Monday, February 2, 2026
Monday, February 2, 2026

Brahma Kumaris Institute ನಗರದ ಬ್ರಹ್ಮ ಕುಮಾರಿ ಸಂಸ್ಥೆಯಲ್ಲಿ ರಾಖಿ ಹಬ್ಬ ಆಚರಣೆ

Date:

Brahma Kumaris Institute ಬ್ರಹ್ಮಾಕುಮಾರಿ ಸಂಸ್ಥೆಯಲ್ಲಿ ರಾಖಿ ಹಬ್ಬವನ್ನು ವಿನೂತನವಾಗಿ ಆಚರಿಸಲಾಯಿತು. ರಕ್ಷಾಬಂಧನ ಸಂದರ್ಭದಲ್ಲಿ ನಾವೆಲ್ಲರೂ ಪರಸ್ಪರ ಸೋದರ-ಸೋದರಿಯರು ಎಂಬ ಪವಿತ್ರ ದೃಷ್ಟಿಯ ಸಂಕಲ್ಪವನ್ನು ಕೈಗೊಳ್ಳಲಾಯಿತು.
ಹಾಗೂ ಎಲ್ಲರಿಗೂ ಶ್ರೀರಕ್ಷೆಯೊಂದಿಗೆ ಪ್ರಸಾದ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾನ್ಯ ಶ್ರೀ ಕೆ ಎಸ್ ಈಶ್ವರಪ್ಪನರು,ಮಾಜಿ ಉಪಮುಖ್ಯ ಮಂತ್ರಿಗಳು, ಶಿವಮೊಗ್ಗ ಇವರು ಮಾತನಾಡುತ್ತಾ“ ಇಡೀ ವಿಶ್ವವನ್ನೇ ಒಂದುಗೂಡಿಸುವ ಸಂಸ್ಥೆಯೆಂದರೆ ಅದು ಈಶ್ವರೀಯ ವಿಶ್ವ ವಿದ್ಯಾಲಯ , ಇಲ್ಲಿ ಯಾವುದೇ ಜಾತಿ-ಧರ್ಮದ ಭೇದ-ಭಾವವಿಲ್ಲ ಎಂದರು.

Brahma Kumaris Institute ಮುಂದುವರೆದು ಮಾತನಾಡುತ್ತಾ ಪ್ರಸ್ತುತ ರಾಖಿಯ ಪಾವಿತ್ರತೆಯು ಜಗತ್ತಿನ ಮೃಗೀಯ ಮನಸ್ಕರಿಗೆ ಬೇಕಾಗಿದೆ. ನಾವು ಪರಸ್ಪರ ಅಣ್ಣ-ತಂಗಿಯರು,ಅಕ್ಕ-ತಮ್ಮಂದಿರು ಎಂಬ ಭಾವನೆಯಿಂದ ಸೋದರಿಯರ ರಕ್ಷಣೆಯಾಗಬೇಕು.ಅನಾಚರ-ಅತ್ಯಾಚಾರಗಳು ನಿಲ್ಲಬೇಕು “ ಎಂದು ರಾಖಿಯ ಮಹತ್ವವನ್ನು ತಿಳಿಸಿದರು. ನಂತರ ಶ್ರೀ ಈಶ್ವರಪ್ಪ ಹಾಗೂ ಶ್ರೀ ಕೆ ಈ ಕಾಂತೇಶ್ ಇವರಿಗೆ ಬ್ರಹ್ಮಾಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ಬಿಕೆ ಅನಸೂಯಕ್ಕನವರು ರಾಖಿ ಕಟ್ಟಿ ಸನ್ಮಾನಿಸಿದರು. ಬಿಕೆ ಶಿವದೇವಿ , ಬಿಕೆ ನಾಗರಾಜ್ ,ಬಿಕೆ ಮಂಜಪ್ಪ ಹಾಗೂ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

[2] ಮಾನ್ಯ ಶ್ರೀ ಚೆನ್ನಬಸಪ್ಪ , ಶಾಸಕರು,ಶಿವಮೊಗ್ಗ ಹಾಗೂ ಮಾನ್ಯ ಶ್ರೀ ಡಿ ಎಸ್ ಅರುಣ್ , ವಿಧಾನ ಪರಿಷತ್ ಸದಸ್ಯರು, ಶಿವಮೊಗ್ಗ -ಇವರಿಗೆ ಬ್ರಹ್ಮಾಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ಬಿಕೆ ಅನಸೂಯಕ್ಕನವರು ರಕ್ಷಾಬಂಧನ ಕಟ್ಟಿ ಶುಭಹಾರೈಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...