Wednesday, October 2, 2024
Wednesday, October 2, 2024

B.Y.Vijayendra ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಶಿಕಾರಿಪುರಕ್ಕೆ ಬಂದರೆ ಘೇರಾವ್- ನಾಗರಾಜ ಗೌಡ

Date:

B.Y.Vijayendra ರಾಜ್ಯದಾದ್ಯಂತ ಸಾವಿರಾರು ಕೋಟಿ ಆಸ್ತಿ ಮಾಡಿರುವ ಬಿ.ಎಸ್ ಯಡಿಯೂರಪ್ಪ ಹಾಗೂ ಅವರು ಕುಟುಂಬದ ತನಿಖೆಯಾಗಬೇಕು, ವಿಜಯೇಂದ್ರ ಶಿಕಾರಿಪುರಕ್ಕೆ ಬಂದರೆ ಘೇರಾವ್ ಹಾಕಲಾಗುವುದು ಎಂದು ಕಾಂಗ್ರೆಸ್ ಪಕ್ಷದ ರಾಜ್ಯ ಕಾರ್ಯದರ್ಶಿ ನಾಗರಾಜ್ ಗೌಡ ಯಡಿಯೂರಪ್ಪ ಕುಟುಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಭಾನುವಾರ ನಡೆದ ಪ್ರತಿಭಟನೆ ಸಭೆಯಲ್ಲಿ ಮಾತನಾಡಿದ ಅವರು. ಕೇಂದ್ರ ಸರ್ಕಾರವನ್ನು ದುರುಪಯೋಗಪಡಿಸಿಕೊಂಡು ರಾಜ್ಯಪಾಲರ ಮೂಲಕ ಪ್ರಾಸಿಕ್ಯೂಷನ್ ಕೊಡಿಸಿರುವುದು ಅಕ್ಷಮ್ಯ ಅಪರಾಧವಾಗಿದ್ದು, ಇದು ರಾಜಕೀಯ ಪ್ರೇರಿತ ಹಾಗೂ ಒಬ್ಬ ವ್ಯಕ್ತಿಯ ಸ್ವಹಿತಾಸಕ್ತಿಯ ಕಾರಣಕ್ಕೆ ಪ್ರಾಸಿಕ್ಯೂಷನ್ ನಡೆಸಲಾಗುತ್ತಿದೆ ಎಂದರು.

ರಾಜ್ಯಪಾಲರ ಎದುರು ಅನೇಕ ಬಿಜೆಪಿ ನಾಯಕರ ಹಲವು ಪ್ರಕರಣಗಳಿದ್ದರೂ ಅದರ ಬಗ್ಗೆ ತನಿಖೆಗೆ ಆದೇಶಿಸದೆ ಯಾವುದೇ ಹಗರಗಳಿಲ್ಲದೆ ಪಾರದರ್ಶಕ ಆಡಳಿತ ನಡೆಸುತ್ತಿರುವ ಸಿದ್ಧರಾಮಯ್ಯರವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಣತಿ ನೀಡಲಾಗಿದ್ದು ಇದು ಕೇಂದ್ರ ಸರ್ಕಾರದ ಷಡ್ಯಂತ್ರವಲ್ಲದೇ ಬೇರೇನೂ ಅಲ್ಲ. ಬಿ ಎಸ್ ವೈ
ಬಸವರಾಜ್ ಬೊಮ್ಮಾಯಿಯವರ ಆಡಳಿತಾವಧಿಯಲ್ಲಿ ಹಲವಾರು ಭ್ರಷ್ಟಾಚಾರ ನಡೆದಿದ್ದು, ಈಬಗ್ಗೆ ಅನೇಕ ಬಾರಿ ರಾಜ್ಯಪಾಲರಿಗೆ ದೂರು ನೀಡಿದರೂ ಯಾವುದೇ ಕ್ರಮ ತೆಗೆದು ಕೊಂಡಿಲ್ಲ.

ಹೀಗಿರುವಾಗ ಸಿದ್ಧರಾಮಯ್ಯರವರು ಮುಡಾ ಪ್ರಕರಙದಲ್ಲಿ ಭಾಗಿಯಾಗದಿದ್ದರೂ ಭಾಗಿಯಾಗಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಆಪಾದನೆಯಾಗಿದೆ ಎಂದರು.

B.Y.Vijayendra ಇದು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸಮಗ್ರ ಆಸ್ತಿಗಳ ತನಿಖೆ ನಡೆಸಲಾಗುವುದು. ಕಾಂಗ್ರೆಸ್ ಪಕ್ಷದಲ್ಲಿರುವ ಕಾರ್ಯಕರ್ತರು ಅಂಜುವ ಮಕ್ಕಳ್ಳಲ್ಲ, ಇನ್ನು ಮುಂದೆ ನಿಮ್ಮ ಆಟ ಹೇಗಿರುತ್ತೆ ನೋಡಿ ಎಂದು ಎಚ್ಚರಿಕೆ ನೀಡಿದ ಅವರು, ಶಿಕಾರಿಪುರದಲ್ಲಿ ನಿಮ್ಮ ದುರಾಡಳಿತ ಹಾಗೂ ದಬ್ಬಾಳಿಕೆಯ ವಿರುದ್ಧ ತಾಲ್ಲೂಕಿನ ಜನರು ಸೆಟೆದೆದ್ದು, ಕಾಂಗ್ರೆಸ್ ಪಕ್ಷಕ್ಕೆ 75,000 ಮತಗಳನ್ನ ನೀಡಿ ಆಶೀರ್ವದಿಸಿದ್ದಾರೆ ಅಲ್ಲದೇ, ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲೂ ನಿಮ್ಮನ್ನ ತಿರಸ್ಕರಿಸಿದ್ದಾರೆ ಮರೆಯಬೇಡಿ ಎಂದು ಹೇಳಿದರು.

ಬಿಎಸ್ವೈ ಮನೆಗೆ ಮುತ್ತಿಗೆ ಹಾಕಲು ಬಂದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
ಪಕ್ಷದ ಮುಖಂಡರಾದ ನಗರದ ಮಹದೇವಪ್ಪ, ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರನಗೌಡ ಮುಖಂಡರಾದ ಉಳ್ಳಿ ದರ್ಶನ, ಭಂಡಾರಿ ಮಾಲತೇಶ್, ರಾಘವೇಂದ್ರ ನಾಯಕ್, ಶಿವನಾಯಕ್, ಶಿವು ಹುಲ್ಮಾರ್, ಮಂಜು ಹುಣಸೆಕೊಪ್ಪ, ಎಚ್. ಎಸ್. ರವೀಂದ್ರ ಮಾರವಳ್ಳಿ ಉಮೇಶ್, ನಗರದ ರವಿ, ಸೇರಿದಂತೆ ಪಕ್ಷದ ಅನೇಕ ಮುಖಂಗರು, ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...