Monday, August 3, 2026
Monday, August 3, 2026

Shiralkoppa Police ಶಿರಾಳಕೊಪ್ಪದಲ್ಲಿ ಗೋಮಾಂಸ ಮಾರಾಟ ಪತ್ತೆ. ಪ್ರಕರಣ ದಾಖಲೆ

Date:

Shiralkoppa Police ಶಿರಾಳಕೊಪ್ಪದ ಹಳ್ಳೂರ್ ಕೆರಿಯಲ್ಲಿ ಗೋ ಹತ್ಯೆ ಮಾಡಿ ಗೋಮಾಂಸ ಮಾರಾಟವಾಗುತ್ತಿರುವ ಖಚಿತ ಮಾಹಿತಿ ಮೇರೆಗೆ ಶಿರಾಳಕೊಪ್ಪ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರಶಾಂತ್ ಕುಮಾರ್ ರವರು ಪೊಲೀಸ್ ಸಿಬ್ಬಂದಿಗಳೊಂದಿಗೆ ಗೋಮಾಂಸದ ಕಸಾಯಿ ಖಾನೆ ಮೇಲೆ ಪ್ರಕರಣ ಸಂಖ್ಯೆ 167/2024 ಪ್ರಕರಣ
ದಾಕಲಿಸಿಕೊಂಡು ದಾಳಿ ನಡೆಸಿ 150 ಕೆಜಿ ಗೋಮಾಂಸ ಪಶುವೈದ್ಯರ ಸಮಕ್ಷಮ ವಶಪಡಿಸಿಕೊಂಡು. ಸಂಬಂಧಪಟ್ಟ ಇಬ್ಬರು ಆರೋಪಿಗಳನ್ನು ಜೈಲಿಗಟ್ಟಲಾಗಿದೆ.

ಆರೋಪಿಗಳ ಮೇಲೆ ಮುಂಚೆಯೂ ಸಹ ಗೋ ಹತ್ಯೆ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Shiralkoppa Police ಶಿವಮೊಗ್ಗ ಜಿಲ್ಲೆಯಲ್ಲಿ ಸಂಪೂರ್ಣ ಗೋ ಹತ್ಯೆ ನಿಲ್ಲಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಹಿಂಜಾವೇ ಸಂಘಟನೆ ಕಾರ್ಯಕರ್ತರಿಂದ ಆಕ್ರೋಶ ವ್ಯಕ್ತಪಡಿಸಲಾಯಿತು. ಗೋ ಹತ್ಯೆ ಪ್ರಕರಣಗಳಿಗೆ ಸಂಬಂಧಪಟ್ಟಂತೆ 2020 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮದಂತೆ ಶಿವಮೊಗ್ಗ ಜಿಲ್ಲೆಯ ಇಬ್ಬರು ಉಪ ವಿಭಾಗಾಧಿಕಾರಿಗಳು ಸಹ ಕಾನೂನಾತ್ಮಕವಾದ ಕ್ರಮ ತೆಗೆದುಕೊಳ್ಳದೆ ಇರುವುದೇ ಜಿಲ್ಲೆಯಲ್ಲಿ ಅತಿ ಹೆಚ್ಚು ಗೋ ಹತ್ಯೆ ಆಗುತ್ತಿರುವುದಕ್ಕೆ ಮೂಲ ಕಾರಣವಾಗಿದೆ. ಜಿಲ್ಲೆಯಲ್ಲಿ ಗೋ ಹತ್ಯೆ ನಿಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವುದಾಗಿ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಹಿಂದೂ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...