Friday, March 20, 2026
Friday, March 20, 2026

Mallikarjuna Murugarajendra Swamiji ಪಂಚಾಕ್ಷರಿ ಗವಾಯಿಗಳ ಪ್ರೇರಣೆಯಿಂದ ಅನೇಕರು ಆದರ್ಶಪ್ರಾಯ ಸಂಗೀತಗಾರರಾಗಿದ್ದಾರೆ- ಡಾ.ಮಲ್ಲಿಕಾರ್ಜುನ ಮರುಘರಾಜೇಂದ್ರ ಶ್ರೀ

Date:

Mallikarjuna Murugarajendra Swamiji ಸಂಗೀತಕ್ಕೆ ಹೆಚ್ಚು ಪಾವಿತ್ರ್ಯತೆ ತಂದುಕೊಟ್ಟವರು ಪಂಚಾಕ್ಷರಿ ಗವಾಯಿಗಳು, ಅವರ ಸಾಧನೆಯಿಂದ ಪ್ರೇರೆಪಿತರಾದ ಅನೇಕ ಜನರು ನಾಡಿನ ಆದರ್ಶಪ್ರಾಯ ಸಂಗೀತಗಾರರಾಗಿದ್ದಾರೆ ಎಂದು ಬೆಕ್ಕಿನ ಕಲ್ಮಠದ ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಕೃಷಿನಗರದ ರೋಟರಿ ರಿವರ್‌ಸೈಡ್ ಸಭಾಂಗಣದಲ್ಲಿ ಬೆಕ್ಕಿನ ಕಲ್ಮಠದ ಶ್ರೀ ಮುರುಘರಾಜೆಂದ್ರ ಮಹಾಸಂಸ್ಥಾನ ಮಠ ಟ್ರಸ್ಟ್ ನ ಗುರುಬಸವ ಅಧ್ಯಯನ ಪೀಠದಿಂದ ಶಿವಗಂಗಾ ಯೋಗಕೇಂದ್ರ ಕೃಷಿನಗರ ಶಾಖೆ ಮತ್ತು ರೋಟರಿ ರಿವರ್‌ಸೈಡ್ ಸಹಯೋಗದಲ್ಲಿ ಆಯೋಜಿಸಿದ್ದ ಶ್ರಾವಣ ಚಿಂತನ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಶ್ರಾವಣ ಚಿಂತನದಿಂದ ಮನೆ ಮನಗಳು ಬೆಳಗುತ್ತವೆ. ಆಧ್ಯಾತ್ಮಿಕ, ಧಾರ್ಮಿಕ ಹಾಗೂ ಒಳ್ಳೆಯ ವಿಚಾರಗಳ ಅರಿವು ಮೂಡುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಡಾ. ಎಂ.ಬಸವರಾಜಪ್ಪ ಮಾತನಾಡಿ, ಪಂಚಾಕ್ಷರಿ ಗವಾಯಿಗಳ ಸಾಧನೆ ಬದುಕು ಬರಹ ಕುರಿತು ಮಾತನಾಡಿದರು. ಸೇನೆಯಲ್ಲಿ ಯೋಧನಾಗಿ ಸೇವೆ ಸಲ್ಲಿಸಿದ ಭಾವೇಶ್ ಅವರು ಸೇನೆಯ ಅನುಭವಗಳ ಕುರಿತು ಹಾಗೂ ಜೀವನ್ಮರಣ ಹೋರಾಟದ ರೋಮಾಂಚನ ಅನುಭವಗಳನ್ನು ಹಂಚಿಕೊಂಡರು.

ರೋಟರಿ ಕ್ಲಬ್ ರಿವರ್‌ಸೈಡ್ ಅಧ್ಯಕ್ಷ ಎಂ.ಆರ್.ಬಸವರಾಜ ಮಾತನಾಡಿ, ಗುರುಗಳು ನಡೆಸುವ ಶ್ರಾವಣ ಚಿಂತನದಂತಹ ಕಾರ್ಯಕ್ರಮಗಳು ಧಾರ್ಮಿಕ ಅರಿವಿನ ಜತೆ ಹೊಸ ವಿಷಯಗಳ ತಿಳವಳಿಕೆ ಮೂಡಿಸುತ್ತದೆ. ಇಂತಹ ಕಾರ್ಯಕ್ರಮಗಳಲ್ಲಿ ಕುಟುಂಬ ಸದಸ್ಯರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

Mallikarjuna Murugarajendra Swamiji ಆಕಾಶವಾಣಿ ಹಿರಿಯ ಕಲಾವಿದೆ ನಾಗರತ್ನಮ್ಮ ಚಂದ್ರಶೇಖರ್ ಹಾಗೂ ಯೋಗ ಶಿಬಿರಾರ್ಥಿಗಳಿಂದ ಭಕ್ತಿ ಸಂಗೀತ ಸೇವೆ ಹಾಗೂ ವಚನ ಕಾರ್ಯಕ್ರಮ ಸುಂದರವಾಗಿ ನೆರವೇರಿತು. ಜಿ.ವಿಜಯಕುಮಾರ್, ಯೋಗ ಶಿಕ್ಷಕರಾದ ಚಂದ್ರಶೇಖರಯ್ಯ, ನೀಲಕಂಠರಾವ್, ಜಯಣ್ಣ, ಮಹೇಶ್ವರಪ್ಪ, ಚಿದಾನಂದ, ಕುಸುಮಾ, ಬಿಂದು ವಿಜಯಕುಮಾರ್, ವಿನೋದಮ್ಮ, ಕೃಷ್ಣಮೂರ್ತಿ, ಮಹಾಬಲೇಶ್ವರ ಹೆಗಡೆ, ಸುರೇಶ್, ವಕೀಲ ಮಲ್ಲೇಶ್, ರೇವಣಪ್ಪ, ಕುಸುಮಾ, ಅರುಣಾ, ಭಾಗ್ಯ ಹಾಗೂ ಯೋಗಬಂಧುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...