Tuesday, March 24, 2026
Tuesday, March 24, 2026

Department of Social Welfare ಸಿಬ್ಬಂದಿಗಳು ಹಾಸ್ಟೆಲ್ ವಿದ್ಯಾರ್ಥಿಗಳ ಸೌಲಭ್ಯಕ್ಕೆ ಕೊರತೆ ಮಾಡಿದರೆ ಕಠಿಣ ಕ್ರಮ- ಶಾಸಕ ವಿಜಯೇಂದ್ರ

Date:

Department of Social Welfare ಶಿಕಾರಿಪುರ ಪಟ್ಟಣದ ಬಿಸಿಎಂ, ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಶಾಸಕ ಬಿ.ವೈ.ವಿಜಯೇಂದ್ರ ದಿಢೀರ್ ಭೇಟಿ ನೀಡಿ ಅಲ್ಲಿನ ಸಮಸ್ಯೆ ಕುರಿತು ವಿದ್ಯಾರ್ಥಿಗಳೊಂದಿಗೆ
ಮಾತನಾಡಿದರು.

ಶಿಕಾರಿಪುರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿದ ಶಾಸಕ ಬಿ.ವೈ.ವಿಜಯೇಂದ್ರ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು.

ಅಡುಗೆ ಸಿಬ್ಬಂದಿ ನಿತ್ಯ ಆಹಾರ ಪದಾರ್ಥ, ದಿನಸಿ ಮನೆಗೆ ತೆಗೆದುಕೊಂಡು ಹೋಗುತ್ತಾರೆ, ಅಡುಗೆಯಲ್ಲಿ ತರಕಾರಿ ಕಡಿಮೆ ಇರುತ್ತದೆ, ಗುಣಮಟ್ಟದ ಆಹಾರ ಇರುವುದಿಲ್ಲ, ಹಾಸ್ಟೆಲ್ ಕಿಡಕಿ ಒಡೆದಿದ್ದು ವಿದ್ಯಾರ್ಥಿನಿಯರು ತೊಂದರೆ ಪಡುವಂತಾಗಿದೆ, ಸೊಳ್ಳೆ ಬತ್ತಿ ನೀಡುತ್ತಿಲ್ಲ, ಕಿಟ್ ವಿತರಣೆ ಪ್ರತಿ ತಿಂಗಳು ನೀಡಿಲ್ಲ, ಪೈಪ್ ದುರಸ್ಥಿ ಕಾರಣಕ್ಕೆ ಬಿಸಿನೀರು ಸಿಗುತ್ತಿಲ್ಲ, ಮೊಟ್ಟೆ, ಬಾಳೆಹಣ್ಣು ಅಸಮರ್ಪಕ ವಿತರಣೆ ಸೇರಿದಂತೆ ಹಲವು ಸಮಸ್ಯೆ ಹೇಳಿಕೊಂಡರು.

Department of Social Welfare ಶಾಸಕ ಬಿ.ವೈ.ವಿಜಯೇಂದ್ರ ಅಧಿಕಾರಿಗಳಿಗೆ ಸ್ಥಳಕ್ಕೆ ಕರೆಯಿಸಿ ಮಾತನಾಡಿ, ಹಾಸ್ಟೆಲ್ ಸಮಸ್ಯೆ ಸರಿಪಡಿಸುವುದು ಶಾಸಕನಾದ ನನ್ನ ಕರ್ತವ್ಯವೂ ಹೌದು. ಸರಕಾರ ಬಡ, ಪ್ರತಿಭಾವಂತ ಮಕ್ಕಳ ಶಿಕ್ಷಣಕ್ಕೆ ಸಾಕಷ್ಟು ಸೌಲಭ್ಯ ನೀಡುತ್ತಿದೆ ಅದು ವಿದ್ಯಾರ್ಥಿಗಳಿಗೆ ತಲುಪಬೇಕು ಅದು ಆಗದಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಡೆಂಗ್ಯು ಜ್ವರ ಹೆಚ್ಚಿರುವ ಈ ದಿನಗಳಲ್ಲಿ ಕಿಟಕಿ ಸರಿಪಡಿಸಬೇಕು, ಸೊಳ್ಳೆ ಬತ್ತಿ ಕೂಡಲೆ ನೀಡುವುದಕ್ಕೆ ವ್ಯವಸ್ಥೆ ಮಾಡಬೇಕು, ಊಟದ ವಿಷಯದಲ್ಲಿ ಮಕ್ಕಳಿಗೆ ಅನ್ಯಾಯ ಆದರೆ ಸಹಿಸುವುದಿಲ್ಲ ನಿಮ್ಮ ಮನೆಯ ಮಕ್ಕಳಂತೆ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಕಾಣಬೇಕು ಮುಂದಿನ ಭೇಟಿ ವೇಳೆಗೆ ಸಮಸ್ಯೆ ಸರಿಯಾಗಬೇಕು ಎಂದು ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

India Scouts and Guides ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ

India Scouts and Guides ಸಮಾಜದ ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು...

B.Y. Raghavendra ಯೋಜನೆಗಳು-ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು : ಬಿ.ವೈ.ರಾಘವೇಂದ್ರ

B.Y. Raghavendra ಪ್ರತಿಯೊಬ್ಬ ನಾಗರೀಕರಿಗೆ ಆರ್ಥಿಕ ಸಬಲೀಕರಣ ನೀಡಬೇಕೆಂಬ ಉದ್ದೇಶದಿಂದ ಅನುಷ್ಟಾನಗೊಳಿಸಲಾಗಿರುವ...

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...