Monday, December 15, 2025
Monday, December 15, 2025

M.B.Patil ಸಿದ್ಧರಾಮಯ್ಯವರ ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲ- ಸಚಿವ ಎಂ.ಬಿ.ಪಾಟೀಲ್

Date:

M.B.Patil ಮುಡಾ ಹಗರಣ ಖಂಡಿಸಿ ಬಿಜೆಪಿ ಪಾದಯಾತ್ರೆ ನಡೆಸುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಹಗರಣ ಮಾಡಿಲ್ಲ. ಬಿಜೆಪಿಯವರು ವಿನಾಃ ಕಾರಣ ಹೋರಾಟ ಮಾಡ್ತಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ.ಪಾಟೀಲ್ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 40 ವರ್ಷದ ರಾಜಕಾರಣದಲ್ಲಿ ಸಿದ್ದರಾಮಯ್ಯ ಮೇಲೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ದೇವರಾಜ್ ಅರಸು ನಂತರ ಒಬಿಸಿ ಸಮುದಾಯದ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಬಿಜೆಪಿಯವರಿಗೆ ಇದು ಸಹಿಸಲು ಆಗ್ತಿಲ್ಲ ಎಂದು ದೂರಿದರು.
ರಾಜ್ಯಪಾಲರನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಮುಡಾ ಹಗರಣ ನಡೆದಾಗ ಬಿಜೆಪಿಯವರೇ ಅಧ್ಯಕ್ಷರಾಗಿದ್ದರು. ಅವರ ಪಕ್ಷದ ಶಾಸಕರೇ ಇದ್ದರು. ಮುರುಗೇಶ ನಿರಾಣಿ, ಕುಮಾರಸ್ವಾಮಿ ವಿರುದ್ದ ರಾಜ್ಯಪಾಲರಿಗೆ ದೂರು ಕೊಟ್ಟಿದ್ದರು. ಆ ಪ್ರಕರಣ ಏನಾಯ್ತು ಎಂದು ಪ್ರಶ್ನಿಸಿದರು.

ಕೋವಿಡ್ ವೇಳೆ ಎರಡು ಸಾವಿರ ಕೋಟಿ ಹಗರಣ ಆಗಿದೆ. ಯಡಿಯೂರಪ್ಪ, ಸುಧಾಕರ್ ಹಗರಣ ಮಾಡಿದ್ದಾರೆ ಅಂತಾ ಯತ್ನಾಳ್ ಆರೋಪ ಮಾಡ್ತಾರೆ. ವಿಜಯೇಂದ್ರ‌ ಮಾರಿಷಸ್ ಗೆ 10 ಸಾವಿರ ಕೋಟಿ ತೆಗೆದುಕೊಂಡು ಹೋಗಿದ್ದಾರೆ ಎಂದು ಅವರದ್ದೇ ಪಕ್ಷದ ಯತ್ನಾಳ್ ಆರೋಪ ಮಾಡ್ತಾರೆ. ಯತ್ನಾಳ್ ಆರೋಪಕ್ಕೆ ಮೊದಲು ಉತ್ತರ ಕೊಡಲಿ ಎಂದು ಆಗ್ರಹಿಸಿದರು.

M.B.Patil ನಾವು ಸಹ ಹೋರಾಟ ಮಾಡ್ತೇವೆ, ನ್ಯಾಯಾಂಗ ಹೋರಾಟ ಮಾಡ್ತೇವೆ. ಬಿಜೆಪಿಯವರ ವಿರುದ್ದ ಜನರ ಬಳಿ ಹೋಗ್ತೇವೆ. ಅವರ ಕಾಲದಲ್ಲಿ 25 – 30 ಹಗರಣ ನಡೆದಿವೆ ಅದನ್ನು ಜನರ ಮುಂದೆ ತಿಳಿಸುತ್ತೇವೆ ಎಂದರು.
ಭದ್ರಾವತಿ ವಿಐಎಸ್ ಎಲ್ ಕಾರ್ಖಾನೆ ವಿಚಾರ:
ಭದ್ರಾವತಿಯ ವಿಎಸ್ ಐಎಲ್ ಕಾರ್ಖಾನೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಎಲ್ಲವೂ ಸರಿ ಹೋಗುವ ನಿರೀಕ್ಷೆ ಇದೆ ಎಂದು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...