Sunday, August 2, 2026
Sunday, August 2, 2026

District Child Protection Officer DR Gayatri ದೆಹಲಿ ಸ್ವಾತಂತ್ರ್ಯೋತ್ಸವದಲ್ಲಿ ಭಾಗಿಯಾಗಲುಮಕ್ಕಳ ರಕ್ಷಣಾಧಿಕಾರಿ ಡಿ.ಎಸ್.ಗಾಯತ್ರಿ ಅವರಿಗೆ ಆಹ್ವಾನ

Date:

District Child Protection Officer DR Gayatri ಶಿವಮೊಗ್ಗ ಆ.14:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಹಾಗೂ ಕೇಂದ್ರ ಪುರಸ್ಕೃತ ಮಿಷನ್ ವಾತ್ಸಲ್ಯ ಯೋಜನೆ ಅಡಿಯಲ್ಲಿ ಮಕ್ಕಳ ರಕ್ಷಣಾಧಿಕಾರಿ ಸಾಂಸ್ಥಿಕ ಸೇವೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿವಮೊಗ್ಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಾಂಸ್ಥಿಕ ಸೇವೆ ಮಕ್ಕಳ ರಕ್ಷಣಾಧಿಕಾರಿ ಡಿ. ಎಸ್. ಗಾಯತ್ರಿ ಅವರನ್ನು ಈ ವರ್ಷ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.
ನಾಳೆ ನಡೆಯಲಿರುವ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ನೇರವಾಗಿ ವೀಕ್ಷಿಸಲು ವಿಶೇಷ ವ್ಯಕ್ತಿಯಾಗಿ ಗಾಯತ್ರಿ ಅವರನ್ನು ಆಯ್ಕೆ ಮಾಡಿದ್ದು ಅವರು ನಿರಂತರವಾಗಿ ಮಕ್ಕಳ ರಕ್ಷಣೆಗೆ ಸಂಬಂಧಪಟ್ಟಂತೆ ಸಂಬಂಧಿಸಿದ ಕಾಯಿದೆ ಕಾನೂನುಗಳು ಇಲಾಖಾ ಕಾರ್ಯಕ್ರಮಗಳ ಕುರಿತು ಟಿ ಓ ಟಿ ತರಬೇತುದಾರರಾಗಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಅವಿರತವಾಗಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಮೂಲಕ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆದಿರುವ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿದೆ.
District Child Protection Officer DR Gayatri ಮಕ್ಕಳ ರಕ್ಷಣೆಗೆ ಸಂಬಂಧಪಟ್ಟಂತೆ ವಿವಿಧ ಯೋಜನೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅವರಿಗೆ ಇಂತಹ ಅವಕಾಶ ದೊರೆತಿದ್ದು, ಇದಕ್ಕೆ ಕಾರಣರಾದ ಭಾರತ ಸರ್ಕಾರ, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಗಾಯತ್ರಿ ಅವರು ಧನ್ಯವಾದ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...