Wednesday, December 17, 2025
Wednesday, December 17, 2025

District Child Protection Officer DR Gayatri ದೆಹಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲುಮಕ್ಕಳ ರಕ್ಷಣಾಧಿಕಾರಿ ಡಿ.ಎಸ್.ಗಾಯತ್ರಿ ಅವರಿಗೆ ಆಹ್ವಾನ

Date:

District Child Protection Officer DR Gayatri ಶಿವಮೊಗ್ಗ ಆ.14:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಹಾಗೂ ಕೇಂದ್ರ ಪುರಸ್ಕೃತ ಮಿಷನ್ ವಾತ್ಸಲ್ಯ ಯೋಜನೆ ಅಡಿಯಲ್ಲಿ ಮಕ್ಕಳ ರಕ್ಷಣಾಧಿಕಾರಿ ಸಾಂಸ್ಥಿಕ ಸೇವೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಾಂಸ್ಥಿಕ ಸೇವೆ ಮಕ್ಕಳ ರಕ್ಷಣಾಧಿಕಾರಿ ಡಿ. ಎಸ್. ಗಾಯತ್ರಿ ಅವರನ್ನು ಈ ವರ್ಷ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ನಾಳೆ ನಡೆಯಲಿರುವ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ನೇರವಾಗಿ ವೀಕ್ಷಿಸಲು ವಿಶೇಷ ವ್ಯಕ್ತಿಯಾಗಿ ಗಾಯತ್ರಿ ಅವರನ್ನು ಆಯ್ಕೆ ಮಾಡಿದ್ದು ಅವರು ನಿರಂತರವಾಗಿ ಮಕ್ಕಳ ರಕ್ಷಣೆಗೆ ಸಂಬಂಧಪಟ್ಟಂತೆ ಸಂಬಂಧಿಸಿದ ಕಾಯಿದೆ ಕಾನೂನುಗಳು ಇಲಾಖಾ ಕಾರ್ಯಕ್ರಮಗಳ ಕುರಿತು ಟಿ ಓ ಟಿ ತರಬೇತುದಾರರಾಗಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಅವಿರತವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಮೂಲಕ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆದಿರುವ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿದೆ.
District Child Protection Officer DR Gayatri ಮಕ್ಕಳ ರಕ್ಷಣೆಗೆ ಸಂಬಂಧಪಟ್ಟಂತೆ ವಿವಿಧ ಯೋಜನೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅವರಿಗೆ ಇಂತಹ ಅವಕಾಶ ದೊರೆತಿದ್ದು, ಇದಕ್ಕೆ ಕಾರಣರಾದ ಭಾರತ ಸರ್ಕಾರ, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಗಾಯತ್ರಿ ಅವರು ಧನ್ಯವಾದ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...