Wednesday, October 2, 2024
Wednesday, October 2, 2024

New Pension Scheme ಈಗ ಎನ್ ಪಿ ಎಸ್ ಅಲ್ಲ ಯುಪಿಎಸ್ ಪಿಂಚಣಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

Date:

New Pension Scheme ಹೊಸ ಪಿಂಚಣಿ ಯೋಜನೆ ಅಥವಾ ರಾಷ್ಟ್ರೀಯ ಪಿಂಚಣಿ ಯೋಜನೆಗೆ ( ಎನ್ ಪಿಎಸ್ ) ಗೆ ತೀವ್ರ ವಿರೋಧ ವ್ಯಕ್ತವಾಗಿರುವ ನಡುವೆ, ಏಕೀಕೃತ ಪಿಂಚಣಿ ಯೋಜನೆಗೆ ( ಯುಪಿಎಸ್) ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಈ ಮೂಲಕ ಸರ್ಕಾರಿ ನೌಕರರಿಗೆ ನಿವೃತ್ತಿಯ ಬಳಿಕ ಮೂಲ ವೇತನದ ಕನಿಷ್ಠ 50% ಪಿಂಚಣಿಯಾಗಿ ನೀಡಲು ಸರ್ಕಾರ ನಿರ್ಧರಿಸಿದೆ.
ಸಚಿವ ಸಂಪುಟದ ನಿರ್ಧಾರಗಳನ್ನು ಪ್ರಕಟಿಸಿದ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ “ಏಕಿಕೃತ ಪಿಂಚಣಿ ಯೋಜನೆ ( ಯುಪಿಎಸ್ ) ಅಡಿ ಸರ್ಕಾರಿ ನೌಕರರು ನಿವೃತ್ತಿಯ ಹಿಂದಿನ 12 ತಿಂಗಳ ಸರಾಸರಿ ಮೂಲ ವೇತನದ ಕನಿಷ್ಠ ಶೇ. 50ರಷ್ಟನ್ನು ಪಿಂಚಣಿಯಾಗಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

New Pension Scheme ಎನ್ ಪಿಎಸ್ ಆಯ್ಕೆ ಮಾಡಿಕೊಂಡವರಿಗೆ ಈಗ ಯುಪಿಎಸ್ ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. ಕನಿಷ್ಠ 25 ವರ್ಷ ಕೆಲಸ ಮಾಡಿದವರಿಗೆ ಮೂಲ ವೇತನದ ಶೇ.50ರಷ್ಟು ಪಿಂಚಣಿಯಾಗಿ ಸಿಗಲಿದೆ. ಅದಕ್ಕಿಂತ ಕಡಿಮೆ ವರ್ಷ ಕೆಲಸ ಮಾಡಿದವರಿಗೆ ಸಿಗುವ ಮೊತ್ತ ಕಡಿಮೆಯಾಗಲಿದೆ.

ಯುಪಿಎಸ್ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ನಿಯೋಜಿತ ಸಂಪುಟ ಕಾರ್ಯದರ್ಶಿ ಟಿ.ವಿ ಸೋಮನಾಥ್ ಅವರು ಹೊಸ ಯೋಜನೆಯು 2025ರ ಏಪ್ರಿಲ್ 1ರಿಂದ ಅನ್ವಯವಾಗಲಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...