Friday, September 27, 2024
Friday, September 27, 2024

Canara Bank ಅಂಬೇಡ್ಕರ್ ಓದುವ ಕಾಲದಲ್ಲಿ ಅವರಲ್ಲಿ ಹಣ,ಆಸ್ತಿ ಇರಲಿಲ್ಲ ಬದಲಿಗೆ ಇಚ್ಛಾಶಕ್ತಿ ಇತ್ತು- ರಮೇಶ್

Date:

Canara Bank ಆಸ್ತಿ, ಸಂಪತ್ತು ಇದ್ದ ಮಾತ್ರಕ್ಕೆ ವಿದ್ಯೆ ದಕ್ಕುವುದಿಲ್ಲ. ಕಲಿಕಾ ಇಚ್ಚಾಶಕ್ತಿ ಇದ್ದರೆ ಮಾತ್ರ ವಿದ್ಯೆ ಒಲೆಯುತ್ತದೆ ಎಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್‌ ಹೇಳಿದರು.

ಶಿವಮೊಗ್ಗ ವಾಜಪೇಯಿ ಬಡಾವಣೆಯಲ್ಲಿರುವ ಕೆನರಾ ಬ್ಯಾಂಕ್‌ ಪ್ರಧಾನ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾವಂತ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಡಾ.ಬಿ.ಆರ್‌.ಅಂಬೇಡ್ಕರ್‌ ವಿದ್ಯಾರ್ಥಿ ವೇತನ ವಿದ್ಯಾ ಜ್ಯೋತಿ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಅಂಬೇಡ್ಕರ್‌ ಓದುವ ಕಾಲದಲ್ಲಿ ಅವರ ಬಳಿ ಹಣ, ಆಸ್ತಿ ಯಾವುದು ಇರಲಿಲ್ಲ. ಬದಲಿಗೆ ಕಲಿಕಾ ಇಚ್ಚಾಶಕ್ತಿ ಇತ್ತು. ಹೀಗಾಗಿ ಅವರು ವಿದ್ಯಾರ್ಥಿ ವೇತನದಿಂದಲೇ ದೇಶ, ವಿದೇಶದಲ್ಲೂ ವಿದ್ಯಾಭ್ಯಾಸ ಮಾಡಲು ಸಾಧ್ಯವಾಯಿತು ಎಂದರು.

ಸರ್ಕಾರದಿಂದ ಶಿಕ್ಷಣಕ್ಕೆ ಹೆಚ್ಚಿನ ಸೌಲಭ್ಯ ನೀಗುತ್ತಿದ್ದು, ಸರ್ಕಾರ ಜೊತೆಗೆ ಬ್ಯಾಂಕ್‌ಗಳು ಕೂಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡುತ್ತಿವೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಅಚಲ ಸಾಧನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲೇಶಪ್ಪ ಮಾತನಾಡಿ, ಕೆನರಾ ಬ್ಯಾಂಕ್‌ ವತಿಯಿಂದ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅಂಬೇಡ್ಕರ್ ಹೆಸರಿಟ್ಟಿರುವುದು ಹೆಮ್ಮೆಯ ವಿಚಾರ. ಇವತ್ತು ಮಹಿಳೆ ಈ ದೇಶದ ಪ್ರಧಾನಿಯಾಗಿದ್ದಾರೆ ಎಂದರೆ ಅದು ಅಂಬೇಡ್ಕರ್‌ ಅವರ ಚಿಂತನೆಯ ಫಲ ಎಂದರು.

ಅಂಬೇಡ್ಕರ್‌ ಅವರು ದಲಿತರಿಗೆ ಮಾತ್ರ ಸೀಮಿತವಾಗಿಲ್ಲ. ಎಲ್ಲ ಜಾತಿ, ವರ್ಗದ ಜನರಿಗೆ ಅಂಬೇಡ್ಕರ್‌ ಬೇಕಾದವರಾಗಿದ್ದಾರೆ. ಅವರ ಚಿಂತನೆಯಿಂದಾಗಿ ಎಲ್ಲ ಕ್ಷೇತ್ರದಲ್ಲೂ ಹೆಣ್ಣು ಮಕ್ಕಳೂ ಸಾಧನೆ ಮಾಡುತ್ತಿದ್ದಾರೆ. ಪ್ರತಿಯೊಬ್ಬರೂ ಶಿಕ್ಷಣ ಪಡೆಯಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಹಲವು ಯೋಜನೆಗಳ ಬಗ್ಗೆ ಹಲವರಿಗೆ ಮಾಹಿತಿ ಕೊರತೆ ಇದೆ. ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದಿಂದ ಪ್ರೇರಣೆ ಪಡೆದು ಸಾಧನೆಯ ಗುರಿಯತ್ತ ಸಾಗಬೇಕು ಎಂದು ಹೇಳಿದರು.

Canara Bank ಬ್ಯಾಂಕ್‌ನ ಉಪ ಮಹಾ ಪ್ರಬಂಧಕ ದೇವರಾಜ್‌ ಮಾತನಾಡಿ, ವಿದ್ಯಾರ್ಥಿಗಳು ಈ ದೇಶದ ಭವಿಷ್ಯ. ಅವರ ಓದಿಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕು ಎಂಬ ಉದ್ದೇಶದಿಂದ ಕೆನರಾ ಬ್ಯಾಂಕ್‌ನಿಂದ ಕಳೆದ 20 ವರ್ಷದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಧನ ನೀಡುತ್ತಾ ಬರಲಾಗುತ್ತಿದೆ. ಆರಂಭದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇತ್ತು. ಇಂದು 60 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಇಂದಿನಿಂದಲೇ ಉಳಿತಾಯದ ಬಗ್ಗೆ ಅರಿವು ಹೊಂದಬೇಕು. ದಿನಕ್ಕೆ 10 ರು. ಉಳಿಸಿದರೂ ಒಂದು ವರ್ಷಕ್ಕೆ 3650 ರು. ಉಳಿತಾಯ ಮಾಡಬಹುದು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರತಿಭಾವಂತ ಎಸ್ಸಿ, ಎಸ್ಟಿ ವಿದ್ಯಾರ್ಥಿನಿಯರಿಗೆ ಡಾ.ಬಿ.ಆರ್‌.ಅಂಬೇಡ್ಕರ್‌ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಬ್ಯಾಂಕ್‌ನ ಸಹಾಯಕ ವ್ಯವಸ್ಥಾಪಕ ಎಂ.ಕೆ.ರಾಥೋಡ್‌ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...