Tuesday, April 29, 2025
Tuesday, April 29, 2025

High Court ಹತ್ತು ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿದ ನೌಕರರು ಖಾಯಂ ಮಾಡಲು ಅರ್ಹರು. ಹೈಕೋರ್ಟ್ ತೀರ್ಪು.

Date:

High Court 10 ವರ್ಷಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ನೌಕರರು ಖಾಯಂಗೆ ಅರ್ಹರು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಹತ್ತು ವರ್ಷಕ್ಕೂ ಅಧಿಕ ಸಮಯದಿಂದ ಕೆಲಸ ಮಾಡುತ್ತಿದ್ದ ನೌಕರರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ ಎಂಬ ಸರ್ಕಾರದ ಹಿಂಬರಹವನ್ನು ರದ್ದುಪಡಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಬಿ.ಎಂ ಶ್ಯಾಮ್ ಪ್ರಸಾದ್ ಅವರಿದ್ದ ಪೀಠವು, ಈ ನೌಕರರು ಖಾಯಂಮಾತಿಗೆ ಅರ್ಹರಾಗಿದ್ದು, ಮೂರು ತಿಂಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆದೇಶ ಹೊರಡಿಸಿತು.

ಸೇವೆ ಖಾಯಂಗೊಳಿಸಲು ನಿರಾಕರಿಸಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ನೀಡಿದ್ದ ಹಿಂಬರವನ್ನು ಪ್ರಶ್ನಿಸಿ ಮೈಸೂರಿನ ಶಾಂತಲಕ್ಷ್ಮಿ ಹಾಗೂ ಇತರರು ಹೈಕೋರ್ಟ್ ಗೆ ಪ್ರತ್ಯೇಕವಾಗಿ ರಿಟ್ ಅರ್ಜಿಗಳನ್ನು ಸಲ್ಲಿಸಿದ್ದರು. ಈ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ ಶ್ಯಾಮ್ ಪ್ರಸಾದ್ ಅವರಿದ್ದ ಪೀಠವು, ಒಂದೇ ಬಗೆಯ ಉದ್ಯೋಗ ಮಾಡುವವರನ್ನು ಭಿನ್ನ ರೀತಿಯಲ್ಲಿ ನೋಡಲಾಗದು.

High Court ಅರ್ಜಿದಾರರು 10 ವರ್ಷಗಳಿಗೂ ಅಧಿಕ ಕಾಲ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದ್ದಾರೆ. ಅವರನ್ನು ಹಂಗಾಮಿ ನೌಕರರಾಗಿಯೇ ಮುಂದುವರಿಸಲಾಗದು. ಅವರಿಗೆ ಅರ್ಹ ವೇತನ/ ಭತ್ಯೆಗಳನ್ನು ನೀಡಬೇಕಾಗುತ್ತದೆ. ಹಾಗಾಗಿ, ಉಮಾದೇವಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಅನುಸಾರ ಇವರು ಸೇವೆ ಖಾಯಂಗೆ ಅರ್ಹರು” ಎಂದು ತಿಳಿಸಿದೆ.
ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದ ಅರ್ಜಿದಾರರನ್ನು ಖಾಯಂಗೊಳಿಸಲು ನಿರಾಕರಿಸಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಹಿಂಬರಹನೀಡಿದ್ದವು. ಈ ಕ್ರಮವನ್ನು ಸಮರ್ಥಿಸಿಕೊಂಡಿದ್ದ ಸರ್ಕಾರ ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಅರ್ಜಿದಾರರನ್ನು ಮಂಜೂರಾದ ಹುದ್ದೆಗಳಿಗೆ ನೇಮಕ ಮಾಡಿಕೊಂಡಿರಲಿಲ್ಲ. ಬದಲಿಗೆ ಅವರನ್ನು ಮಂಜೂರಾಗದ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. ನ್ಯಾಯಾಲಯಗಳ ಅದೇಶದಿಂದಾಗಿ ಅರ್ಜಿದಾರರನ್ನು 10 ವರ್ಷಕ್ಕೂ ಅಧಿಕ ಸಮಯದಿಂದ ದಿನಗೂಲಿ ಸೇವೆಯಲ್ಲಿ ಮುಂದುವರಿಸಲಾಗಿದೆ.

ಹಾಗಾಗಿ ಅವರು ಸೇವೆ ಕಾಯಂಗೆ ಅನರ್ಹರು ಎಂದು ವಾದಿಸಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ

Yadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್...

Shivaganga Yoga Center ನಗರದ ಅತಿದೊಡ್ಡ ಬಾಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್

Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ...

Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರ

Sarva Samriddhi Sadhana Center ಹೊಸನಗರದ ರಿಪ್ಪನ್‌ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ...