Sunday, December 14, 2025
Sunday, December 14, 2025

Department of Women and Child Development ಮಕ್ಕಳ ತಟ್ಟೆಗೆ ಮೊಟ್ಟೆ ಇಟ್ಟು ವಾಪಸ್ ಕಸಿಯುತ್ತಿದ್ದ ಕೊಪ್ಪಳ ಜಿಲ್ಲೆ ಗುಂಡೂರಿನ ಅಂಗನವಾಡಿ ಕಾರ್ಯಕರ್ತೆ ಅಮಾನತು

Date:

Department of Women and Child Development ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ಬಳಿಕ ವಾಪಸ್ ಕಸಿದುಕೊಂಡ ಆರೋಪದ ಮೇಲೆ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರ 2ರ ಕಾರ್ಯಕರ್ತೆ ಮತ್ತು ಸಹಾಯಕಿಯನ್ನು ಸೇವೆಯಿಂದ (ಗೌರವಧನದ ಸೇವೆ) ಅಮಾನತು ಮಾಡಲಾಗಿದೆ.

ಮಧ್ಯಾಹ್ನ ಊಟಕ್ಕೆ ಕುಳಿತಿದ್ದ ಮಕ್ಕಳ ತಟ್ಟೆಗೆ ಅಂಗನವಾಡಿ ಸಹಾಯಕಿ ಮೊದಲು ಮೊಟ್ಟೆ ಹಾಕಿದ್ದರು. ಮಕ್ಕಳು ಅದನ್ನು ತಿನ್ನಬೇಕು ಎನ್ನುವಷ್ಟರಲ್ಲಿ ವಾಪಸ್ ಕಸಿದುಕೊಂಡಿದ್ದರು. ಈ ಕುರಿತು ಕನ್ನಡ ಮಾಧ್ಯಮವೊಂದು ವರದಿ ಪ್ರಕಟಿಸಿತ್ತು.

Department of Women and Child Development ಬಳಿಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದನ್ನು ಗಮನಿಸಿದ ಸಾರ್ವಜನಿಕರು ತಪ್ಪಿತಸ್ಥ ಅಂಗನವಾಡಿ ಸಿಬ್ಬಂದಿ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದರು.
ಈ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅವರು ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ ಜೆ ಮತ್ತು ಸಹಾಯಕಿ ಶೈನಜಾ ಬೇಗಂ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

‘ಗುಂಡೂರು-2ನೇ ಅಂಗನವಾಡಿ ಕೇಂದ್ರಕ್ಕೆ ಪೂರೈಕೆಯಾಗಿರುವ ಮೊಟ್ಟೆಗಳನ್ನು ಫಲಾನುಭವಿಗಳಿಗೆ ವಿತರಿಸದೆ, ಅವರು ಸೇವಿಸುವ ಸಮಯದಲ್ಲಿ ವಾಪಸ್ ಪಡೆದು ದುರುಪಯೋಗಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...