Wednesday, July 8, 2026
Wednesday, July 8, 2026

Department of Social Welfare ಸಿಬ್ಬಂದಿಗಳು ಹಾಸ್ಟೆಲ್ ವಿದ್ಯಾರ್ಥಿಗಳ ಸೌಲಭ್ಯಕ್ಕೆ ಕೊರತೆ ಮಾಡಿದರೆ ಕಠಿಣ ಕ್ರಮ- ಶಾಸಕ ವಿಜಯೇಂದ್ರ

Date:

Department of Social Welfare ಶಿಕಾರಿಪುರ ಪಟ್ಟಣದ ಬಿಸಿಎಂ, ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಶಾಸಕ ಬಿ.ವೈ.ವಿಜಯೇಂದ್ರ ದಿಢೀರ್ ಭೇಟಿ ನೀಡಿ ಅಲ್ಲಿನ ಸಮಸ್ಯೆ ಕುರಿತು ವಿದ್ಯಾರ್ಥಿಗಳೊಂದಿಗೆ
ಮಾತನಾಡಿದರು.

ಶಿಕಾರಿಪುರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿದ ಶಾಸಕ ಬಿ.ವೈ.ವಿಜಯೇಂದ್ರ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು.

ಅಡುಗೆ ಸಿಬ್ಬಂದಿ ನಿತ್ಯ ಆಹಾರ ಪದಾರ್ಥ, ದಿನಸಿ ಮನೆಗೆ ತೆಗೆದುಕೊಂಡು ಹೋಗುತ್ತಾರೆ, ಅಡುಗೆಯಲ್ಲಿ ತರಕಾರಿ ಕಡಿಮೆ ಇರುತ್ತದೆ, ಗುಣಮಟ್ಟದ ಆಹಾರ ಇರುವುದಿಲ್ಲ, ಹಾಸ್ಟೆಲ್ ಕಿಡಕಿ ಒಡೆದಿದ್ದು ವಿದ್ಯಾರ್ಥಿನಿಯರು ತೊಂದರೆ ಪಡುವಂತಾಗಿದೆ, ಸೊಳ್ಳೆ ಬತ್ತಿ ನೀಡುತ್ತಿಲ್ಲ, ಕಿಟ್ ವಿತರಣೆ ಪ್ರತಿ ತಿಂಗಳು ನೀಡಿಲ್ಲ, ಪೈಪ್ ದುರಸ್ಥಿ ಕಾರಣಕ್ಕೆ ಬಿಸಿನೀರು ಸಿಗುತ್ತಿಲ್ಲ, ಮೊಟ್ಟೆ, ಬಾಳೆಹಣ್ಣು ಅಸಮರ್ಪಕ ವಿತರಣೆ ಸೇರಿದಂತೆ ಹಲವು ಸಮಸ್ಯೆ ಹೇಳಿಕೊಂಡರು.

Department of Social Welfare ಶಾಸಕ ಬಿ.ವೈ.ವಿಜಯೇಂದ್ರ ಅಧಿಕಾರಿಗಳಿಗೆ ಸ್ಥಳಕ್ಕೆ ಕರೆಯಿಸಿ ಮಾತನಾಡಿ, ಹಾಸ್ಟೆಲ್ ಸಮಸ್ಯೆ ಸರಿಪಡಿಸುವುದು ಶಾಸಕನಾದ ನನ್ನ ಕರ್ತವ್ಯವೂ ಹೌದು. ಸರಕಾರ ಬಡ, ಪ್ರತಿಭಾವಂತ ಮಕ್ಕಳ ಶಿಕ್ಷಣಕ್ಕೆ ಸಾಕಷ್ಟು ಸೌಲಭ್ಯ ನೀಡುತ್ತಿದೆ ಅದು ವಿದ್ಯಾರ್ಥಿಗಳಿಗೆ ತಲುಪಬೇಕು ಅದು ಆಗದಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಡೆಂಗ್ಯು ಜ್ವರ ಹೆಚ್ಚಿರುವ ಈ ದಿನಗಳಲ್ಲಿ ಕಿಟಕಿ ಸರಿಪಡಿಸಬೇಕು, ಸೊಳ್ಳೆ ಬತ್ತಿ ಕೂಡಲೆ ನೀಡುವುದಕ್ಕೆ ವ್ಯವಸ್ಥೆ ಮಾಡಬೇಕು, ಊಟದ ವಿಷಯದಲ್ಲಿ ಮಕ್ಕಳಿಗೆ ಅನ್ಯಾಯ ಆದರೆ ಸಹಿಸುವುದಿಲ್ಲ ನಿಮ್ಮ ಮನೆಯ ಮಕ್ಕಳಂತೆ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಕಾಣಬೇಕು ಮುಂದಿನ ಭೇಟಿ ವೇಳೆಗೆ ಸಮಸ್ಯೆ ಸರಿಯಾಗಬೇಕು ಎಂದು ಎಚ್ಚರಿಕೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...