Tuesday, October 1, 2024
Tuesday, October 1, 2024

Belur Gopalakrishna ಪಕ್ಷ ಬಿಜೆಪಿ. ನಿಷ್ಠೆ ಕಾಂಗ್ರೆಸ್ ಶಾಸಕರಿಗೆ.ಗೆಲುವಿಗೆ ಹರಕೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತ

Date:

Belur Gopalakrishna ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಗೆಲುವಿಗಾಗಿ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತರೊಬ್ಬರು ಪಟ್ಟಣದ ಪುರಾಣ ಪ್ರಸಿದ್ಧ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಹರಕೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಸೋಮವಾರ ಪಟ್ಟಣದ ಸಿದ್ಧಿವಿನಾಯಕ ದೇವಸ್ಥಾನದ ಸನ್ನಿಧಿಗೆ ಆಗಮಿಸಿ ತನ್ನ ಅಭಿಮಾನಿಯೊಂದಿಗೆ ಹರಕೆಯನ್ನು ಸಲ್ಲಿಸಿದರು.

ರಿಪ್ಪನ್ ಪೇಟೆ ಪಟ್ಟಣದ ಬಿಜೆಪಿ ಕಟ್ಟಾ ಕಾರ್ಯಕರ್ತ ಹರೀಶ್ ಪ್ರಭು ಎಂಬುವರು ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣರವರ ಗೆಲುವಿಗಾಗಿ ಪಟ್ಟಣದ ಪುರಾಣ ಪ್ರಸಿದ್ದ ಶ್ರೀ ಸಿದ್ಧಿವಿನಾಯಕ ಸ್ವಾಮಿಗೆ ಬೆಣ್ಣೆ ಅಲಂಕಾರದ ಸೇವೆಯ ಹರಕೆ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಅಭಿಮಾನಿಯೊಂದಿಗೆ ಪಟ್ಟಣದ ದೇವಸ್ಥಾನಕ್ಕೆ ಆಗಮಿಸಿ ಹರಕೆಯನ್ನು ಸಲ್ಲಿಸಿದ್ದಾರೆ.
ನಂತರ ಮಾತನಾಡಿದ ಹರೀಶ್ ಪ್ರಭು, ಮೂವತ್ತು ವರ್ಷಗಳಿಂದ ನಾನು ಸಂಘ ಹಾಗೂ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದೇನೆ, ನಾನು ಈಗಲೂ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತನಾಗಿದ್ದು ನನ್ನ ರಕ್ತದ ನರ ನಾಡಿಗಳಲ್ಲಿ ಬಿಜೆಪಿ ಪಕ್ಷದ ಸಿದ್ಧಾಂತವಿದೆ ಆದರೆ ಶಾಸಕ ಬೇಳೂರು ಗೋಪಾಲಕೃಷ್ಣರವರ ಮಾನವೀಯ ಮೌಲ್ಯಗಳು ಹಾಗೂ ಅವರ ಉಪಕಾರದ ಮನೋಭಾವ ನನ್ನನ್ನು ಪಕ್ಷದ ಚೌಕಟ್ಟನ್ನು ಮೀರಿ ಅವರ ಪರವಾಗಿ ನಿಲ್ಲುವಂತೆ ಮಾಡಿದೆ.

Belur Gopalakrishna ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಬೇಳೂರು ಗೋಪಾಲಕೃಷ್ಣರವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ತಪ್ಪಿಸಲು ಕಾಣದ ಕೈಗಳು ಕೆಲಸ ಮಾಡಿದ್ದವು ಈ ಹಿನ್ನೆಲೆಯಲ್ಲಿ ಪಟ್ಟಣದ ಪುರಾಣ ಪ್ರಸಿದ್ಧ ಸಿದ್ಧಿ ವಿನಾಯಕ ಸ್ವಾಮಿಯ ಮೊರೆ ಹೋಗಿದ್ದೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಪ್ರಚಂಡ ಬಹುಮತದೊಂದಿಗೆ ಗೆಲ್ಲುವುದರೊಂದಿಗೆ ನನ್ನ ಅಭಿಲಾಷೆ ಈಡೇರಿದೆ.

ಈ ಹಿನ್ನೆಲೆಯಲ್ಲಿ ಇಂದು ಅವರ ಸಮ್ಮುಖದಲ್ಲಿ ನನ್ನ ಹರಕೆಯನ್ನು ಸಲ್ಲಿಸಿದ್ದೇನೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕ ಸರ್ಕಾರದ ಮಂತ್ರಿಯಾಗುವುದರೊಂದಿಗೆ ಇನ್ನಷ್ಟು ಉನ್ನತ ಹುದ್ದೆಗೆ ಏರಲಿ ಎಂದು ಮತ್ತೆ ಹರಕೆ ಮಾಡಿಕೊಂಡಿದ್ದೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...

Gandhi Jayanti ಸಾಗರ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ನಡೆದ ಸ್ವಚ್ಛತಾ ಹಿ ಸೇವಾ ಚಟುವಟಿಕೆ

Gandhi Jayanti ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ...

Karnataka State Farmers Association ಆನೆದಾಳಿಗೆ ಮೃತಪಟ್ಟ ಪುರದಾಳ್ ನಿವಾಸಿಗೆ ₹25 ಲಕ್ಷ ಪರಿಹಾರ ನೀಡಲು ಆಗ್ರಹ

Karnataka State Farmers Association ಶಿವಮೊಗ್ಗ ನಗರದ ಅಂಚಿನಲ್ಲಿರುವ ಪುರದಾಳ್...