Sunday, August 2, 2026
Sunday, August 2, 2026

CM Shivakumar ಈ ಬಂಡೆ ಸಿದ್ಧರಾಮಯ್ಯನವರ ಜೊತೆಗೆ ಸದಾ ಇದೆ- ಡಿಸಿಎಂ ಶಿವಕುಮಾರ್

Date:

CM Shivakumar “ಮಾಧ್ಯಮದವರು ನನ್ನನ್ನು ಕನಕಪುರದ ಬಂಡೆ ಎಂದು ಕರೆಯುತ್ತಾರೆ. ಈ ಬಂಡೆ ಸಿದ್ದರಾಮಯ್ಯನವರ ಜೊತೆ ಸದಾ ಇದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಮೈಸೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು “ಹಿಂದುಳಿದ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿರುವುದು ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಸಹಿಸಲಾಗುತ್ತಿಲ್ಲ. ಅದಕ್ಕೆ ಅವರನ್ನು ಮುಡಾ ಹಗರಣದಲ್ಲಿ ಸಿಕ್ಕಿ ಹಾಕಿಸಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಮಾಡಿದ್ದಾರೆ.

ಈ ಕನಕಪುರದ ಬಂಡೆ ಸಿಎಂ ಜೊತೆ ಸದಾ ಇರಲಿದೆ. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ, ವಿರುದ್ದ ನಿಂತುಕೊಂಡರೆ ನಾಶ” ಎಂದು ಗುಡುಗಿದರು.

CM Shivakumar “ನಾವು ನುಡಿದಂತೆ ನಡೆದಿದ್ದೇವೆ. ಬಡ ಜನರಿಗಾಗಿ ಶ್ರಮಿಸಿದ್ದೇವೆ. ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದನ್ನು ಸಹಿಸಲಾಗದೆ ಸಿದ್ದರಾಮಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಮುಡಾ ಸೈಟ್ ಯಾರ ಆಡಳಿತಾವಧಿಯಲ್ಲಿ ನೀಡಲಾಗಿದೆ? ಬಿಜೆಪಿ ಅವಧಿಯಲ್ಲೇ ಆಗಿದೆ. ಆಗ ಎಲ್ಲಿಗೆ ಹೋಗಿತ್ತು ಹಗರಣ ವಿಚಾರ?” ಎಂದು ಡಿಕೆಶಿ ಪ್ರಶ್ನಿಸಿದರು.

ಇದೇ ವೇಳೆ ಬಿಜೆಪಿ -ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳುವ ಮುನ್ನ ಪರಸ್ಪರ ವಾಗ್ದಾಳಿ ನಡೆಸಿದ್ದ ವಿಡಿಯೋಗಳನ್ನು ವೇದಿಕೆಯಲ್ಲಿ ಪ್ರಸಾರ ಮಾಡಿಸಿದರು.
“ಕುಮಾರಸ್ವಾಮಿ ನಂಬಿದವರನ್ನು ಮುಗಿಸುತ್ತಾರೆ. ಅವರು ಮಾಡಿರುವ ಹಗರಣಗಳನ್ನು ಬಯಲು ಮಾಡಿದ್ದೇನೆ, ಮುಂದೆ ಮಾಡುತ್ತೇನೆ. ವಿಜಯೇಂದ್ರ ಎಷ್ಟು ಕೊಳ್ಳೆ ಹೊಡೆದಿದ್ದಾರೆ ಎಂಬುವುದು ಹೊರಬರಲಿದೆ.

ಕೊರೋನಾ ಸಮಯದಲ್ಲಿ ಬಡವರ ಹಣ ತಿಂದಿದ್ದಾರೆ. ಇಂತಹ ಭ್ರಷ್ಟರನ್ನು ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಸಬೇಕಾ? ವಿಜಯೇಂದ್ರ ಅಂದ್ರೆ ಭ್ರಷ್ಟಾಚಾರ” ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...