Monday, February 2, 2026
Monday, February 2, 2026

High Court ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ನೀಡಿದ ಜಾಮೀನು ರದ್ದತಿ‌ ಬಗ್ಗೆ ಕೋರಿದ್ದ ಎಸ್ ಐ ಟಿ ಅರ್ಜಿ ವಜಾ

Date:

High Court ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೆಚ್.ಡಿ.ರೇವಣ್ಣ ಅವರಿಗೆ ನೀಡಲಾಗಿರುವ ಜಾಮೀನು ರದ್ದುಗೊಳಿಸುವಂತೆ ಕೋರಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಎಸ್‌ಐಟಿ ವಾದ ಆಲಿಸಿದ ನಂತರ ಆಗಸ್ಟ್ 1 ರಂದು ಆದೇಶ ಕಾಯ್ದಿರಿಸಿತ್ತು. ರೇವಣ್ಣ ಅವರಿಗೆ ವಿಶೇಷ ನ್ಯಾಯಾಲಯ ಮೇ 13ರಂದು ಜಾಮೀನು ನೀಡಿದೆ.

High Court ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದ ಬೆನ್ನಲ್ಲೇ, ಪ್ರಕರಣದ ಸಂತ್ರಸ್ತೆ ಎನ್ನಲಾದ ಮಹಿಳೆಯನ್ನು ಅಪಹರಿಸಿದ ಆರೋಪ ಶಾಸಕ ಹೆಚ್‌.ಡಿ ರೇವಣ್ಣ ಮೇಲಿದೆ. ಸಂತ್ರಸ್ತೆ ಪ್ರಜ್ವಲ್ ರೇವಣ್ಣ ವಿರುದ್ದ ದೂರು ನೀಡದಂತೆ ತಡೆಯಲು ಆಕೆಯನ್ನು ರೇವಣ್ಣ ಅಪಹರಣ ಮಾಡಿಸಿದ್ದರು ಎನ್ನಲಾಗಿದೆ.

ಈ ಸಂಬಂಧ ಮಹಿಳೆಯ ಮಗ ದೂರು ದಾಖಲಿಸಿದ್ದರು. ಎಸ್‌ಐಟಿ ರೇವಣ್ಣ ಅವರನ್ನು ಬಂಧಿಸಿತ್ತು.

ಇತರ ಆರೋಪಿಗಳಿಗೂ ಜಾಮೀನು
ಇದೇ ವೇಳೆ ಅಪಹರಣ ಪ್ರಕರಣದ ಇತರೆ ಆರೋಪಿಗಳಾದ ಹಾಸನದ ಸತೀಶ್‌ ಬಾಬು ಅಲಿಯಾಸ್‌ ಸತೀಶ್‌ ಬಾಬಣ್ಣ, ಹೆಚ್‌ ಕೆ ಸುಜಯ್‌, ಹೆಚ್‌ ಎನ್‌ ಮಧು, ಎಸ್‌ ಟಿ ಕೀರ್ತಿ, ಹೆಚ್‌ ಡಿ ಮಾಯು ಗೌಡ, ಕೆ ಎ ರಾಜಗೋಪಾಲ್‌ ಅವರಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...