Sunday, December 14, 2025
Sunday, December 14, 2025

Madhu Bangarappa ಭದ್ರಾವತಿಯ ವಿಐಎಸ್ಎಲ್ & ಎಂಪಿಎಂ ಕಾರ್ಖಾನೆಗಳನ್ನ ಸರ್ಕಾರದಿಂದಲೇ ಪುನಶ್ಚೇತನಕ್ಕೆ ಪ್ರಯತ್ನ ಮಾಡಲಾಗುವುದು- ಮಧು ಬಂಗಾರಪ್ಪ

Date:

Madhu Bangarappa ಭದ್ರಾವತಿಯ ಎರಡು ಕಣ್ಣುಗಳಂತಿರುವ ಹಾಗೂ ಕೇಂದ್ರ ಸರ್ಕಾರದ ಅಧೀನ ಸಂಸ್ಥೆಗಳಾಗಿರುವ ವಿಐಎಸ್ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಸರ್ಕಾರದ ವತಿಯಿಂದಲೇ ಪುನಶ್ಚೇತನಗೊಳಿಸಲು ಸರ್ಕಾರದ ವತಿಯಿಂದಲೇ ಕ್ರಮ ವಹಿಸಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.

ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ಪೂರ್ವದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಈ ಅವಳಿ ಸಂಸ್ಥೆಗಳನೆ ನಂಬಿಕೊಂಡು ಬದುಕು ಸಾಗಿಸುತ್ತಿದ್ದ ಸುಮಾರು 15 ಸಾವಿರ ಕುಟುಂಬಗಳು ಈ ಸಂಸ್ಥೆಯ ಉದ್ಯೋಗಾವಕಾಶ ಕಳೆದುಕೊಂಡು ಅತಂತ್ರ ಆಗಲಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು.
ವಿಮಾನ ನಿಲ್ದಾಣದಲ್ಲಿ ಬಾಕಿ ಇರುವ ನೈಟ್ ಲ್ಯಾಂಡಿಂಗ್ ಸೇರಿ ಮತ್ತಿತರ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಲಿದೆ ನೈಟ್ ಲ್ಯಾಂಡಿಂಗ್ ಗೆ ಸಂಬಂಧಪಟ್ಟಂತೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದವರು ನುಡಿದರು.

ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಶಾಲೆಗಳಲ್ಲಿನ ಕೊರತೆ ಇರುವ ಶಿಕ್ಷಕರ ಹುದ್ದೆಯನ್ನು ಶೀಘ್ರದಲ್ಲಿ ಭರ್ತಿ ಮಾಡಲು ಸರ್ಕಾರ ಉದ್ದೇಶಿಸಿದೆ. ಶಿಕ್ಷಣ ಇಲಾಖೆಯಲ್ಲಿನ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ರೂಪಿಸಿರುವ ಯೋಜನೆಗಳಂತೆ ಮುಂದಿನ ಒಂದು ಅಥವಾ ಒಂದೂವರೆ ವರ್ಷಗಳ ಅವಧಿಯಲ್ಲಿ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದವರು ನುಡಿದರು.

Madhu Bangarappa ಜಿಲ್ಲೆಯಲ್ಲಿನ ಬಹುತೇಕ ಎಲ್ಲಾ ಜಲಾಶಯಗಳು ಸುಸ್ಥಿತಿಯಲ್ಲಿರುವ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ರಾಜ್ಯದ ಎಲ್ಲಾ ಜಲಾಶಯಗಳ ಸ್ಥಿತಿಗತಿಗಳ ಕುರಿತು ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಶೀಘ್ರದಲ್ಲಿ ಬೆಂಗಳೂರಿನಲ್ಲಿ ಸಭೆ ಕರೆದು ಚರ್ಚಿಸಲಾಗುವುದು ಎಂದವರು ನುಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...