Friday, September 27, 2024
Friday, September 27, 2024

Rotary Club Shivamogga ಲಿಂಗತ್ವ ಅಲ್ಪ ಸಂಖ್ಯಾತರ ಬಗ್ಗೆಗಿನ ನಮ್ಮ ದೃಷ್ಟಿಕೋನ ಬದಲಾಗಬೇಕು-ಕಿರಣ್ ಕುಮಾರ್

Date:

Rotary Club Shivamogga ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಇಂಡಿಯಾ ಹಾಗೂ ರಕ್ಷಾ ಸಂಘ ಶಿವಮೊಗ್ಗದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಆರೋಗ್ಯ ತಪಾಸಣೆ ಮತ್ತು ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ವೇಳೆ ರೋಟರಿ ಕ್ಲಬ್ ಸೆಂಟ್ರಲ್ ನ ಅಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತರನ್ನು ಸಮಾಜದಲ್ಲಿ ನೋಡುವ ದೃಷ್ಟಿಕೋನ ಬದಲಾಗಬೇಕು ಹಾಗೂ ಗೌರವ ಸಮ್ಮಾನ ಅವರಿಗೆ ಸಿಗಬೇಕು ಎಂದು ಹೇಳಿದರು.

ರೋಟರಿ ಕ್ಲಬ್ ಸೆಂಟ್ರಲ್ ಅನ್ಸ್ ಕ್ಲಬ್ ಅಧ್ಯಕ್ಷರಾದ ಗೀತಾ ಜಗದೀಶ್ವರ ಮಾತನಾಡಿ, ಸಮಾಜದಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸಮಾನತೆ ದೊರೆಯಬೇಕು ಮತ್ತು ನಮ್ಮಲ್ಲೇ ನೀವು ಒಬ್ಬರು ಎಂದ ಅವರು, ಮುಂದಿನ ದಿನಗಳಲ್ಲಿ ನಿಮ್ಮ ಜೊತೆ ನಾವಿದ್ದೇವೆ ಎಂದು ತಿಳಿಸಿದರು.

Rotary Club Shivamogga ಕಾರ್ಯಕ್ರಮದಲ್ಲಿ ರಕ್ಷಾ ಸಂಘದ ಅಧ್ಯಕ್ಷ ಖಾನ್ ಮತ್ತು ಎಫ್ ಪೈನ ನ ಸತೀಶ್ ಮಾತನಾಡಿ, ರೋಟರಿ ಕ್ಲಬ್ ಅವರ ಸಹಯೋಗದಿಂದ ಇಂತಹ ಹಲವಾರು ಕಾರ್ಯಕ್ರಮಗಳು ನೆರವೇರಲಿದ್ದೇವೆಂದು ಆಶಿಸುತ್ತೇವೆ ಎಂದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ನ ಗಣೇಶ್ ಎಂ ಅಂಗಡಿ, ಪ್ರೋಟಿನ್ ಫುಡ್ ಅನ್ನು ಉಚಿತವಾಗಿ ನೀಡಿದರು.

ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಗವರ್ನರ್ ರವಿ ಕೋಟೋಜಿ, ವಿಜಯಕುಮಾರ್.ಜಿ ಹಾಗೂ ಅನ್ಸ್ ಅಧ್ಯಕ್ಷರಾದ ಗೀತಾ ಜಗದೀಶ್, ಸಹ ಕಾರ್ಯದರ್ಶಿ ನಯನ ಗಣೇಶ್, ರೊಟೇರಿಯನ್ ಜಯಶೀಲ ಶೆಟ್ಟಿ, ಧರ್ಮೇಂದ್ರ ಸಿಂಗ್, ಮೋಹನ್, ಸಂತೋಷ್.ಬಿ.ಎ, ಚಂದ್ರು.ಜೆ.ಪಿ, ಮಂಜುನಾಥ್ ಹೆಗಡೆ, ದೀಪಾ ಶೆಟ್ಟಿ, ಸುನಿತ ಗಣೇಶ್, ಜಗದೀಶ್, ಕಾರ್ಯದರ್ಶಿ ಈಶ್ವರ.ಬಿ.ವಿ ಉಪಸಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Hassan Manikya Prakashana ಶಿವಮೊಗ್ಗದ ಕವಿ ಶಿ.ಜು.ಪಾಶಾ ಅವರಿಗೆ “ಜನ್ನ ಕಾವ್ಯ ಪ್ರಶಸ್ತಿ”

Hassan Manikya Prakashana ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ...

Vajreshwari Co Operative Society ಶ್ರೀವಜ್ರೇಶ್ವರಿ ಸಹಕಾರ ಸಂಘದಿಂದ ಪ್ರತಿಭಾ ಪುರಸ್ಕಾರ

Vajreshwari Co Operative Society ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಶ್ರೀ...

Inner Wheel Shivamogga ದುರ್ಬಲರಿಗೆ ನೆರವು ನೀಡಿದಾಗ ಸೇವೆ ಸಾರ್ಥಕ- ಶಿಲ್ಪ ಗೋಪಿನಾಥ್

Inner Wheel Shivamogga ನಾವು ಮಾಡುವ ಸೇವೆ ಸಾರ್ಥಕಗೊಳ್ಳಬೇಕಾದರೆ...

National Education Committee ಬೆಳಗುತ್ತಿ & ಮಲ್ಲಿಗೇನಹಳ್ಳಿಯಲ್ಲಿ ಗಮನ ಸೆಳೆದ ಎನ್.ಎಸ್.ಎಸ್. ವಾರ್ಷಿಕ ಶಿಬಿರ

National Education Committee ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದಲ್ಲಿರಂಗಪ್ರಯೋಗದ...