Tuesday, February 3, 2026
Tuesday, February 3, 2026

Karkala Police ಕಾರ್ಕಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿ ಯೋರ್ವಳ ಮೇಲೆ ಅತ್ಯಾಚಾರ ಪ್ರಕರಣ

Date:

Karkala Police ಮದ್ಯದಲ್ಲಿ ಅಮಲು ಬರಿಸುವ ಪದಾರ್ಥ ಸೇರಿಸಿ ನೀಡಿ, ಯುವತಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.

ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಅತ್ಯಾಚಾರ ಎಸಗಿದ ಬಗ್ಗೆ 24 ವರ್ಷದ ಯುವತಿಯ ಪೋಷಕರು ಶುಕ್ರವಾರ ಸಂಜೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು.

ದೂರಿನ ಪ್ರಕಾರ, ಅಲ್ತಾಫ್‌ ಎಂಬಾತ ಸುಮಾರು ಮೂರು ತಿಂಗಳ ಹಿಂದೆ ಯುವತಿಗೆ ಇನ್‌ಸ್ಟ್ರಾಗ್ರಾಮ್‌ ಮೂಲಕ ಪರಿಚಯವಾಗಿದ್ದ.
ಈತನೂ ಕಾರ್ಕಳದವನೇ ಆಗಿದ್ದಾನೆ.”ಈತ ಶುಕ್ರವಾರ ಮಧ್ಯಾಹ್ನ ಯುವತಿ ಕೆಲಸ ಮಾಡುವ ಸ್ಥಳಕ್ಕೆ ಹೋಗಿದ್ದ. ನಂತರ ಆಕೆಯನ್ನು ಒತ್ತಾಯಪೂರ್ವಕವಾಗಿ ಕಾರಿನ ಒಳಕ್ಕೆ ಕರೆದು, ಕಿಡ್ನಾಪ್ ಮಾಡಿ ಕರೆದೊಯ್ದಿದ್ದ,” ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಕೆ. ಅರುಣ್‌ ವಿವರ ನೀಡಿದ್ದಾರೆ.

Karkala Police ಸ್ಥಳವೊಂದರಲ್ಲಿ ಗಾಡಿ ನಿಲ್ಲಿಸಿದಾಗ ಅಲ್ಲಿಗೆ ಆತನ ಸ್ನೇಹಿತರು ಬಂದು ಜತೆಯಾಗಿದ್ದರು. ಇವರು ತಮ್ಮೊಂದಿಗೆ ಬಿಯರ್ ಬಾಟಲಿ ತಂದಿದ್ದರು. ಈ ಬಿಯರ್‌ಗೆ ಅಲ್ತಾಫ್‌ ಬೇರೆ ಏನೋ ಅಮಲು ಪದಾರ್ಥವನ್ನು ಮಿಶ್ರಣ ಮಾಡಿ ನೀಡಿ, ನನಗೆ ನೀಡಿದ್ದ. ನಂತರ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ದೂರಿದ್ದಾಳೆ.ಕಾರ್ಕಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅತ್ಯಾಚಾರ ಎಸಗಿದ ಅಲ್ತಾಫ್‌ನನ್ನು ಈಗಾಗಲೇ ಬಂಧಿಸಿದ್ದಾರೆ. ಯುವತಿಯನ್ನು ಕರೆದುಕೊಂಡು ಹೋದ ಗಾಡಿಯನ್ನು ಕೂಡ ವಶಕ್ಕೆ ಪಡೆದಿದ್ದಾರೆ.ಅಲ್ತಾಫ್‌ಗೆ ಬಿಯರ್‌ ಬಾಟಲಿಯನ್ನು ತಂದು ನೀಡಿದ ಕ್ಸೇವಿಯರ್‌ ರಿಚರ್ಡ್‌ ಕ್ವಾದ್ರಾಸ್‌ನ್ನು ಕೂಡ ಬಂಧಿಸಲಾಗಿದ್ದು, ಆತನ ಗಾಡಿಯನ್ನೂ ವಶಕ್ಕೆ ಪಡೆಯಲಾಗಿದೆ. ತನ್ನ ಕೃತ್ಯ ಎಸಗಿದ ನಂತರ ಅಲ್ತಾಫ್ ಯುವತಿಯನ್ನು ಅವರ ಮನೆಯಲ್ಲಿ ಬಿಟ್ಟು ಹೋಗಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಪ್ರಸ್ತುತ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ (ಕೆಎಂಸಿ) ಆಸ್ಪತ್ರೆ ಗೆ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...