳಿಗೆ ಅರ್ಥವಿಲ್ಲ ಎಂದು ಕಂಗನಾ ಹೇಳಿದ್ರು.
ನಾನು ನೂತನ ಸಂಸದೆ ಆಗಿದ್ದೇನೆ. ಆದ್ರೆ ರಾಹುಲ್ ಗಾಂಧಿ ಅವರು ಸಂಸತ್ತಿಗೆ ಬರುವ ಸ್ಥಿತಿ ಮತ್ತು ಅವರು ನೀಡುವ ಹೇಳಿಕೆಗಳನ್ನು ನೋಡಿ ನನಗೆ ಶಾಕ್ ಆಗಿದೆ ಎಂದು ಕಂಗನಾ ಹೇಳಿದ್ದಾರೆ.

ಕಂಗನಾ ರಣಾವತ್ ಯಾವಾಗಲೂ ತಮ್ಮ ತೀಕ್ಷ್ಣವಾದ ಹೇಳಿಕೆಗಳಿಂದ ಸುದ್ದಿ ಆಗ್ತಾರೆ. ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ನಂತರ, ಕಂಗನಾ ನಿರಂತರವಾಗಿ ರಾಜಕೀಯ ಕೆಲಸದಲ್ಲಿ ಬ್ಯುಸಿ ಆಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...