Monday, February 2, 2026
Monday, February 2, 2026

Plant for Mother “ಪ್ಲಾಂಟ್ ಫಾರ್ ಮದರ್ ” ಅಭಿಯಾನ ಆರಂಭ

Date:

Plant for Mother ಶಿವಮೊಗ್ಗ ಆ.29 (ಕರ್ನಾಟಕ ವಾರ್ತೆ) ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ‘ಪ್ಲಾಂಟ್ ಫಾರ್ ಮದರ್’ ಅಭಿಯಾದ ಅಂಗವಾಗಿ ಆ.29 ರಂದು ಶಿವಮೊಗ್ಗದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ನಡೆಸಲಾಯಿತು.
ಭಾರತದ ಪ್ರಧಾನ ಮಂತ್ರಿಗಳು 2024 ರ ಜೂನ್ 5 ರಂದು ವಿಶ್ವ ಪರಿಸರ ದಿನದ ಸಂದರ್ಭದಲ್ಲಿ ಜಾಗತಿಕವಾಗಿ ಹವಾಮಾನ ಬದಲಾವಣೆಯನ್ನು ನಿಯಂತ್ರಿಸುವ ಸಲುವಾಗಿ ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಡುವ ಪ್ಲಾಂಟ್ ಫಾರ್ ಮದರ್ ಅಭಿಯಾನಕ್ಕೆ ಚಾಲನೆ ನೀಡಿದ್ದರು.
Plant for Mother ಈ ಅಭಿಯಾನದಡಿ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಗಾಗಿ 2024 ರ ಸೆಪ್ಟೆಂಬರ್ ವೇಳೆಗೆ ದೇಶದಾದ್ಯಂತ 80 ಕೋಟಿ ಸಸಿಗಳನ್ನು ಮತ್ತು 2025 ರ ಮಾರ್ಚ್ ವೇಳೆಗೆ 140 ಕೋಟಿ ಸಸಿಗಳನ್ನು ನೆಡುವ ಗುರಿಯನ್ನು ಹೊಂದಿದೆ. ಈ ಅಭಿಯಾನದ ಒಂದು ಭಾಗವಾಗಿ ಆಗಸ್ಟ್ 29 ರಂದು ಭಾರತ ಸರ್ಕಾರದ ಕೃಷಿ ಸಚಿವರು, ಕೃಷಿ ಅನುಸಂಧಾನ ಪರಿಷತ್‌ನ ಕ್ಯಾಂಪಸ್‌ನಲ್ಲಿ ಒಂದು ಎಕರೆ ಪ್ರದೇಶದಲ್ಲಿಸಸಿಗಳನ್ನು ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದೆ.
ಇದರ ಭಾಗವಾಗಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆ.29 ರಂದು ರೈತರೊಡಗೂಡಿ ತಾಯಿಯ ಹೆಸರಿನಲ್ಲಿ ಒಂದು ಗಿಡ ನೆಡುವ ಪ್ಲಾಂಟ್ ಫಾರ್ ಮದರ್ ಅಭಿಯಾನವನ್ನು ಕೈಗೊಂಡು 100 ಸಸಿಗಳನ್ನು ನೆಡಲಾಯಿತು. ಸೊರಬದ ಪ್ರಗತಿಪರ ರೈತರಾದ ವೀರಪ್ಪನಾಯಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ.ಬಿ.ಸಿ.ಹನುಮಂತಸ್ವಾಮಿ, ಡಾ.ಸಿ.ಸುನಿಲ್, ಡಾ.ಎನ್.ಸುಧಾರಾಣಿ, ವಿಜ್ಞಾನಿ ಭರತ್ ಕುಮಾರ್, ತಾಂತ್ರಿಕ ಸಿಬ್ಬಂದಿಗಳು, ವಿದ್ಯಾರ್ಥಿಗಳು, 30 ಜನರೈತ ಮಹಿಳೆಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...