Friday, March 20, 2026
Friday, March 20, 2026

Shimoga News ಸೆ.1 ರಂದು ರಾಜ್ಯಮಟ್ಟದ 34 ನೇ ಸಂಸ್ಕೃತ ಭಾಷಣ ಸ್ಪರ್ಧೆ

Date:

Shimoga News ಶಿವಮೊಗ್ಗ ನಗರದ ಸಂಸ್ಕೃತ ಭಾರತೀ ಮತ್ತು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಯ ವತಿಯಿಂದ ಸಂಸ್ಕೃತೋತ್ಸವದ ಪ್ರಯುಕ್ತ ದಿನಾಂಕ: ೦೧.೦೯.೨೦೨೪ ರ ಭಾನುವಾರ ಬೆಳಿಗ್ಗೆ ೯.೩೦ಕ್ಕೆ ಸಂಸ್ಕೃತ ಮಹಾ ವಿದ್ಯಾಲಯದ ವಿದ್ಯಾರ್ಥಿಗಳಿಗೆ ದೇವತಾತ್ಮ ಹಿಮಾಲಯ-ಭಾರತಾತ್ಮ ಸಂಸ್ಕೃತಮ್ ಎಂಬ ವಿಷಯದ ಬಗ್ಗೆ ಕರ್ನಾಟಕ ರಾಜ್ಯ ಮಟ್ಟದ “೩೪ ನೇ ಸಂಸ್ಕೃತ ಭಾಷಣ ಸ್ಪರ್ಧೆ” ಯನ್ನು ಶಿವಮೊಗ್ಗ ನಗರದ ಸಂಸ್ಕೃತ ಭವನದಲ್ಲಿ ಏರ್ಪಡಿಸಲಾಗಿದೆ.
ರಾಜ್ಯದ ವಿವಿದ ಪಾಠಶಾಲಾಗಳಿಂದ ೨೫ ಜನ ಸ್ಪರ್ಧಿಗಳು ಭಾಗವಹಿಸಿ ಸಂಸ್ಕೃತದಲ್ಲಿ ಭಾಷಣ ಮಾಡಲಿದ್ದಾರೆ. ಆಸಕ್ತ ಸಂಸ್ಕೃತ ವಿದ್ಯಾರ್ಥಿಗಳು, ನಾಗರೀಕರು, ಸಂಸ್ಕೃತ ಉಪನ್ಯಾಸಕರು, ಪಂಡಿತರು ಕಾರ್ಯಕ್ರಮದಲ್ಲಿ ಮುಕ್ತವಾಗಿ ಭಾಗವಹಿಸಬಹುದು ಎಂದು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಯ ಅಧ್ಯಕ್ಷ ಟಿ.ವಿ.ನರಸಿಂಹಮೂರ್ತಿ ತಿಳಿಸಿದ್ದಾರೆ.
ಸಂಜೆ ೪.೩೦ ಕ್ಕೆ ಸಮಾರೋಪ ಸಮಾರಂಭ:
Shimoga News ಸಂಸ್ಕೃತ ಬಾರತೀ ಹಾಗೂ ತರುಣೋದಯ ಸಂಸ್ಕೃತ ಸೇವಾ ಸಂಸ್ಥೆ ವತಿಯಿಂದ ಒಂದು ತಿಂಗಳುಕಾಲ ನಡೆಸುತ್ತಿರುವ ಸಂಸ್ಕೃತ ಉತ್ಸವದ ಸಮಾರೋಪ ಸಮಾರಂಭವು ದಿನಾಂಕ ೦೧.೦೯.೨೪ ರ ಸಂಜೆ ೪.೩೦ ಕ್ಕೆ ಭಾನುವಾರ ಶಿವಮೊಗ್ಗ ನಗರದ ಬಿ.ಬಿ.ರಸ್ತೆಯಲ್ಲಿರುವ ಸಂಸ್ಕೃತ ಭವನದಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಪಿ.ಯು.ಸಿ. ಮತ್ತು ಹತ್ತನೇ ತರಗತಿಯಲ್ಲಿ ಸಂಸ್ಕೃತದಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು, ನಾಗರೀಕರು, ಸಂಸ್ಕೃತ ಉಪನ್ಯಾಸಕರು, ಪಂಡಿತರು ಕಾರ್ಯಕ್ರಮದಲ್ಲಿ ಮುಕ್ತವಾಗಿ ಭಾಗವಹಿಸಬಹುದು ಎಂದು ತರುಣೋದಯ ಸಂಸ್ಕೃತ ಸೇವಾ ಸಂಸ್ಥೆಯ ಅಧ್ಯಕ್ಷ ಟಿ.ವಿ.ನರಸಿಂಹಮೂರ್ತಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...