Thursday, June 18, 2026
Thursday, June 18, 2026

Sahana Chethan Sahachetana ಆಗಸ್ಟ್ 30 ರಿಂದ ಸಹಚೇತನ ನಾಟ್ಯಾಲಯದಿಂದ 13 ನೇ ನಾಟ್ಯಾರಾಧನ

Date:

Sahana Chethan Sahachetana ಭಾರತದ ವೈವಿಧ್ಯಮಯ ನೃತ್ಯ ಶೈಲಿಗಳನ್ನು ಒಂದೇ ವೇದಿಕೆಯಲ್ಲಿ ನೋಡುವ ಅವಕಾಶವನ್ನು ಸಹಚೇತನ ನಾಟ್ಯಾಲಯ ನಗರದ ನಾಗರಿಕೆ ಒದಗಿಸಿದೆ.

ನಾಟ್ಯಾರಾಧನವನ್ನು 13 ನೇ ವರ್ಷ ಏರ್ಪಡಿಸಿದೆ. ಆ.30,32 ಹಾಗೂ ಸೆಪ್ಟೆಂಬರ್ 01 ರಂದು ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಪ್ರತೀ ದಿನ ಸಂಜೆ 6 ರಿಂದ ಜರುಗಲಿದೆ ಎಂದು ನಾಟ್ಯಾಲಯದ ನೃತ್ಯಗುರು ಸಹನಾ ಚೇತನ್ ತಿಳಿಸಿದರು.

ಪ್ರೆಸ್ ಟ್ರಸ್ಟಿನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಆಗಸ್ಟ್ 30 ರ ಶುಕ್ರವಾರ ನಾಟ್ಯಾಲಯದ ಎಲ್ಲಾ 175 ಮಕ್ಕಳು ರುದ್ರಾಭಿಸಾರ – ನಟರಾಜನವಿಶೇಷ ಕೀರ್ತನೆಗಳ ಸರಮಾಲೆಯನ್ನು ಪ್ರಸ್ತುತಪಡಿಸಲಿದ್ದಾರೆ. ಮೂರು ವರ್ಷದಿಂದ ನಲವತ್ತು ವಯಸ್ಸಿನ ವಿದ್ಯಾರ್ಥಿಗಳು ಇದರಲ್ಲಿ ಭಗವಹಿಸುವರು ಎಂದರು.

Sahana Chethan Sahachetana ಆಗಸ್ಟ್ 31ರ ಶನಿವಾರ ನೃತ್ಯಗುರು ಸಹನಾ ಚೇತನ್ ಲಲಿತಾರ್ಣವ – ಆದಿಶಂಕರಾಚಾರ್ಯರು ರಚಿಸಿರುವ ಲಲಿತಾ ಪಂಚಕಮ್ ಜೊತೆಗೆ ಕಾಮಾಕ್ಷಿ ಸುಪ್ರಭಾತಮ್ ಹಾಗೂ ದೇವಿ ಲಲಿತೆಯ ಕೀರ್ತನೆಗಳನ್ನು ತಮ್ಮ ಏಕವ್ಯಕ್ತಿ ನೃತ್ಯರೂಪಕದಲ್ಲಿ ಪ್ರಸ್ತುತ ಪಡಿಸಲಿದ್ದಾರೆ. ತದನಂತರ ನಾಟ್ಯಾಲಯದ ಹಿರಿಯ ವಿದ್ಯಾರ್ಥಿಗಳು ಹರಿದಾಸಕೂಟ ನೃತ್ಯರೂಪಕವನ್ನು ಪ್ರಸ್ತುತಪಡಿಸುವರು ಎಂದರು.
ಸೆಪ್ಟೆಂಬರ್ 1 ರ ಭಾನುವಾರ ಅಂತರಾಷ್ಟ್ರೀಯ ಖ್ಯಾತನಾಮರಾದ 2 ತಂಡಗಳು ಶಿವಮೊಗ್ಗೆಗೆ ಆಗಮಿಸಲಿವೆ.

ದೇಶವಿದೇಶಗಳಲ್ಲಿ, ಯೂಟ್ಯೂಬ್‌ನಲ್ಲಿ ಹೆಚ್ಚಿನ ವೀಕ್ಷಣೆ ಹಾಗೂ ಹಿಂಬಾಲಕರನ್ನು ಹೊಂದಿರುವ ಚೆನ್ನೈನ ಶ್ರೀದೇವಿ ನೃತ್ಯಾಲಯ ಭರತನಾಟ್ಯವನ್ನು ವಿಭಿನ್ನ ರೀತಿಯಲ್ಲಿ ನರ್ತಿಸಲಿದ್ದಾರೆ. ಮತ್ತೊಂದು ತಂಡವೆಂದರೆ, ಮಹಾರಾಷ್ಟ್ರದ ಪುರಸ್ಕಾರ್ ಡಾನ್ಸ್ ಅಕಾಡೆಮಿ ಲಾವಣಿ, ಕೋಳಿ ನೃತ್ಯ, ಗೋಂಡಾಲ್, ಗಾವಾಲನ್ ಇತ್ಯಾದಿ ನೃತ್ಯಗಳನ್ನು ಪ್ರದರ್ಶಿಸಲಿದ್ದಾರೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...