Monday, December 15, 2025
Monday, December 15, 2025

Dr. H.B Manjunath ಸಾಧನೆಗೆ ಜೀವನ ಶಿಸ್ತು ಮುಖ್ಯ-ಡಾ.ಎಚ್.ಬಿ.ಮಂಜುನಾಥ್

Date:

Dr. H.B Manjunath “ಸಾಧನೆಗೆ ಜೀವನ ಶಿಸ್ತು ಮುಖ್ಯ” -ಬಾಪೂಜಿ ಹೈಟೆಕ್ ಬಿಕಾಂ ಪೀಠಿಕಾ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಡಾ ಎಚ್ ಬಿ ಮಂಜುನಾಥ- ದಾವಣಗೆರೆ.ಆ.29. ಜೀವನದಲ್ಲಿ ಯಾವುದೇ ಸಾಧನೆ ಮಾಡಬೇಕೆಂದರೂ ಶಿಸ್ತು ಅತಿ ಮುಖ್ಯ, ಶಿಸ್ತುಬದ್ಧ ಕಾರ್ಯಗಳು ಒಂದಕ್ಕೊಂದು ಹೊಂದಿಕೊಂಡು ಸಫಲತೆ ತಂದುಕೊಡುತ್ತವೆ ಎಂದು ಹಿರಿಯ ಪತ್ರಕರ್ತ ಡಾ ಎಚ್ ಬಿ ಮಂಜುನಾಥ ಹೇಳಿದರು. ಅವರಿಂದು ಬಾಪೂಜಿ ಹೈಟೆಕ್ ಕಾಲೇಜಿನ ನೂತನ ಬಿಕಾಂ ವಿದ್ಯಾರ್ಥಿಗಳ ‘ಪೀಠಿಕಾ'(ಓರಿಯಂಟೇಷನ್) ಕಾರ್ಯಕ್ರಮದಲ್ಲಿ ‘ಜೀವನಶಿಸ್ತು’ ಎನ್ನುವ ವಿಷಯವಾಗಿ ವಿಶೇಷ ಉಪನ್ಯಾಸ ನೀಡುತ್ತಾ ವಿದ್ಯಾರ್ಥಿಗಳು ಜೀವನದಲ್ಲಿ ಶೈಕ್ಷಣಿಕ ಶಿಸ್ತು ಅಂದರೆ ಅಂದಂದಿನ ಪಾಠ ಪ್ರವಚನಗಳನ್ನು ಅಂದೇ ಅರ್ಥ ಮಾಡಿಕೊಂಡು ಮನದಟ್ಟು ಮಾಡಿಕೊಳ್ಳುವುದು, ಪ್ರಶ್ನೆಗಳು ಸಂದೇಹಗಳು ಎದುರಾದಲ್ಲಿ ತಕ್ಷಣವೇ ಶಿಕ್ಷಕರನ್ನು ಸಂಪರ್ಕಿಸಿ ಪರಿಹಾರ ಪಡೆಯುವುದು, ಆಗ ಪರೀಕ್ಷಾ ಭಯವೂ ಇರುವುದಿಲ್ಲ, Dr. H.B Manjunath ಸಾಧನೆಗೆ ಜೀವನ ಶಿಸ್ತು ಮುಖ್ಯ-ಡಾ.ಎಚ್.ಬಿ.ಮಂಜುನಾಥ್ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾಗುವ ಅವಕಾಶವೂ ಹೆಚ್ಚುತ್ತದೆ ಎಂದರಲ್ಲದೆ ಬದುಕಿನಲ್ಲಿ ಸಂವಿಧಾನದತ್ತ ಹಕ್ಕುಗಳಿಗಿಂತ ಕರ್ತವ್ಯಗಳ ಕಡೆಗೆ ಹೆಚ್ಚಿನ ಗಮನ ಕೊಡಬೇಕು, ಇದನ್ನು ರಾಷ್ಟ್ರೀಯ ಶಿಸ್ತು ಎನ್ನಬಹುದು, ಇದರಿಂದ ರಾಷ್ಟ್ರಾಭಿವೃದ್ಧಿ ಸಾಧ್ಯ ಎಂಬುದನ್ನು ನಿದರ್ಶನಗಳ ಸಹಿತ ವಿವರಿಸಿದರು. ದೇಶದಲ್ಲಿ ವಾರ್ಷಿಕ ಸುಮಾರು ಒಂದು ಕೋಟಿ ಪದವಿ ಹಾಗೂ ಡಿಪ್ಲೋಮೋ ದಾರರು ಹೊರಬರುತ್ತಿದ್ದು ಇದರಲ್ಲಿ ದೇಶದ ಸುಮಾರು 962 ವಿಶ್ವವಿದ್ಯಾಲಯಗಳ 38160 ಕಾಲೇಜುಗಳಿಂದ ಸುಮಾರು 25 ಲಕ್ಷದಷ್ಟು ಸಾಮಾನ್ಯ ಪದವೀಧರರು ಹೊರಬರುತ್ತಿದ್ದಾರೆ, ಇವರಲ್ಲಿ ಶೇಕಡ 70ರಷ್ಟು ಬಿಕಾಂ ಪದವೀಧರರೇ ಆಗಿರುತ್ತಾರೆ, ವಾಣಿಜ್ಯ ಪದವೀಧರರಿಗೆ ಕೈಗಾರಿಕೋದ್ಯಮ ರಂಗದಲ್ಲಿ ಉತ್ತಮ ಅವಕಾಶಗಳಿವೆ ಎಂದು ಹೇಳಿದರು. ಕಾಲೇಜಿನ ನಿರ್ದೇಶಕ ಡಾ. ಸ್ವಾಮಿ ತ್ರಿಭುವಾನಂದ ಡಾ.ಎಚ್.ಬಿ. ಮಂಜುನಾಥರನ್ನು ಸನ್ಮಾನಿಸಿ ಗೌರವಿಸಿದರು. ಪ್ರೊಫೆಸರುಗಳಾದ ಮಂಜುನಾಥ ಬಿ ಬಿ, ಜ್ಞಾನೇಶ್ವರ ಆರ್ ಎಸ್, ಲತಾ ಓ ಹೆಚ್, ಶ್ವೇತಾ ಬಿ ವಿ, ಮಂಜುಳಾ ಎ ಎನ್, ಕಾಂಚನಾ ಟಿ ಎಸ್, ನಾಗರಾಜ್ ಎಂ ಎಸ್ ಉಪಸ್ಥಿತರಿದ್ದು ಅಕಿಲ್ ಅನ್ವರ್, ಉಜ್ಮಾ ನಾಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಉಪನ್ಯಾಸಕರ ಪರಿಚಯವನ್ನು ತನ್ಮಯಿ ಮಾಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...