Tuesday, April 22, 2025
Tuesday, April 22, 2025

Acharya Tulsi National College of Commerce ಮಾಹಿತಿ & ತಂತ್ರಜ್ಞಾನದ ಸದ್ಬಳಕೆ ಮೂಲಕ‌ ಅಭಿವೃದ್ಧಿ-ಎಂ.ಎಸ್.ಸುಪ್ರೀತ್

Date:

Acharya Tulsi National College of Commerce ಶಿವಮೊಗ್ಗ, ಆ.13, (ಕರ್ನಾಟಕ ವಾರ್ತೆ):
ಪ್ರಸ್ತುತ ಅಗಾಧವಾದ ಮಾಹಿತಿ ಮತ್ತು ತಂತ್ರಜ್ಞಾನ ನಮಗೆ ಲಭ್ಯವಿದ್ದು ಯುವಜನತೆ ಅದನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುವ ಮೂಲಕ ಅಭಿವೃದ್ದಿ ಹೊಂದಬಹುದು ಎಂದು ಮೈಸೂರಿನ ಪರಂಪರೆ-ಪರಿಸರ ಪಾಠಶಾಲಾ ಸಂಸ್ಥೆಯ ಸ್ಥಾಪಕರಾದ ಸುಪ್ರೀತ್ ಎಂ ಎಸ್ ಹೇಳಿದರು.
ರಾಷ್ಟಿçÃಯ ಶಿಕ್ಷಣ ಸಮಿತಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ರಾಸೇಯೋ, ಬೆಂಗಳೂರು, ಕುವೆಂಪು ವಿಶ್ವವಿದ್ಯಾಲಯ, ಆಚಾರ್ಯ ತುಳಸಿ ರಾಷ್ಟಿçÃಯ ವಾಣಿಜ್ಯ ಕಾಲೇಜು, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿರುವ ರಾಜ್ಯ ಮಟ್ಟದ ಗಾಂಧಿತತ್ವ ಪ್ರಣೀತ ಯುವಜನ ಶಿಬಿರದ 4 ನೇ ದಿನದಂದು(ಆ.12) ‘ಸೇವಾಸ್ಪಂದನ’ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
3 ‘ಟಿ’ ಕೌಶಲ್ಯಗಳಾದ ಟೂಲ್ಸ್, ಟೆಕ್ನಿಕ್ ಮತ್ತು ಟ್ಯಾಲೆಂಟ್ ಅಂದರೆ ಸಾಧನಗಳು, ತಾಂತ್ರಿಕತೆ ಮತ್ತು ಪ್ರತಿಭೆಯು ಬಹುಮುಖ್ಯವಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಸಮರ್ಪಕವಾಗಿ ಇವನ್ನು ಬಳಸಿಕೊಂಡು ಮುಂದೆ ಬರಬಹುದು.
ಭಾರತೀಯರಾದ ನಾವು ನಮ್ಮಲ್ಲೇ ತಯಾರಿಸಲಾದ ದೇಸೀ ಉತ್ಪನ್ನಗಳನ್ನು ಬಳಸುವ ಕಡೆ ಹೆಚ್ಚು ಗಮನ ಹರಿಸಬೇಕು ಹಾಗೂ ಈ ಮೂಲಕ ದೇಶದ ಆರ್ಥಿಕಾಭಿವೃದ್ದಿಗೆ ನಮ್ಮದೇ ಕೊಡುಗೆಗಳನ್ನು ನೀಡಲು ಮುಂದಾಗಬೇಕೆAದು ಇದೇ ವೇಳೆ ಕರೆ ನೀಡಿದ ಅವರು ಅಂತರಾಷ್ಟಿçÃಯ ಯುವ ದಿನಾಚರಣೆಯ ಶುಭ ಕೋರಿದರು.
ಕುವೆಂಪು ವಿವಿ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜನಾಧಿಕಾರಿ ಶುಭ ಮರವಂತೆ ಮಾತನಾಡಿ, ಎನ್‌ಎಸ್‌ಎಸ್ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಹಬಾಳ್ವೆ, ಸಂಯಮ ಮತ್ತು ಮಾತನಾಡುವ ಕೌಶಲ್ಯವನ್ನು ಅಭಿವೃದ್ದಿಪಡಿಸಿಕೊಳ್ಳಲು ಸೂಕ್ತ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಕನ್ನಡ ಭಾಷೆಯ ಸರಿಯಾದ ಉಚ್ಚಾರಣೆ, ಸಮನ್ವಯತೆಯನ್ನು ಅರ್ಥ ಮಾಡಿಕೊಂಡು ಬಳಸಬೇಕು. ಶಿಬಿರವು ಒಂದು ಶಿಸ್ತಿನ ವಾತಾವರಣವನ್ನು ಹೊಂದಿದ್ದು ಬೆಳಗಿನಿಂದ ರಾತ್ರಿವರೆಗೆ ವಿವಿಧ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಂಡಿರುತ್ತಾರೆ. ವಿಶೇಷವಾಗಿ ಬೆಳಗಿನ ಸೌಂದರ್ಯ ಮತ್ತು ಉತ್ತಮ ಪರಿಸರವನ್ನು ಅನುಭವಿಸಲು ಸಾಧ್ಯವಾಗುತ್ತದೆ ಎಂದರು.
Acharya Tulsi National College of Commerce ವಾರ್ತಾ ಇಲಾಖೆಯ ವಾರ್ತಾ ಸಹಾಯಕರಾದ ಭಾಗ್ಯ ಎಂ ಟಿ ಶಿಬಿರದ 4ನೇ ದಿನದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಇದೇ ವೇಳೆ ಎನ್‌ಎಸ್‌ಎಸ್ ಶ್ರಮದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಎಟಿಎನ್‌ಸಿಸಿ ಪ್ರಾಂಶುಪಾಲರಾದ ಪ್ರೊ ಮಮತ ಪಿ ಆರ್, ಎಟಿಎನ್‌ಸಿಸಿ ಕಾಲೇಜಿನ ಸಂಚಾಲಕ ಪ್ರೊ ಕೆ.ಎಂ.ನಾಗರಾಜ, ಶಿಬಿರಾಧಿಕಾರಿಗಳು, ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
(ಫೋಟೊ ಇದೆ)

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....