Thursday, June 18, 2026
Thursday, June 18, 2026

Nagar Panchami ಹುತ್ತದಿಂಬ ಗ್ರಾಮದಲ್ಲಿ ಹಾವು ಕಡಿತಕ್ಕೆ ಬಾಣಂತಿ ಬಲಿ

Date:

Nagar Panchami ನಾಗರ ಪಂಚಮಿ ದಿನ ಹಾವು ಕಚ್ಚಿ ಬಾಣಂತಿಯೊಬ್ಬರು ಸಾವನ್ನಪ್ಪಿದ ಬಗ್ಗೆ ಸಾಗರ ತಾಲ್ಲೂಕುನಲ್ಲಿ ವರದಿಯಾಗಿದೆ
ನಾಗರ ಪಂಚಮಿ
ಸಾಗರ ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.

Nagar Panchami ರಂಜಿತಾ ಎಂಬ 22 ವರ್ಷದ ಮಹಿಳೆ ಮೃತ ನಿವಾಸಿ
ಜಾನುವಾರುಗೆ ಮೇವು ತರಲು ಎಂದು ಹೊಲಕ್ಕೆ ಹೋಗಿದ್ದ ಇವರಿಗೆ ಅಲ್ಲಿಯೇ ಪೊದೆಯಲ್ಲಿದ್ದ ಹಾವೊಂದು ಕಚ್ಚಿದೆ. ಮೊದಲು ಮಹಿಳೆಗೆ ಹಾವು ಕಚ್ಚಿರುವ ಬಗ್ಗೆ ಗೊತ್ತಾಗಲಿಲ್ಲ. ಆ ಬಳಿಕ ನಂಜು ಏರಿ ಹೊಲದಲ್ಲಿಯೇ ರಂಜಿತಾ ಕುಸಿದು ಬಿದ್ದಿದ್ದಾಳೆ.
ಕೆಲಹೊತ್ತು ಬಿಟ್ಟು ಮನೆಯವರು ಗದ್ದೆಗೆ ಬಂದು ನೋಡಿದಾಗ ರಂಜಿತಾ ಕುಸಿದು ಬಿದ್ದಿರುವುದು ಗೊತ್ತಾಗಿದೆ. ತಕ್ಷಣವೇ ಅವರನ್ನ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಾಗರ ಉಪವಿಭಾಗೀಯ ಆಸ್ಪತ್ರೆ
ಅಲ್ಲಿನ ವೈದ್ಯರು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ಆಕೆಯನ್ನು ಕರೆತರುವ ಸಂದರ್ಭದಲ್ಲಿ ಮಾರ್ಗಮಧ್ಯೆ ರಂಜಿತಾ ಸಾವನ್ನಪ್ಪಿದ್ದಾರೆ.
ಮೂರು ವರುಷದ ಮಗುವನ್ನ ಹೊಂದಿರುವ ರಂಜಿತಾರಿಗೆ ಎರಡನೇ ಹೆರಿಗೆಯಾಗಿ ನಾಲ್ಕು ತಿಂಗಳಷ್ಟೆ ಕಳೆದಿತ್ತು.

ಇದೀಗ ಇಬ್ಬರು ಮಕ್ಕಳು ತಾಯಿಯನ್ನ ಕಳೆದುಕೊಂಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...