Thursday, August 13, 2026
Thursday, August 13, 2026

S.S. Mallikarjun ಭದ್ರಾ ಡ್ಯಾಂ ಭರ್ತಿ.ರೈತರಲ್ಲಿ ಹರ್ಷ. ತೋಟಗಾರಿಕಾ ವಾರ್ಷಿಕ ಎರಡು ಬೆಳೆಗಳಿಗೆ ಅನುಕೂಲ- ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

Date:

S.S. Mallikarjun ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ ದಾವಣಗೆರೆ ಬಳ್ಳಾರಿ ಮತ್ತಿತರ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಅವರು ಹೇಳಿದರು.

ಅವರು ಇಂದು ಬಿ ಆರ್ ಪಿ ಯಲ್ಲಿ ಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.

ಕಳೆದ ಸಾಲಿನಲ್ಲಿ ಸಕಾಲದಲ್ಲಿ ಮಳೆ ಆಗದಿದ್ದ ಪರಿಣಾಮವಾಗಿ ರೈತರಲ್ಲಿ ಆತಂಕದ ಛಾಯೆ ಮೂಡಿತ್ತು. ಪ್ರಸಕ್ತ ಸಾಲಿನಲ್ಲಿ ಬಿದ್ದ ಮಳೆಯಿಂದಾಗಿ ಕೃಷಿ, ಅದರಲ್ಲೂ ವಿಶೇಷವಾಗಿ ತೋಟಗಾರಿಕೆಯ ವಾರ್ಷಿಕ ಎರಡು ಬೆಳೆಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಈ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸಹಾಯವಾಗಿದೆ. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಕ್ಕು ರೈತರ ನೆಮ್ಮದಿಯ ಬದಿಕಿಗೆ ಆಸಾರೆಯಾಗಲೆಂದು ಎಂದವರು ಆಶಿಸಿದರು.

S.S. Mallikarjun ಈ ಜಲಾಶಯದ ವ್ಯಾಪ್ತಿಗಳು ಕೊಡುವ ಅಚ್ಚು ಪಟ್ಟು ಪ್ರದೇಶದ ರೈತರು ಇರುವ ನೀರನ್ನು ಮಿತ ಬಳಕೆ ಹಾಗೂ ಸದ್ಬಳಕೆ ಮಾಡಿಕೊಂಡು ತಮ್ಮ ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳುವಂತೆ ಅವರು ಮನವಿ ಮಾಡಿದರು.

ದಾವಣಗೆರೆ ಸಂಸದೆ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಬಸವಂತಪ್ಪ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜು, ಹೊನ್ನಾಳಿ ಶಾಸಕ ಶಾಂತನಗೌಡ ಹಾಗೂ ಹರಿಹರದ ಮಾಜಿ ಶಾಸಕ ರಾಮಪ್ಪ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕು ಗಳಿಂದ ಆಗಮಿಸಿದ್ದ ಅಧಿಕಾರಿಗಳು ganyaru ಹಾಗೂ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...