Thursday, June 18, 2026
Thursday, June 18, 2026

Belur Gopalakrishna ಪಕ್ಷ ಬಿಜೆಪಿ. ನಿಷ್ಠೆ ಕಾಂಗ್ರೆಸ್ ಶಾಸಕರಿಗೆ.ಗೆಲುವಿಗೆ ಹರಕೆ ಸಲ್ಲಿಸಿದ ಬಿಜೆಪಿ ಕಾರ್ಯಕರ್ತ

Date:

Belur Gopalakrishna ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಗೆಲುವಿಗಾಗಿ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತರೊಬ್ಬರು ಪಟ್ಟಣದ ಪುರಾಣ ಪ್ರಸಿದ್ಧ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಹರಕೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಸೋಮವಾರ ಪಟ್ಟಣದ ಸಿದ್ಧಿವಿನಾಯಕ ದೇವಸ್ಥಾನದ ಸನ್ನಿಧಿಗೆ ಆಗಮಿಸಿ ತನ್ನ ಅಭಿಮಾನಿಯೊಂದಿಗೆ ಹರಕೆಯನ್ನು ಸಲ್ಲಿಸಿದರು.

ರಿಪ್ಪನ್ ಪೇಟೆ ಪಟ್ಟಣದ ಬಿಜೆಪಿ ಕಟ್ಟಾ ಕಾರ್ಯಕರ್ತ ಹರೀಶ್ ಪ್ರಭು ಎಂಬುವರು ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣರವರ ಗೆಲುವಿಗಾಗಿ ಪಟ್ಟಣದ ಪುರಾಣ ಪ್ರಸಿದ್ದ ಶ್ರೀ ಸಿದ್ಧಿವಿನಾಯಕ ಸ್ವಾಮಿಗೆ ಬೆಣ್ಣೆ ಅಲಂಕಾರದ ಸೇವೆಯ ಹರಕೆ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಇಂದು ಅಭಿಮಾನಿಯೊಂದಿಗೆ ಪಟ್ಟಣದ ದೇವಸ್ಥಾನಕ್ಕೆ ಆಗಮಿಸಿ ಹರಕೆಯನ್ನು ಸಲ್ಲಿಸಿದ್ದಾರೆ.
ನಂತರ ಮಾತನಾಡಿದ ಹರೀಶ್ ಪ್ರಭು, ಮೂವತ್ತು ವರ್ಷಗಳಿಂದ ನಾನು ಸಂಘ ಹಾಗೂ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದೇನೆ, ನಾನು ಈಗಲೂ ಬಿಜೆಪಿ ಪಕ್ಷದ ಕಟ್ಟಾ ಕಾರ್ಯಕರ್ತನಾಗಿದ್ದು ನನ್ನ ರಕ್ತದ ನರ ನಾಡಿಗಳಲ್ಲಿ ಬಿಜೆಪಿ ಪಕ್ಷದ ಸಿದ್ಧಾಂತವಿದೆ ಆದರೆ ಶಾಸಕ ಬೇಳೂರು ಗೋಪಾಲಕೃಷ್ಣರವರ ಮಾನವೀಯ ಮೌಲ್ಯಗಳು ಹಾಗೂ ಅವರ ಉಪಕಾರದ ಮನೋಭಾವ ನನ್ನನ್ನು ಪಕ್ಷದ ಚೌಕಟ್ಟನ್ನು ಮೀರಿ ಅವರ ಪರವಾಗಿ ನಿಲ್ಲುವಂತೆ ಮಾಡಿದೆ.

Belur Gopalakrishna ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಬೇಳೂರು ಗೋಪಾಲಕೃಷ್ಣರವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ತಪ್ಪಿಸಲು ಕಾಣದ ಕೈಗಳು ಕೆಲಸ ಮಾಡಿದ್ದವು ಈ ಹಿನ್ನೆಲೆಯಲ್ಲಿ ಪಟ್ಟಣದ ಪುರಾಣ ಪ್ರಸಿದ್ಧ ಸಿದ್ಧಿ ವಿನಾಯಕ ಸ್ವಾಮಿಯ ಮೊರೆ ಹೋಗಿದ್ದೆ ಎಂದರು.
ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಪ್ರಚಂಡ ಬಹುಮತದೊಂದಿಗೆ ಗೆಲ್ಲುವುದರೊಂದಿಗೆ ನನ್ನ ಅಭಿಲಾಷೆ ಈಡೇರಿದೆ.

ಈ ಹಿನ್ನೆಲೆಯಲ್ಲಿ ಇಂದು ಅವರ ಸಮ್ಮುಖದಲ್ಲಿ ನನ್ನ ಹರಕೆಯನ್ನು ಸಲ್ಲಿಸಿದ್ದೇನೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕ ಸರ್ಕಾರದ ಮಂತ್ರಿಯಾಗುವುದರೊಂದಿಗೆ ಇನ್ನಷ್ಟು ಉನ್ನತ ಹುದ್ದೆಗೆ ಏರಲಿ ಎಂದು ಮತ್ತೆ ಹರಕೆ ಮಾಡಿಕೊಂಡಿದ್ದೇನೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...