Monday, February 2, 2026
Monday, February 2, 2026

Kim Star Udupi ಡಾ.ರಕ್ಷಾರಾವ್, ಜಿ.ವಿಜಯಕುಮಾರ್ ಮುಂತಾದವರು ರಾಜರತ್ನ ಪ್ರಶಸ್ತಿ ಘೋಷಣೆ

Date:

Kim Star Udupi ಕಿಮ್ ಸ್ಟಾರ್ ಉಡುಪಿ ವತಿಯಿಂದ ಆ. 25ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಬೆಂಗಳೂರು ಚಿತ್ರೋತ್ಸವ, ಸಿನಿಮಾ ಹಾಗೂ ಕಿರುಚಿತ್ರಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಮೊಗ್ಗದ ಸಾಧಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿದೆ.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವೈದ್ಯೆ ಡಾ. ರಕ್ಷಾ ರಾವ್, ಉದ್ಯಮಿ ಎ.ಆರ್.ಅವಿನಾಶ್, ವಿದ್ಯಾ, ಉಮಾ ದಿಲೀಪ್, ಪುನೀತ್ ಬೆಳ್ಳೂರು, ಪೂರ್ಣಿಮಾ, ಅಮೃತಾ ಹಾಗೂ ವಿಷ್ಣುಪ್ರಸಾದ್ ಅವರಿಗೆ ರಾಜರತ್ನ ಪ್ರಶಸ್ತಿ ನೀಡಿ ಅಭಿನಂದಿಸಲಾಗುತ್ತಿದೆ.
Kim Star Udupi ಬೆಂಗಳೂರಿನ ಮೂಡಲಪಾಳ್ಯ ಕಲ್ಯಾಣ ನಗರದಲ್ಲಿರುವ ಜ್ಞಾನ ಸೌಧದಲ್ಲಿ ಆ. 25ರಂದು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಸಾಧಕರು ಸೇರಿದಂತೆ ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದಿಸಲಾಗುತ್ತಿದೆ. ಅತ್ಯುತ್ತಮ ಕಿರುಚಿತ್ರಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಚಿತ್ರಗೀತೆಗಳ ಸಮ್ಮಿಲನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಕಿಮ್ ಸ್ಟಾರ್ ಉಡುಪಿ ಮುಖ್ಯಸ್ಥ ಕೆ.ಜಯಶೀಲ್ ತಿಳಿಸಿದ್ದಾರೆ.
ವಿಜಯನಗರ ವಿಧಾನಸಭಾ ಕ್ಷೇತ್ರ ಶಾಸಕ ಎಂ.ಕೃಷ್ಣಪ್ಪ ಅಧ್ಯಕ್ಷತೆ ವಹಿಸುವರು. ಗೋವಿಂದರಾಜಪುರ ಶಾಸಕ ಎಂ.ಪ್ರಿಯಕೃಷ್ಣ ಉದ್ಘಾಟಿಸುವರು. ಚಲನಚಿತ್ರ ಮಂಡಳಿ ಸದಸ್ಯ ಚಿಕ್ಕಣ್ಣ, ಬಿಬಿಎಂಪಿ ಸದಸ್ಯೆ ತಾರಾ ಲೋಕೇಶ್, ನಟಿ ಗೀತಾ ಮತ್ತಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...