Sunday, December 7, 2025
Sunday, December 7, 2025

Bear News ಆತಂಕ ಹುಟ್ಟಿಸಿದ್ದ ಜಾಂಬವಂತನ ಸೆರೆ

Date:

Bear News ಕಳೆದ ಕೆಲವು ದಿನದಿಂದ ಆತಂಕ ಸೃಷ್ಟಿಸಿದ್ದ ಕರಡಿ ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ತಟ್ಟೆಹಳ್ಳಿಯ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಇರಿಸಿದ್ದ ಬೋನಿಗೆ ಕಳೆದ ರಾತ್ರಿ ಕರಡಿ ಸೆರೆ ಸಿಕ್ಕಿದೆ. ಇದರಿಂದ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಚೌಡಮ್ಮ ದೇವಸ್ಥಾನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್‌ ಇರಿಸಿದ್ದರು. ರಾತ್ರಿ 2.45ಕ್ಕೆ ದೇಗುಲದ ಬಳಿ ಬಂದ ಕರಡಿ ಬೋನಿಗೆ ಬಿದ್ದಿದೆ. ಈ ದೃಶ್ಯ ದೇಗುಲದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಷಯ ತಿಳಿದು ದೊಡ್ಡ ಸಂಖ್ಯೆ ಜನರು ದೇಗುಲದ ಬಳಿ ಜಮಾಯಿಸಿದ್ದರು.
ಸುತ್ತಮುತ್ತಲ ಗ್ರಾಮದಲ್ಲಿ ಆತಂಕ ಮೂಡಿಸಿತ್ತು
ಕರಡಿ ಪ್ರತ್ಯಕ್ಷವಾಗಿದ್ದರಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಉಂಟಾಗಿತ್ತು. ಅಗಸನಹಳ್ಳಿ, ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ದಾಸರಕಲ್ಲಹಳ್ಳಿ, ತಿಮ್ಲಾಪುರ, ತಿಮ್ಲಾಪುರ ಕ್ಯಾಂಪ್, ಜಂಬರಘಟ್ಟೆ, ವಿಠಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರಡಿ ಕಾಣಿಸುತ್ತಿತ್ತು. ಜಮೀನು ಕೆಲಸಕ್ಕೆ ತೆರಳಲು ರೈತರು, ಕಾರ್ಮಿಕರು ಹಿಂದೇಟು ಹಾಕುತ್ತಿದ್ದರು. ರಾತ್ರಿ ವೇಳೆ ಒಬ್ಬಂಟಿಯಾಗಿ ಓಡಾಡಲು ಹೆದರುತ್ತಿದ್ದರು.
ವ್ಯಕ್ತಿ ಮೇಲೆ ದಾಳಿ ನಡೆಸಿತ್ತು
Bear News ಎಮ್ಮೆಹಟ್ಟಿ ಗ್ರಾಮದ ಆನಂದಪ್ಪ ಎಂಬುವರ ಮೇಲೆ ಕೆಲ ದಿನಗಳ ಹಿಂದೆ ಕರಡಿ ದಾಳಿ ನಡೆಸಿತ್ತು. ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ಸಂದರ್ಭ ಏಕಾಏಕಿ ದಾಳಿಗೆ ಆನಂದಪ್ಪ ಗಾಯಗೊಂಡಿದ್ದರು. ಅವರು ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು. ದಾಳಿಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿತ್ತು.
ಗ್ರಾಮಸ್ಥರ ಆತಂಕದ ನಡುವೆ ಮಾವಿನಕಟ್ಟೆ ವಲಯ ಅರಣ್ಯ ಅಧಿಕಾರಿಗಳು ಕರಡಿಯ ಚಲನವಲನ ಗಮನಿಸಿ ಬೋನ್‌ ಇರಿಸಿದ್ದರು. ಆರ್‌ಎಫ್‌ಒ ಜಗದೀಶ ಮಾರ್ಗದರ್ಶನದಲ್ಲಿ ಬೋನ್‌ ಇರಿಸಿದ್ದು, ಇವತ್ತು ಕರಡಿ ಸೆರೆಯಾಗಿದೆ. ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊಂಡೊಯ್ದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...