Friday, December 5, 2025
Friday, December 5, 2025

Klive Special Article ತಿಂಗಳ ಕವಿತೆ

Date:

Klive Special Article ಉತ್ತು – ಬಿತ್ತಿ ಭುವಿಗೆ
ಬೆವರ ಸುರಿಸಿ ನಾಡಿಗೆ
ಅನ್ನ ನೀಡುವ ನನ್ನ ರೈತ

ಬಿಸಿಲಲ್ಲಿ ಬೆಂದು
ಮಳೆಯಲ್ಲಿ ನೆನೆದು
ಚಳಿಯಲ್ಲಿ ನಡುಗಿ ಊರ ಹಸಿವು ನೀಗಿಸುವ ನನ್ನ ರೈತ

ಬೆಳೆಗಾಗಿ ಸಾಲ – ಸೂಲ ಮಾಡಿ ಹಾಕಿದ ಬೀಜ ಜೀವ – ಜಲವಿಲ್ಲದೆ ಕಂಗೆಟ್ಟು, ಮಳೆ ಬಂದಾಗ ಸಂತೋಷಪಟ್ಟ ನನ್ನ ರೈತ

ಮಳೆ ಬಂದು ಇಳೆತುಂಬಿ
ಬೆಳೆ ಮುಳುಗಿ ಹೋದಾಗ ಯಾರಿಗೂ ಹೇಳದೆ ಸಂಕಟ ಪಟ್ಟ ನನ್ನ ರೈತ

ಕಷ್ಟಪಟ್ಟು ಹೊಟ್ಟೆ – ಬಟ್ಟೆ ಕಟ್ಟಿ ದುಡಿದು – ದುಡಿದು ಸೋತು – ಸೊರಗಿ ಹೋದ ನನ್ನ ರೈತ

ಬೆಳೆಗಾಗಿ ತಂದ ಸಾಲ ತೀರಲಿಲ್ಲ ಕೊಟ್ಟವರು ಬಿಡುತ್ತಿಲ್ಲ ಮಾನಕ್ಕಾಗಿ ಜೀವ ಪಣಕಿಟ್ಟ ನನ್ನ ರೈತ

Klive Special Article ಸಾಲ ಕೊಟ್ಟವರು ಬಿಡಲಿಲ್ಲ
ಸರ್ಕಾರದ ಮನಸ್ಸು ಕರಗಲಿಲ್ಲ ಕೊನೆಗೂ ರೈತನ ಭವಣೆ ತೀರಲಿಲ್ಲ
ಇಷ್ಟೆಲ್ಲಾ ಕಷ್ಟವ ಅನುಭವಿಸಿಯೂ ಎದೆಗುಂದದೆ ದೇಶಕ್ಕೆ ಅನ್ನವ ನೀಡುವಾತ ನನ್ನ ರೈತ
ದೇಶಕ್ಕೆ ಅನ್ನವ ನೀಡುವಾತ ನನ್ನ ರೈತ…..!

ರಚನೆ : ಧರ್ಮರಾಜ್.ಜಿ.ಸಾಗರ, ಪತ್ರಕರ್ತರು ಹಾಗೂ ಹವ್ಯಾಸಿ ಕವಿ, ಸಾಗರ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...