Sunday, August 2, 2026
Sunday, August 2, 2026

Cosmo Club Shivamogga ರೋಟರಿ ಸೇವಾಕಾರ್ಯಗಳನ್ನ ಜನರಿಗೆ ಮುಟ್ಟಿಸುವುದು ನಮ್ಮ ಮೊದಲಕಾರ್ಯ- ರಾಜು ಸುಬ್ರಹ್ಮಣ್ಯ

Date:

Cosmo Club Shivamogga ಸಮಾಜಮುಖಿ ಕಾರ್ಯಕ್ರಮಗಳಿಂದ ರೋಟರಿ ಸಂಸ್ಥೆಯು ವಿಶ್ವಾದ್ಯಂತ ಜನಮಾನಸದಲ್ಲಿ ಸದಾ ಉಳಿದಿದೆ ಎಂದು ಅಂತರಾಷ್ಟ್ರೀಯ ರೋಟರಿ ಸಂಸ್ಥೆ ನಿರ್ದೆಶಕ ರಾಜು ಸುಬ್ರಮಣ್ಯ ಹೇಳಿದರು.
ಶಿವಮೊಗ್ಗ ನಗರದ ಕಾಸ್ಮೋ ಕ್ಲಬ್‌ನಲ್ಲಿ ರೋಟರಿ ಕ್ಲಬ್ ಉತ್ತರ ಸಂಸ್ಥೆ ಸಾರಥ್ಯದಲ್ಲಿ ಆಯೋಜಿಸಿದ್ದ ಜಿಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭ, ಪಬ್ಲಿಕ್ ಇಮೇಜ್, ಸದಸ್ವತ್ವ ಅಭಿವೃದ್ಧಿ ಸಮಾವೇಶ ಕುರಿತ ಎರಡು ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹೆಚ್ಚು ಸದಸ್ಯರು ರೋಟರಿ ಸೇರುವುದರಿಂದ ಹೆಚ್ಚೆಚ್ಚು ಸಮಾಜಮುಖಿ ಸೇವಾ ಚಟುವಟಿಕೆಗಳನ್ನು ನಾವೆಲ್ಲರೂ ಮಾಡಲು ಸಾಧ್ಯ ಎಂದು ತಿಳಿಸಿದರು.
Cosmo Club Shivamogga ರೋಟರಿ ಸೇವಾ ಕಾರ್ಯಗಳನ್ನು ಜನರಿಗೆ ತಲುಪಿಸುವುದು ನಮ್ಮ ಮೊದಲ ಕಾರ್ಯವಾಗಬೇಕು. ಇದರಿಂದ ರೋಟರಿ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯ. ರೋಟರಿ ಸಂಸ್ಥೆಯ ಪ್ರಮುಖ ಸೇವೆಗಳಾದ ಪೋಲಿಯೋ ನಿರ್ಮೂಲನೆ, ಸಾಕ್ಷರತೆ, ನಿರಂತರ ಸಮಾಜಮುಖಿ ಸೇವಾ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಎಂದರು.
ಸೆಮಿನಾರ್ ಚೇರ್ಮನ್ ಶ್ರೀನಾಥ್ ಗಿರಿಮಾಜಿ ಸ್ವಾಗತಿಸಿ ಮಾಹಿತಿ ನೀಡಿದರು. ಜಿಲ್ಲಾ ಮಾಜಿ ಗವರ್ನರ್ ರಾಜಾರಾಮ್ ಭಟ್ ಸಮಾರಂಭದ ಉದ್ದೇಶದ ಕುರಿತು ಮಾತನಾಡಿದರು. ಜಿಲ್ಲಾ ಮಾಜಿ ಗವರ್ನರ್ ದೀಪಕ್ ಪುರೋಹಿತ್ ರೋಟರಿಯಲ್ಲಿ ಸದಸ್ಯರ ಪಾತ್ರ ಕುರಿತು ಮಾತನಾಡಿದರು. ಜಿಲ್ಲಾ ಮಾಜಿ ಗವರ್ನರ್ ಅಭಿನಂದನ್ ಶೆಟ್ಟಿ ಅವರಿಗೆ ಅಭಿನಂದಿಸಲಾಯಿತು.
ಜಿಲ್ಲಾ ಗವರ್ನರ್ ಸಿ.ಎ.ದೇವಾನಂದ್, ಜಿಲ್ಲಾ ಮಾಜಿ ಗವರ್ನರ್ ಡಾ. ಗೌರಿ, ನಿಕಟಪೂರ್ವ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ, ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಜ್ಞಾನ ವಸಂತ, ರವೀಂದ್ರನಾಥ ಐತಾಳ್, ಸಹಾಯಕ ಗವರ್ನರ್ ಎಸ್.ಆರ್.ನಾಗರಾಜ್, ರೋಟರಿ ಉತ್ತರ ಅಧ್ಯಕ್ಷ ಸುಂದರ್, ಜಿಲ್ಲಾ ಕಾರ್ಯದರ್ಶಿ ರಾಮದೇವ ಕಾರಂತ್ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...