Thursday, June 18, 2026
Thursday, June 18, 2026

Department of Youth Empowerment and Sports ಆಗಸ್ಟ್ 29, ರಾಷ್ಟ್ರೀಯ ಕ್ರೀಡಾದಿನ. ಶಿವಮೊಗ್ಗದಲ್ಲಿ ವಿವಿಧ ಕ್ರೀಡಾಸ್ಪರ್ಧೆಗಳ ಆಯೋಜನೆ

Date:

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಮೇಜರ್ ಧ್ಯಾನ್‌ಚಂದ್ ಚಂದ್‌ರವರ ಜನ್ಮ ದಿನಾಚರಣೆಯ ಅಂಗವಾಗಿ ಆ.29 ರಂದು ರಾಷ್ಟ್ರೀಯ ಕ್ರೀಡಾ ದಿನ ಆಯೋಜಿಸಿದ್ದು, ಈ ಕಾರ್ಯಕ್ರಮದ ಪ್ರಯುಕ್ತ ನಗರದ ವಿವಿಧ ಕ್ರೀಡಾಂಗಣದಲ್ಲಿ ಕ್ರೀಡಾಕೂಟಗಳನ್ನು ಏರ್ಪಡಿಸಲಾಗಿದೆ.
ಅಂದು ಬೆಳಗ್ಗೆ 6.30 ರಿಂದ ನೆಹರೂ ಕ್ರೀಡಾಂಗಣದಲ್ಲಿ 14 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳಿಯರಿಗೆ 5 ಕಿ.ಮೀ. ಮ್ಯಾರಾಥಾನ್ , ಬೆಳಗ್ಗೆ 9.00 ರಿಂದ ವಾಜಪೇಯಿ ಕ್ರೀಡಾಂಗಣದಲ್ಲಿ 16 ವರ್ಷ ಒಳಪಟ್ಟು ಪುರುಷರು ಮತ್ತು ಮಹಿಳಿಯರಿಗೆ (ಪೆನಾಲ್ಟಿ ಶೂಟೌಟ್) ಹಾಕಿ, ಬೆಳಗ್ಗೆ 11.00 ರಿಂದ ಗೋಪಾಳ ಕ್ರೀಡಾ ಸಂಕೀರ್ಣದಲ್ಲಿ 14 ವರ್ಷ ಮೇಲ್ಪಟ್ಟ ಪುರುಷರಿಗೆ ಟೇಬಲ್ ಟೆನ್ನಿಸ್ ಹಾಗೂ ಸಂಜೆ 4.00 ರಿಂದ ನೆಹರೂ ಕ್ರೀಡಾಂಗಣದಲ್ಲಿ ಮಹಿಳೆಯರಿಗೆ ಹಗ್ಗ ಜಗ್ಗಾಟ ಕ್ರೀಡೆಗಳನ್ನು ಆಯೋಜಿಸಲಾಗಿದೆ.
Department of Youth Empowerment and Sports ಮ್ಯಾರಾಥಾನ್ ವಿಜೇತರಿಗೆ ಪ್ರಥಮ ಬಹುಮಾನ ರೂ. 4,000-, ದ್ವಿತಿಯ ರೂ. 3,000- ತೃತೀಯ ರೂ. 2,000 ಹಾಗೂ ಎರಡು ಸಮಾಧಾನಕರ ತಲಾ ರೂ.1000- ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಗುವುದು. ಇತರೆ ಕ್ರೀಡಾ ಸ್ಪರ್ಧೆ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಪಾರಿತೋಷಕ ನೀಡಲಾಗುವುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ ಇವರನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...