Wednesday, October 2, 2024
Wednesday, October 2, 2024

Police Department ಗೌರಿ ಗಣೇಶ-ಈದ್ ಮಿಲಾದ್ ಶಾಂತಿಯುತ ಆಚರಣೆ ಬಗ್ಗೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸೂಚನೆ

Date:

Police Department ಗೌರಿ ಗಣೇಶ- ಈದ್ ಮಿಲಾದ್: ಪೋಲೀಸ್ ಇಲಾಖೆಯಿಂದ ಸೂಚನೆ ನೀಡಲಾಗಿದೆ .

ಮುಂಬರುವ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಿವಮೊಗ್ಗ ಪೊಲೀಸ್‌ ಇಲಾಖೆ ಆಯಾ ಪೊಲೀಸ್‌ ಸ್ಟೇಷನ್‌ ವ್ಯಾಪ್ತಿಯಲ್ಲಿ ಬರುವ ಗಣೇಶ ಪ್ರತಿಷ್ಟಾಪನಾ ಸಮಿತಿ ಮತ್ತು ಈದ್ ಮಿಲಾದ್ ಸಮಿತಿ ಸದಸ್ಯರ ಸಭೆಯನ್ನು ನಡೆಸುತ್ತಿದೆ.ಕೆಲವೊಂದು ಸೂಚನೆಗಳನ್ನು ನೀಡುತ್ತಿದೆ.

Police Department ಪೊಲೀಸ್‌ ಇಲಾಖೆಯ ಸೂಚನೆ

1) ಗಣಪತಿ ಮೂರ್ತಿ ಪ್ರತಿಷ್ಟಾನೆಯ ದಿನಾಂಕ, ಸ್ಥಳ, ಮೆರವಣಿಗೆ ಮಾರ್ಗ ಮತ್ತು ವಿಸರ್ಜನೆ ಸ್ಥಳದ ಮಾಹಿತಿಯನ್ನು ಮುಂಚಿತವಾಗಿಯೇ ಪೊಲೀಸ್ ಠಾಣೆಗೆ ನೀಡುವುದು.
2) ಸಾರ್ವಜನಿಕರು ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ದಕ್ಕೆಯಾಗದಂತೆ ಗಣಪತಿ ಪೆಂಡಾಲ್ ಗಳನ್ನು ಹಾಕಬೇಕು.
3) ಈದ್ ಮಿಲಾದ್ ಮತ್ತು ಗಣಪತಿ ಮೆರವಣಿಗೆಯಲ್ಲಿ ವಾಹನಗಳ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗದ ರೀತಿ ಮೆರವಣಿಗೆ ಮಾಡುವುದು.
4) ಗಣಪತಿ ಪೆಂಡಾಲ್ ಗಳಲ್ಲಿ ಸ್ವಯಂ ಸೇವಕರನ್ನು ನೇಮಿಸಿ, ಗಣಪತಿ ಮೂರ್ತಿಗಳು ವಿಸರ್ಜನೆಯಾಗುವ ದಿನದ ವರೆಗೆ, ದಿನದ 24 ಗಂಟೆಯೂ ಪೆಂಡಾಲ್ ನಲ್ಲಿ ಇರುವ ಹಾಗೇ ನೋಡಿಕೊಳ್ಳಬೇಕು.
5) ಹಬ್ಬದ ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನು ಹಾಕುವಾಗ ಇತರರ ಭಾವನೆಗಳಿಗೆ ದಕ್ಕೆಯಾಗದ ರೀತಿಯಲ್ಲಿ ಅಳವಡಿಸುವುದು.
6) ಹಬ್ಬದ ಆಚರಣೆಯಲ್ಲಿ ದ್ವನಿ ವರ್ಧಕಗಳನ್ನು ಬಳಕೆ ಮಾಡುವಾಗ, ಸರ್ವೋಚ್ಚ ನ್ಯಾಯಾಲಯದ ಮಾರ್ಗಸೂಚಿಗಳನ್ವಯ ಬಳಸುವುದು.
7) ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸ್ಥಳದಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆಯನ್ನು ಮಾಡಿಕೊಳ್ಳುವುದು ಎಂದು ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...