Monday, February 2, 2026
Monday, February 2, 2026

Sahyadri Commerce Science College ಸಂಸ್ಥೆಗಳನ್ನ ಉತ್ತಮ ಧ್ಯೇಯೋದ್ದೇಶಗಳಿಂದ ನಡೆಸಿ- ಡಾ.ಟಿ.ಅವಿನಾಶ್

Date:

Sahyadri Commerce Science College ಉತ್ತಮ ಮೌಲ್ಯ, ಧ್ಯೇಯೋದ್ದೇಶದೊಂದಿಗೆ ಸಂಸ್ಥೆಯನ್ನು ಮುನ್ನಡೆಸುವುದು ಮುಖ್ಯ ಎಂದು ಸಹ್ಯಾದ್ರಿ ವಾಣಿಜ್ಯ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಟಿ.ಅವಿನಾಶ ಹೇಳಿದರು.
ಫ್ರೆಂಡ್ಸ್ ಸೆಂಟರ್ ಶಿವಮೊಗ್ಗದ 58ನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಸಮಾಜದಲ್ಲಿ ಬದಲಾವಣೆಯನ್ನು, ಪರಂಪರೆಯನ್ನು, ನ್ಯೂನತೆಯನ್ನು ತಿದ್ದುವ ಸರಿಪಡಿಸುವ ಪ್ರಯತ್ನವನ್ನು ಇಂತಹ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಬಿ.ಜಿ.ಧನರಾಜ ನೂತನ ಕಾರ್ಯಕಾರಿ ಸಮಿತಿಯೊಂದಿಗೆ ಅಧಿಕಾರ ಸ್ವೀಕರಿಸಿ ಮಾತನಾಡಿ, ಸ್ನೇಹದ ಸೇತುವೆ ಕಟ್ಟುವ ಮೂಲಕ ಸೇವೆಯ ಸ್ಪರ್ಶ ಸಂಸ್ಥೆಗೆ ನೀಡುವುದು ನನ್ನ ಉದ್ದೇಶ ಅಂತ ತಿಳಿಸಿದರು.
ಸಂಸ್ಥೆ ವತಿಯಿಂದ ಪ್ರತಿ ವರ್ಷ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದ್ದು, ಪ್ರಸ್ತಕ ಸಾಲಿನಲ್ಲಿಯೂ ಹೆಚ್ಚು ಸೇವಾ ಚಟುವಟಿಕೆಗಳನ್ನು ನಡೆಸಲಾಗುವುದು. ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಅಗತ್ಯ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.
Sahyadri Commerce Science College ಸಂಧ್ಯಾ ಸತ್ಯ ನಾರಾಯಣ ಪ್ರಾರ್ಥಿಸಿದರು. ಎಂ.ಎಂ.ವೆಂಕಟೇಶ ಸ್ವಾಗತಿಸಿದರು. ಫ್ರೆಂಡ್ಸ್ ಸೆಂಟರ್ ಹಾಗೂ ನೇತ್ರ ಭಂಡಾರ ನಡೆದು ಬಂದ ದಾರಿಯನ್ನು ಹಿರಿಯ ಸದಸ್ಯ ನಾಗರಾಜ ವಿವರಿಸಿದರು. ಸತ್ಯ ನಾರಾಯಣ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಮಲ್ಲಿಕಾರ್ಜುನ ಕಾನೂರ್ ವಾರ್ಷಿಕ ವರದಿ ವಾಚಿಸಿದರು. ಲೋಕೇಶ್ ಅವರು ನೂತನ ಅಧ್ಯಕ್ಷ ಬಿ.ಜಿ.ಧನರಾಜಗೆ ಅಧಿಕಾರ ಹಸ್ತಾಂತರಿಸಿದರು. ಜಿ.ವಿಜಯಕುಮಾರ ನೂತನ ಅಧ್ಯಕ್ಷರ ಪರಿಚಯಿಸಿದರು. ನಿಕಟಪೂರ್ವ ಅಧ್ಯಕ್ಷ ಲೋಕೇಶ್ ದಂಪತಿಗಳಿಗೆ ಸನ್ಮಾನಿಸಲಾಯಿತು. 14 ಜನ ನೂತನ ಸದಸ್ಯರು ಸೇರ್ಪಡೆಯಾದರು. ಮಹಿಳಾ ವಿಭಾಗದ ನಿಕಟಪೂರ್ವ ಅಧ್ಯಕ್ಷೆ ಸುನೀತಾ ಮೋಹನ್ ಅವರು ನೂತನ ಅಧ್ಯಕ್ಷೆ ಸಪ್ನಾ ಬದರಿನಾಥ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ನೂತನ ಕಾರ್ಯದರ್ಶಿ ರವೀಂದ್ರನಾಥ ಐತಾಳ ವಂದನಾರ್ಪಣೆ ನಡೆಸಿಕೊಟ್ಟರು. ನಿರೂಪಕಿ ರಂಜಿನಿ ದತ್ತಾತ್ತಿ ನಿರೂಪಣೆ ಮಾಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...