Sunday, December 14, 2025
Sunday, December 14, 2025

Daivajna Mahila Mandali ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು- ಸೀಮಾ ಸದಾನಂದ್

Date:

Daivajna Mahila Mandali ನಮ್ಮ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿ ಬೆಳೆಸಿಕೊಂಡು ಮುಂದಿನ ಪೀಳಿಗೆಯವರಿಗೆ ತಿಳಿಸುವುದು ಅಗತ್ಯ ಎಂದು ದೈವಜ್ಞ ಮಹಿಳಾ ಮಂಡಳಿ ಅಧ್ಯಕ್ಷೆ ಸೀಮಾ ಸದಾನಂದ್ ಹೇಳಿದರು.

ಶಿವಮೊಗ್ಗ ನಗರದಲ್ಲಿ ದೈವಜ್ಞ ಮಹಿಳಾ ಮಂಡಳಿಯಿಂದ ಏರ್ಪಡಿಸಿದ್ದ ಅರಿಸಿಣ -ಕುಂಕುಮ ಕಾರ್ಯಕ್ರಮ ನೆರವೇರಿಸಿ ಮಾತನಾಡಿ, ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಮಹಿಳಾ ಮಂಡಳಿಯಿಂದ ಹಮ್ಮಿಕೊಳ್ಳುತ್ತೇವೆ ಎಂದು ತಿಳಿಸಿದರು.

ಶ್ರಾವಣ ಮಾಸದಲ್ಲಿ ದೈವಜ್ಞ ಮಹಿಳಾ ಮಂಡಳಿಯಿಂದ 28 ವರ್ಷದಿಂದಲೂ ಅರಿಶಿಣ-ಕುಂಕುಮ ಕಾರ್ಯಕ್ರಮ ನಡೆಸಲಾಗುತ್ತಿದೆ. ಶ್ರಾವಣ ಮಾಸದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುವ ಜತೆಯಲ್ಲಿ ಸೇವಾ ಚಟುವಟಿಕೆಗಳನ್ನು ಸಹ ನಡೆಸಲಾಗುತ್ತದೆ ಎಂದರು.

ಶ್ರಾವಣ ಮಾಸದ ಶುಕ್ರವಾರ ಸಮಾಜದ ಮಹಿಳೆಯರೆಲ್ಲರೂ ಸೇರಿ ಲಲಿತಾ ಸಹಸ್ರನಾಮ, ಭಜನೆ ಮಾಡಿ ಲಕ್ಷ್ಮೀ ಪೂಜೆಯನ್ನು ಮಾಡಿದರು. ಅರಿಶಿಣ-ಕುಂಕುಮ ಕೊಟ್ಟು ಪ್ರಸಾದ ವಿನಿಯೋಗ ನಡೆಸಲಾಯಿತು. ಆರ್ಥಿಕವಾಗಿ ಹಿಂದುಳಿದ ಮಹಿಳೆಗೆ ಸ್ವಾವಲಂಬಿಯಾಗಿ ಜೀವನ ನಡೆಸಲು ಅಗತ್ಯವಾದ ಜಿಗ್-ಜಾಗ್ ಮಿಷನ್ ಕೊಡಲಾಯಿತು.

Daivajna Mahila Mandali ಇದೇ ಸಂದರ್ಭದಲ್ಲಿ ಶಂಕರ್ ಕಣ್ಣಿನ ಆಸ್ಪತ್ರೆಯ ಮುಖ್ಯ ಅಧಿಕಾರಿ ಡಾ. ಕಮಲಾ ಅವರು ಕಣ್ಣು ಹಾಗೂ ಗ್ಲೂಕೋಮಿಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಕಣ್ಣು ತುಂಬಾ ಸೂಕ್ಷ್ಮ ಆಗಿದ್ದು, ಗ್ಲೂಕೋಮಿಯ ಎಂಬ ಕಣ್ಣಿನ ಕಾಯಿಲೆ ಹೇಗೆ ಬರುತ್ತದೆ ಎಂದು ತಿಳಿಯುವುದಿಲ್ಲ. ಆದ್ದರಿಂದ ಜಾಗೃತರಾಗಿ ಸಕಾಲದಲ್ಲಿ ಕಣ್ಣುಗಳನ್ನು ಪರೀಕ್ಷಿಸಿಕೊಳ್ಳಬೇಕು ಎಂದು ತಿಳಿಸಿದರು.

ಶ್ರಾವಣ ಮಾಸ ಬಂತೆAದರೆ ಹೆಣ್ಣು ಮಕ್ಕಳಿಗೆ ಸಂಭ್ರಮದ ತಿಂಗಳು. ರಾಖಿ ಕಟ್ಟುವ ಮೂಲಕ ಸಂಭ್ರಮಿಸುವ ಹಬ್ಬ. ನಮಗೆ ರಕ್ಷಣೆ ನೀಡುವ ಆರಕ್ಷರನ್ನು ರಾಖಿ ಕಟ್ಟಿ ರಾಖಿಹಬ್ಬವನ್ನು ಆಚರಿಸಬೇಕೆಂಬ ಅಧ್ಯಕ್ಷರ ಆಶಯದಂತೆ ಅಡಿಷನಲ್ ಸೂಪರಿಡೆಂಟ್ ಆಫ್ ಪೋಲಿಸ್ ಅನಿಲ್ ಕುಮಾರ್ ಬೊಮ್ಮಾರೆಡ್ಡಿ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ರಾಖಿ ಕಟ್ಟಲಾಯಿತು. ಅಗತ್ಯ ಮಾಹಿತಿಯನ್ನು ಹಂಚಿಕೊಂಡರು.

ಎಲ್ಲ ಮಹಿಳೆಯರು ರಾಖಿಯನ್ನು ಕಟ್ಟಿ, ಸಿಹಿ ತಿನ್ನಿಸಿ ಆರತಿ ತೆಗೆದರು. ಇದೊಂದು ವಿಶೇಷ ಕಾರ್ಯಕ್ರಮ ಆಗಿತ್ತು. ಎಲ್ಲ ಮಹಿಳೆಯರು ಶ್ರಾವಣ ಮಾಸದ ಹಬ್ಬವನ್ನು ಸಂತೋಷದಿಂದ ಸಂಭ್ರಮಿಸಿದರು.

ಮಾಜಿ ಅಧ್ಯಕ್ಷೆ, ಉಪಾಧ್ಯಕ್ಷರಾದ ಪ್ರೇಮ ರಮೇಶ್, ಅರ್ಚನಾ ಅಣ್ಣಪ್ಪ, ಕಾರ್ಯದರ್ಶಿ ವಾಣಿ ಪ್ರವೀಣ್, ಸಹ ಕಾರ್ಯದರ್ಶಿ ಚೇತನಾ ವಾದಿರಾಜ್, ಸು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...