Wednesday, April 30, 2025
Wednesday, April 30, 2025

Vishwa Hindu Parishad ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಸಾಧ್ಯವಿರುವ ಕ್ರಮ ಕೈಗೊಳ್ಳಲು “ವಿಹಿಂಪ” ಒತ್ತಾಯ

Date:

Vishwa Hindu Parishad ಬಾಂಗ್ಲಾದೇಶದಲ್ಲಿರುವ ಹಿಂದೂ ಅಲ್ಪಸಂಖ್ಯಾತರ ರಕ್ಷಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಹಿಂದೂ ಪರಿಷತ್‌ ಭಾರತ ಸರ್ಕಾರವನ್ನು ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ವಿಹಿಂಪ ಜಿಲ್ಲಾಧ್ಯಕ್ಷ ಜೆ ಆರ್ ವಾಸುದೇವ, ಭೀಕರ ಪರಿಸ್ಥಿತಿಯ
ಲಾಭವನ್ನು ಪಡೆದುಕೊಂಡು, ಗಡಿಯಾಚೆಯಿಂದ ಭಾರತಕ್ಕೆ ಒಳನುಸುಳುವಿಕೆ ಪ್ರಯತ್ನವನ್ನು ಮಾಡಬಹುದು. ಇದನ್ನು ಭಾರತ ಸರಕಾರ ಗಂಭೀರವಾಗಿ ಪರಿಗಣಿಸಿ ಭದ್ರತಾ ಪಡೆಗಳ ಮೂಲಕ ಭಾರತ ಬಾಂಗ್ಲಾದೇಶ ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು ಹಾಗೂ ಯಾವುದೇ ರೀತಿಯ ಅತಿಕ್ರಮಣಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

Vishwa Hindu Parishad ಈಗಾಗಲೇ ಅಸ್ತಿತ್ವಕ್ಕೆ ಬಂದಿರುವ ಬಾಂಗ್ಲಾದ ಹೊಸ ಸರ್ಕಾರ ಅಲ್ಲಿನ ಹಿಂದೂ ಅಲ್ಪಸಂಖ್ಯಾತ ಸಮುದಾಯಕ್ಕೆ ರಕ್ಷಣೆ ಕೊಡಬೇಕು ಹಾಗೂ ದಾಳಿಯಿಂದ ನಾಶಗೊಂಡಿರುವ ಹಿಂದೂ ಮನೆಗಳು ಹಾಗೂ ದೇವಾಲಯಗಳನ್ನು ಪುನರ್ ನಿರ್ಮಿಸಲು ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಲು ಭಾರತ ಸರಕಾರ ಸಹಿತ ವಿಶ್ವ ಸಮುದಾಯ ಬಾಂಗ್ಲಾದೇಶದ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ವಿಶ್ವ ಹಿಂದೂ ಪರಿಷದ್
ಗೃಹ ಸಚಿವ ಅಮಿತ್ ಶಾ ಅವರನ್ನು ಒತ್ತಾಯಿಸಿದೆ.

ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಗೃಹ ಸಚಿವರು ವ್ಯಕ್ತಪಡಿಸಿದ್ದಾರೆ. ಮತ್ತು ಈ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಕೂಡ ತುರ್ತು ಸಹಾಯವಾಣಿ ಸ್ಥಾಪಿಸಲು ನಿರ್ಧರಿಸಿದೆ. ಅದರ ಸಂಖ್ಯೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ

Yadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್...

Shivaganga Yoga Center ನಗರದ ಅತಿದೊಡ್ಡ ಬಾಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್

Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ...

Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರ

Sarva Samriddhi Sadhana Center ಹೊಸನಗರದ ರಿಪ್ಪನ್‌ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ...