Monday, February 2, 2026
Monday, February 2, 2026

Department of Women and Child Development ಮಕ್ಕಳ ತಟ್ಟೆಗೆ ಮೊಟ್ಟೆ ಇಟ್ಟು ವಾಪಸ್ ಕಸಿಯುತ್ತಿದ್ದ ಕೊಪ್ಪಳ ಜಿಲ್ಲೆ ಗುಂಡೂರಿನ ಅಂಗನವಾಡಿ ಕಾರ್ಯಕರ್ತೆ ಅಮಾನತು

Date:

Department of Women and Child Development ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ಬಳಿಕ ವಾಪಸ್ ಕಸಿದುಕೊಂಡ ಆರೋಪದ ಮೇಲೆ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರ 2ರ ಕಾರ್ಯಕರ್ತೆ ಮತ್ತು ಸಹಾಯಕಿಯನ್ನು ಸೇವೆಯಿಂದ (ಗೌರವಧನದ ಸೇವೆ) ಅಮಾನತು ಮಾಡಲಾಗಿದೆ.

ಮಧ್ಯಾಹ್ನ ಊಟಕ್ಕೆ ಕುಳಿತಿದ್ದ ಮಕ್ಕಳ ತಟ್ಟೆಗೆ ಅಂಗನವಾಡಿ ಸಹಾಯಕಿ ಮೊದಲು ಮೊಟ್ಟೆ ಹಾಕಿದ್ದರು. ಮಕ್ಕಳು ಅದನ್ನು ತಿನ್ನಬೇಕು ಎನ್ನುವಷ್ಟರಲ್ಲಿ ವಾಪಸ್ ಕಸಿದುಕೊಂಡಿದ್ದರು. ಈ ಕುರಿತು ಕನ್ನಡ ಮಾಧ್ಯಮವೊಂದು ವರದಿ ಪ್ರಕಟಿಸಿತ್ತು.

Department of Women and Child Development ಬಳಿಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಅದನ್ನು ಗಮನಿಸಿದ ಸಾರ್ವಜನಿಕರು ತಪ್ಪಿತಸ್ಥ ಅಂಗನವಾಡಿ ಸಿಬ್ಬಂದಿ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದರು.
ಈ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅವರು ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ ಜೆ ಮತ್ತು ಸಹಾಯಕಿ ಶೈನಜಾ ಬೇಗಂ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

‘ಗುಂಡೂರು-2ನೇ ಅಂಗನವಾಡಿ ಕೇಂದ್ರಕ್ಕೆ ಪೂರೈಕೆಯಾಗಿರುವ ಮೊಟ್ಟೆಗಳನ್ನು ಫಲಾನುಭವಿಗಳಿಗೆ ವಿತರಿಸದೆ, ಅವರು ಸೇವಿಸುವ ಸಮಯದಲ್ಲಿ ವಾಪಸ್ ಪಡೆದು ದುರುಪಯೋಗಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ’ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...